ಶುದ್ಧ ನೀರಿನ ಅಭಾವ; ಪಂಪ್‌ಹೌಸ್‌ ಭೇಟಿ


Team Udayavani, Aug 25, 2018, 2:14 PM IST

25-agust-15.jpg

ಸುಳ್ಯ : ಕಲ್ಲುಮುಟ್ಲು ಪಂಪ್‌ ಹೌಸ್‌ನಿಂದ ಕೆಸರು ಮಿಶ್ರಿತ ನೀರು ಪೂರೈಕೆ ಆಗುತ್ತಿದ್ದು, ಮೂರು ದಿನಗಳಿಂದ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಪರ್ಯಾಯ ಮೂಲ ಬಳಸಿ ನಗರಕ್ಕೆ ತತ್‌ಕ್ಷಣ ಶುದ್ಧ ನೀರಿನ ಪೂರೈಕೆ ಮಾಡಬೇಕು. ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಎಚ್ಚರಿಸಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ನ.ಪಂ. ಸದಸ್ಯರು ಹಾಗೂ ಕಾಂಗ್ರೆಸ್‌ ಮುಖಂಡರು ಶುಕ್ರವಾರ ನಗರಕ್ಕೆ ನೀರೊದಗಿಸುವ ಕಲ್ಲುಮುಟ್ಲು ಪಂಪ್‌ಹೌಸ್‌ಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ತತ್‌ಕ್ಷಣ ಸರಿಪಡಿಸುವಂತೆ ಆಗ್ರಹಿಸಿದರು. 

ಒಂದು ಪಂಪ್‌ ಹಾಳಾಗಿದೆ. ಜಾಕ್‌ ವೆಲ್‌ನಲ್ಲಿ ಕೆಸರು ತುಂಬಿ ನೀರೆತ್ತಲು ಸಾಧ್ಯವಾಗುತ್ತಿಲ್ಲ. ಜನರೇಟರ್‌ ಕೂಡ ಕೈ ಕೊಟ್ಟಿದೆ ಎಂದು ಸಿಬಂದಿಗಳು ಮಾಹಿತಿ ನೀಡಿದರು. ಒಂದು ಪಂಪ್‌ ಕೈ ಕೊಟ್ಟಾಗ ಇನ್ನೊಂದು ಪಂಪ್‌ ಬೇಕು. ಅದು ಇಲ್ಲಿ ಇಲ್ಲ. ಯಾಕೆ ಹೀಗೆ ಎಂದು ನ.ಪಂ.ಸದಸ್ಯ ಮುಸ್ತಾಫ‌ ಪ್ರಶ್ನಿಸಿದರು.

2 ಟ್ಯಾಂಕರ್‌ ನೀರು ಪೂರೈಕೆ
ಬಳಿಕ ಸ್ಥಳಕ್ಕೆ ಆಗಮಿಸಿದ ನ.ಪಂ. ಎಂಜಿನಿಯರ್‌ ಶಿವಕುಮಾರ್‌, ಆರೋಗ್ಯಾಧಿಕಾರಿ ರವಿಕೃಷ್ಣ ಅವರು ಬಳಿಯೂ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಲಾಯಿತು. ಉತ್ತರಿಸಿದ ಎಂಜಿನಿಯರ್‌, ಕೆಸರು ಮಿಶ್ರಿತ ನೀರು ಬಳಸುವಂತಿಲ್ಲ. ಹಾಗಾಗಿ ಕೊಳವೆ ಬಾವಿ ಹಾಗೂ ಎರಡು ಟ್ಯಾಂಕರ್‌ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಕಳೆದ ನಾಲ್ಕೈದು ವರ್ಷಗಳಿಂದ ಹೊಸ ಟ್ಯಾಂಕರ್‌ ಖರೀದಿಸಿ ಎಂದು ನ.ಪಂ.ಸಭೆಯಲ್ಲಿ ಒತ್ತಾಯ ಹೇರಿದರೂ ಖರೀದಿಸಿಲ್ಲ. ನಗರದಲ್ಲಿ ಶುದ್ಧ ನೀರಿನ ಅಭಾವವಿದ್ದರೂ ತುರ್ತು ಸಭೆ ಕೂಡ ಕರೆದಿಲ್ಲ ಎಂದು ಮುಸ್ತಾಫಾ ಅಸಮಾಧಾನ ವ್ಯಕ್ತಪಡಿಸಿದರು.

ಎರಡು ಟ್ಯಾಂಕರ್‌ ಸಾಲದು. ಹೆಚ್ಚುವರಿಯಾಗಿ ಮಂಗಳೂರಿನಿಂದ ತರಿಸಿ. ಅಲ್ಲದೆ ನಗರದಲ್ಲಿ ಕೆರೆ, ಬಾವಿ, ಕೊಳವೆಬಾವಿಗಳು ಸಾಕಷ್ಟು ಇವೆ. ಇವುಗಳನ್ನು ಬಳಸಿದರೆ ನದಿ ನೀರಿನ ಆವಶ್ಯಕತೆ ಇಲ್ಲ. ಕೆರೆಮೂಲೆಯಲ್ಲಿ ಬಾವಿಗೆ ಪಂಪ್‌ ಅಳವಡಿಸುವಂತೆ ವೆಂಕಪ್ಪ ಗೌಡ, ಮುಸ್ತಾಫ‌ ಕೆ.ಎಂ., ದಿನೇಶ್‌ ಅಂಬೆಕಲ್ಲು ಹೇಳಿದರು. ನ.ಪಂ.ಸದಸ್ಯರಾದ ಪ್ರೇಮಾ ಟೀಚರ್‌, ಶ್ರೀಲತಾ ಪ್ರಸನ್ನ, ಶಿವಕುಮಾರ್‌ ಕಂದಡ್ಕ, ಕಾಂಗ್ರೆಸ್‌ ಮುಖಂಡರಾದ ಸಿದ್ದಿಕ್‌ ಕೊಕ್ಕೊ, ಶರೀಫ್ ಕಂಠಿ, ಭವಾನಿಶಂಕರ ಕಲ್ಮಡ್ಕ, ರಿಯಾಜ್‌ ಕಟ್ಟೆಕ್ಕಾರ್‌, ಗಣೇಶ್‌ ಟೈಲರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.