ಕಂಟೈನರ್- ಬಸ್ ಮುಖಾಮುಖಿ: ಹೊತ್ತಿ ಉರಿದ ಬಸ್, ಕಂಟೈನರ್ ಚಾಲಕ ಸಜೀವ ದಹನ
Team Udayavani, Mar 25, 2021, 7:43 AM IST
ಉಪ್ಪಿನಂಗಡಿ: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಢಿಕ್ಕಿಯಾಗಿ ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ಕಡಬ ತಾಲೂಕಿನ ಮಣ್ಣಗುಂಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ನೆಲ್ಯಾಡಿಯ ಕಲ್ಕುಲಾಡಿ ಗ್ರಾಮದ ಪೆರಿಯಶಾಂತಿ ಬಳಿ ಮಧ್ಯರಾತ್ರಿ 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಮೃತಪಟ್ಟ ಕಂಟೈನರ್ ಚಾಲಕನನ್ನು ಮೈಸೂರು ಮೂಲದ ಸಂತೋಷ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:07ತೆಂಗಿನ ಕಾಯಿಗೆ ದಾಖಲೆ ಬೆಲೆ : ಫಸಲು ಕೊರತೆ-ತೆಂಗಿನ ಎಣ್ಣೆಗೂ ಹೆಚ್ಚಿದ ಬೇಡಿಕೆ
ಖಾಸಗಿ ಬಸ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ತರಕಾರಿ ತುಂಬಿದ್ದ ಕಂಟೈನರ್ ಗೆ ಢಿಕ್ಕಿಯಾಗಿದೆ. ಅಪಘಾತದ ಪರಿಣಾಮ ಕೂಡಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದೆ.
ಇದನ್ನೂ ಓದಿ: ಹೇಳಿದ್ದು 66 ಕಿ.ಮೀ.; ಗುತ್ತಿಗೆ 48 ಕಿ.ಮೀ.ಗೆ ಉಳಿದದ್ದು ಯಾವಾಗ ?
ಕಂಟೈನರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೆಂಕಿ ಹತ್ತಿಕೊಂಡಿದೆ, ಪರಿಣಾಮ ವಾಹನದಿಂದ ಹೊರ ಬರಲಾಗದ ಚಾಲಕ ಸಜೀವ ದಹನವಾಗಿದ್ದಾನೆ.
ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಪ್ರಯಾಣಿಕರು ಕೂಡಲೇ ಬಸ್ ನಿಂದ ಇಳಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಇದನ್ನೂ ಓದಿ: ಬೆಳ್ತಂಗಡಿ: ಪ.ಪಂ. ಚರಂಡಿ ವಾಸನೆ ಸಹಿಸಲು ಬೇಕಿದೆ ಮಾಸ್ಕ್!
ಅಗ್ನಿ ಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದರಾದರೂ, ಅವರು ಸ್ಥಳಕ್ಕೆ ಬರುವ ಮೊದಲೇ ಬಸ್ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು, ಸ್ಥಳೀಯರ ನೆರವಿನಿಂದ ಹತ್ತಿರದ ಮನೆಯಿಂದ ನೀರು ತಂದು ಬೆಂಕಿ ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ