ಒಂದೇ ಬಾರಿಗೆ 6 ಶಿಕ್ಷಕರ ವರ್ಗ: ಶಾಸಕರಿಗೆ ದೂರು
ಅತಿ ಹೆಚ್ಚು ಮಕ್ಕಳ ದಾಖಲಾತಿಯ ಕೊಂಬೆಟ್ಟು ಸರಕಾರಿ ಶಾಲೆಗೆ ಹೊಡೆತ
Team Udayavani, Jun 27, 2019, 5:14 AM IST
ನಗರ: ಸರಕಾರಿ ಶಾಲೆಗೆ ಮಕ್ಕಳ ಸೇರ್ಪಡೆಯನ್ನು ಹೆಚ್ಚಿಸುವ ‘ಕಲನ’ದಂತಹ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಯಶಸ್ಸು ಕಂಡ ಶತಮಾನದ ಇತಿಹಾಸವನ್ನು ಹೊಂದಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಗೆ ಒಂದೇ ಬಾರಿಗೆ 6 ಶಿಕ್ಷಕರ ವರ್ಗಾವಣೆಯ ಸಹಿತ ಈ ಬಾರಿ 9 ಶಿಕ್ಷಕರು ಶಾಲೆಯಿಂದ ವಿಮುಖರಾಗುವ ಹೊಡೆತ ಬಿದ್ದಿದೆ.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶಾಲೆಯಲ್ಲಿ 24 ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಮೂವರು ಶಿಕ್ಷಕರು ಎಪ್ರಿಲ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದಾರೆ. ಉಳಿದ 21 ಶಿಕ್ಷಕರ ಪೈಕಿ ಒಬ್ಬರು ದೈ.ಶಿ. ಶಿಕ್ಷಕರು, ಇನ್ನೊಬ್ಬರು ಚಿತ್ರಕಲಾ ಶಿಕ್ಷಕರು. ವಿಷಯ ಬೋಧನೆಗೆ 19 ಶಿಕ್ಷಕರಿದ್ದರು. ಈಗ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ಸರಕಾರದ ಮಾನದಂಡದ ಪ್ರಕಾರ 6 ಮಂದಿಗೆ ವರ್ಗಾವಣೆಯಾಗಿದ್ದು, ಮಂಗಳೂರಿನಲ್ಲಿ ನಡೆದ ಕೌನ್ಸೆಲಿಂಗ್ನಲ್ಲಿ ಇವರೆಲ್ಲರೂ ಬೇರೆ ಶಾಲೆಗಳಿಗೆ ವರ್ಗಾವಣೆ ಆದೇಶ ಪಡೆದುಕೊಂಡಿದ್ದಾರೆ. ಆ ಮೂಲಕ ತಾಲೂಕಿನಲ್ಲೇ ಅತಿ ಹೆಚ್ಚು 654 ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಶಾಲೆಗೆ ತೀವ್ರ ಆಘಾತ ಎದುರಾಗಿದೆ. ಈ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲು ಅಧ್ಯಾಪಕರೆಲ್ಲರೂ ಸೇರಿಕೊಂಡು ಮಾಡಿದ ಕಲನ ವಿಶೇಷ ಮಕ್ಕಳ ಸೇರ್ಪಡೆ ಅಭಿಯಾನದ ಮೂಲಕ 325 ಮಕ್ಕಳು ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡಿದ್ದರು.
15 ಶಿಕ್ಷಕರು ಮಾತ್ರ
ಪ್ರಸ್ತುತ ಶಾಲೆಯ ಶಿಕ್ಷಕರಾದ ಕವಿತಾ ಡಿ.ಎಂ., ಮಾಲಿನಿ ಕೆ.ಎನ್., ಪೂರ್ಣಿಮಾ ನಾಯಕ್, ವಿನುತಾ, ವಸಂತಿ ಕುಮಾರಿ ಮತ್ತು ಉಮೇರ್ ತಬಸ್ಸಮ್ ವರ್ಗಾವಣೆಗೊಂಡಿದ್ದಾರೆ. ಶಾಲೆಯಲ್ಲಿ 15 ಶಿಕ್ಷಕರು ಮಾತ್ರ ಉಳಿದುಕೊಂಡಿರುವುದು ಅಷ್ಟೊಂದು ಮಕ್ಕಳಿಗೆ ಪಾಠ ಮಾಡಲು ಹೊರೆಯಾಗಬಹುದು ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
325 ಹೊಸ ದಾಖಲಾತಿ
ಸರಕಾರಿ ಶಾಲೆಯಲ್ಲಿ ಈ ವರ್ಷ ನಡೆಸಿದ ವಿಶೇಷ ದಾಖಲಾತಿ ಪ್ರಚಾ ರಾಂದೋಲನದ ಪರಿಣಾಮವಾಗಿ 325 ಹೊಸ ವಿದ್ಯಾರ್ಥಿಗಳು ದಾಖಲಾಗಿದ್ದರು. ಹೀಗಾಗಿ ಈ ಶಾಲೆಗೆ ಶಿಕ್ಷಕರ ಪ್ರಮಾಣದಲ್ಲಿ ವಿಶೇಷ ಆದ್ಯತೆ ನೀಡಬೇಕಿತ್ತು.
ಒಮ್ಮೆಲೇ 6 ಶಿಕ್ಷಕರ ವರ್ಗ ಮಾಡಿರುವುದು ವಿಷಾದದ ಸಂಗತಿ. ಡಿಡಿಪಿಐ ಜತೆ ಮಾತನಾಡಿದ ಸಂದರ್ಭ ಸರಕಾರದ ಸುತ್ತೋಲೆಯಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ ಎಂದು ಎಸ್ಡಿಎಂಸಿ ಕಾರ್ಯಾಧ್ಯಕ್ಷ, ನಗರಸಭೆ ಸದಸ್ಯರೂ ಆದ ಪಿ.ಜಿ. ಜಗನ್ನಿವಾಸ ರಾವ್ ಹೇಳಿದ್ದಾರೆ.
ಶಾಸಕರಿಗೆ ದೂರು
ಶಾಲೆಯಿಂದ 6 ಶಿಕ್ಷಕರನ್ನು ಒಂದೇ ಬಾರಿಗೆ ವರ್ಗಾವಣೆ ಮಾಡಿರುವ ಕುರಿತು ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಹೆತ್ತವರು ಸೇರಿಕೊಂಡು ಶಾಲಾ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು ಅವರಿಗೆ ದೂರಿನ ಮನವಿ ಸಲ್ಲಿಸಿದ್ದಾರೆ. ಶಾಲೆಯ ಪ್ರಗತಿಯ ದೃಷ್ಟಿಯಿಂದ ಶಿಕ್ಷಕರನ್ನು ಉಳಿಸಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ. ಕಾರ್ಯಾಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಪೋಷಕ ಸುರೇಶ್ ಪಡಂಬೈಲು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದಾರೆ. ಶಾಸಕರು ಗುರುವಾರ ಬೆಂಗಳೂರಿನಲ್ಲಿ ಇಲಾಖಾಧಿಕಾರಿಗಳ ಜತೆ ಮಾತನಾಡುವ ಭರವಸೆ ನೀಡಿದ್ದಾರೆ.
– ಪಿ.ಜಿ. ಜಗನ್ನಿವಾಸ ರಾವ್ ಎಸ್ಡಿಎಂಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು