ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಸ್ಥಗಿತ

15 ಲಕ್ಷ ರೂ. ಅನುದಾನದೊಂದಿಗೆ ಚಾಲನೆ

Team Udayavani, Sep 10, 2019, 5:24 AM IST

y-30

ಆಲಂಕಾರು: ಕಡಬ ತಾಲೂಕು ಆಲಂಕಾರು ಪೇಟೆಯಲ್ಲಿ ಜಿ.ಪಂ. ಅನುದಾನದ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಸ್ಥಗಿತಗೊಂಡಿದ್ದು, ಸ್ಥಳೀಯಾಡಳಿತ ಸೂಕ್ತ ಕ್ರಮ ಕೈಗೊಳ್ಳದೆ ಹಳ್ಳ ಹಿಡಿದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಜಿಲ್ಲಾ ಪಂಚಾಯತ್‌ನ 15 ಲಕ್ಷ ರೂ. ಅನುದಾನದೊಂದಿಗೆ 2016ರಲ್ಲಿ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಘಟಕ ನಿರ್ಮಾಣಕ್ಕೆ ಸೂಚಿಸಿರುವ ಸ್ಥಳ ಸೂಕ್ತವಲ್ಲ ಎಂದು ಕಾಮಗಾರಿ ಪ್ರಾರಂಭಿಸದಂತೆ ಗುತ್ತಿಗೆದಾರ ಸಂಸ್ಥೆ ಕೆಆರ್‌ಡಿಎಲ್‌ಗೆ ಜಿ.ಪಂ. ಸೂಚನೆ ನೀಡಿತ್ತು. ಈ ನಡುವೆಯೂ ಆಮೆಗತಿಯಲ್ಲಿ ಸಾಗಿದ ಕಾಮಗಾರಿ ಒಂದು ವರ್ಷದ ಬಳಿಕ ಪೂರ್ಣಗೊಂಡಿತು. ಇದೀಗ ಕಾಮಗಾರಿ ಪೂರ್ಣಗೊಂಡು ವರ್ಷ ಮೂರು ಸಂದರೂ ಶುದ್ಧ ನೀರಿನ ಘಟಕದ ಬಳಕೆ ಮರೀಚಿಕೆಯಾಗಿದೆ.

ಕಾಮಗಾರಿ ಪ್ರಗತಿಯಲ್ಲಿ…
ಪುತ್ತೂರು ತಾಲೂಕಿನ 13 ಕಡೆಗಳಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಲಾಗುವುದು. ಕೆಲವೊಂದು ಕಡೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಮತ್ತೆ ಹಲವು ಕಡೆಗಳಲ್ಲಿ ಪ್ರಗತಿಯಲ್ಲಿದೆ. ಕೆಲವು ಘಟಕಗಳ ಕಾಮಗಾರಿ ಪೂರ್ಣ ಗೊಂಡಿದ್ದರೂ ಇದೀಗ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಅಂತಹ ಘಟಕಗಳನ್ನು ದುರಸ್ತಿಗೊಳಿಸಿ ಸ್ಥಳೀಯಾಡಳಿತದ ಅಧೀನಕ್ಕೆ ಒಳಪಡಿಸಲಾಗುವುದು. 5 ವರ್ಷಗಳ ಅವಧಿಯ ನಿರ್ವಹಣೆಗಾಗಿ ಟೆಂಡರ್‌ ಕರೆಯಲಾಗುವುದು ಎಂದು ಕೆಆರ್‌ಡಿಎಲ್‌ನ ಎಕ್ಸಿಕ್ಯೂಟಿವ್‌ ಎಂಜಿನಿ ಯರ್‌ ಮಹದೇವಪ್ರಸಾದ್‌ 2017ರ ಜೂನ್‌ನಲ್ಲಿ ಮಾಹಿತಿ ನೀಡಿದ್ದರು.

ತಾಲೂಕಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದ ಈ ಯೋಜನೆಗಳು 3 ವರ್ಷಗಳಿಂದ ಬಿಸಿಲು, ಮಳೆ, ಗಾಳಿಗೆ ಮೈಯೊಡ್ಡಿ ನಿಂತಿದ್ದು, ಒಂದೇ ಒಂದು ಹನಿ ಶುದ್ಧ ನೀರು ಹೊರಗೆ ಬಂದಿಲ್ಲ. ಇದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ 1 ರೂಪಾಯಿಯ ನಾಣ್ಯ ಹಾಕಿದರೆ ಒಂದು ಲೀಟರ್‌ ನೀರು ಬರುತ್ತದೆ ಎಂಬ ಕಥೆ ಮಾತ್ರ ಹೇಳುತ್ತಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

 ಗಮನಕ್ಕೆ ತಾರದೆ ನಿರ್ಮಾಣ
ದಕ್ಷಿಣ ಕನ್ನಡ ಜಿಲ್ಲೆಗೆ ಇದು ಸೂಕ್ತ ಯೋಜನೆಯಲ್ಲ. ಈವರೆಗೆ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆ ಮಾತ್ರ ಈ ಕಾಮಗಾರಿಯನ್ನು ಸುಸೂತ್ರ ವಾಗಿ ನಿರ್ಮಿಸಿಕೊಟ್ಟಿದೆ. ಜಿಲ್ಲೆಯ 13 ಸ್ಥಳಗಳಲ್ಲಿ ಕೆಆರ್‌ಡಿಎಲ್‌ ಕಾಮಗಾರಿ ಪ್ರಾರಂಭಿಸಿದ್ದು, ಎಲ್ಲಿಯೂ ಸಮರ್ಪಕವಾಗಿ ನಿರ್ಮಿಸಿಲ್ಲ. ಆಲಂಕಾರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಸ್ಥಳೀಯರ ಆಕ್ಷೇಪವಿದ್ದ ಕಾರಣ ಕಾಮಗಾರಿಯನ್ನು ಪ್ರಾರಂಭಿಸದಂತೆ ಕೆಆರ್‌ಡಿಎಲ್‌ಗೆ ಜಿ.ಪಂ. ಸೂಚಿಸಿತ್ತು. ಜಿ.ಪಂ. ಗಮನಕ್ಕೆ ತಾರದೆ ಘಟಕ ನಿರ್ಮಿಸಲಾಗಿದೆ. ಮುಂದಿನ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸ್ಥಗಿತಗೊಂಡಿರುವ ಘಟಕದ ಕಾಮಗಾರಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಪ್ರಮೀಳಾ ಜನಾರ್ದನ್‌, ಜಿ.ಪಂ. ಸದಸ್ಯೆ

ಜಿ.ಪಂ.ಗೆ ಪತ್ರ
ಘಟಕದ ಬಗ್ಗೆ ಗ್ರಾ.ಪಂ.ಗೆ ಮಾಹಿತಿಯಿಲ್ಲ. ಘಟಕದಲ್ಲಿ ಬಾಕಿಯಿರುವ ಕಾಮಗಾರಿಯನ್ನು ಸ್ಥಳೀಯಾಡಳಿತದಿಂದ ಮುಗಿಸಲು ಅಸಾಧ್ಯ. ನೀರಿನ ಘಟಕವನ್ನು ಗ್ರಾ.ಪಂ.ಗೆ ಹಸ್ತಾಂತರಿಸುವ ಬಗ್ಗೆ ಗುತ್ತಿಗೆ ದಾರರು ಯಾವುದೇ ಮಾಹಿತಿ ನೀಡಿಲ್ಲ. ಎಲ್ಲ ಕಾಮಗಾರಿ ಯನ್ನು ಸಮರ್ಪಕವಾಗಿ ಮುಗಿಸಿ ಹಸ್ತಾಂತರಿಸಿದರೆ ಘಟಕಕ್ಕೆ ನೀರು ಸರಬರಾಜು ಮಾಡಲು ಗ್ರಾ.ಪಂ. ಉತ್ಸುಕವಾಗಿದೆ.
– ಸುನಂದಾ ಬಾರ್ಕುಲಿ, ಗ್ರಾ.ಪಂ. ಅಧ್ಯಕ್ಷೆ, ಆಲಂಕಾರು

- ಸದಾನಂದ ಆಲಂಕಾರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.