Uppinangady ಬೈಕ್ ಮಗುಚಿ ಬಿದ್ದು ಸಹಸವಾರ ಸಾವು
Team Udayavani, Feb 27, 2024, 9:08 PM IST
ಉಪ್ಪಿನಂಗಡಿ: ಬೈಕೊಂದು ಜಾರಿ ಬಿದ್ದ ಪರಿಣಾಮ ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಕರಾಯ ಗ್ರಾಮದ ಮರಿಪ್ಪಾದೆಯಲ್ಲಿ ಸೋಮವಾರ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲೋಲಿ ನಿವಾಸಿ ನಾರಾಯಣ ನಾಯ್ಕ (79) ಮೃತಪಟ್ಟವರು. ಮಗ ಉದಯ ಚಲಾಯಿಸುತ್ತಿದ್ದ ಬೈಕ್ನಲ್ಲಿ ಹಿಂಬದಿ ಸವಾರನಾಗಿ ಕಲ್ಲೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿತು. ಉದಯ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ವೆನಾÉಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪುತ್ತೂರು ಸಂಚಾರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ