ಬಿಜೆಪಿ ಅಸಮಾಧಾನದ ಗುಂಪಿಗೆ ಸಮಾಧಾನದ ಉತ್ತರ?

ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನೇತೃತ್ವದಲ್ಲಿ ಸಭೆ

Team Udayavani, Dec 9, 2020, 8:20 AM IST

ಬಿಜೆಪಿ ಅಸಮಾಧಾನದ ಗುಂಪಿಗೆ ಸಮಾಧಾನದ ಉತ್ತರ?

ಸುಳ್ಯ: ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯಲ್ಲಿನ ಅಡ್ಡ ಮತದಾನದ ಬಳಿಕ ಬಿಜೆಪಿಯೊಳಗೆ ಉಂಟಾಗಿರುವ ಆಂತರಿಕ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನೇತೃತ್ವದಲ್ಲಿ ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಗುಪ್ತ ಸಭೆಯಲ್ಲಿ ಅಸಮಾಧಾನಿತ ಗುಂಪಿಗೆ ಸಮಾಧಾನದ ಉತ್ತರ ದೊರೆತಿದೆ ಎನ್ನಲಾಗಿದೆ.

ಅಸಮಾಧಾನಿತ ಗುಂಪಿನ ಪ್ರಮುಖರ ಅಹವಾಲು ಆಲಿಸಿದ ನಳಿನ್‌, ಎರಡು ದಿನಗಳಲ್ಲಿ ಸುಳ್ಯ ಮಂಡಲ ಸಮಿತಿ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದ ರೀತಿಯಲ್ಲಿ ಬಗೆಹರಿಸುವ ಭರವಸೆ ನೀಡಿದ್ದಾರೆ. ಎರಡೂ ತಂಡಗಳು ಭಿನ್ನಾಭಿಪ್ರಾಯ ಮರೆತು ಜತೆ ಸೇರಿ ಒಗ್ಗಟ್ಟು ಪ್ರದರ್ಶಿಸಲು ಗ್ರೀನ್‌ ಸಿಗ್ನಲ್‌ ದೊರೆತಿದೆ ಎನ್ನುವ ಮಾಹಿತಿ ಲಭಿಸಿದೆ. ಜತೆಗೆ ಅಸಮಾಧಾನಿತ ಗುಂಪಿನ ಪ್ರಮುಖರು ಪಕ್ಷದ ಈಗಿನ ಬೆಳವಣಿಗೆಗಳ ಬಗ್ಗೆಯೂ ರಾಜ್ಯಾ ಧ್ಯಕ್ಷರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಷರತ್ತಿಗೆ ವಿನಾಯಿತಿ
ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಈ ಹಿಂದೆ ಎರಡೂ ಬಣಗಳು ಕೆಲವು ಬೇಡಿಕೆ ಮುಂದಿಟ್ಟಿದ್ದವು. ಇದಕ್ಕೆ ಎರಡೂ ಬಣಗಳಲ್ಲಿಯೂ ಸಮ್ಮತಿ ಸಿಕ್ಕಿಲ್ಲ. ಹೀಗಾಗಿ ಮುಂದೆ ಯಾವುದೇ ಷರತ್ತುಗಳು ಇಲ್ಲದೆ ಎಲ್ಲರೂ ಒಟ್ಟಾಗಿ ಮೊದಲಿನಂತೆ ಸಕ್ರಿಯರಾಗಬೇಕು. ಪಕ್ಷ ಸಂಘಟನೆಗೆ ಮತ್ತು ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ನಳಿನ್‌ ಕುಮಾರ್‌ ಕಟೀಲು ನಾಯಕರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಡಿ. 11ರಂದು ಪತ್ರಿಕಾಗೋಷ್ಠಿ?
ಎಲ್ಲರನ್ನೂ ಒಟ್ಟು ಸೇರಿಸಿ ಮಾತುಕತೆ ನಡೆಸಿ ಎಲ್ಲ ಭಿನ್ನತೆಯನ್ನೂ ನಿವಾರಿಸಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಒಗ್ಗಟ್ಟನ್ನು ಪ್ರದರ್ಶಿಸಲು ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ. ಜತೆಗೆ ಗ್ರಾಮ ಮಟ್ಟದಲ್ಲಿ ಉಂಟಾಗಿರುವ ಅಸಮಾಧಾನ ಹೋಗಲಾಡಿಸಲು ಜಿಲ್ಲಾ ನಾಯಕರನ್ನು ಖುದ್ದು ಕಳುಹಿಸಿಕೊಡುವ ಭರವಸೆ ನೀಡಿದ್ದಾರೆ. ಉಭಯ ಬಣಗಳು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಡಿ.11ರಂದು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಸಮಾಧಾನಕ್ಕೆ ಏನು ಕಾರಣ
ವರ್ಷದ ಹಿಂದೆ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆ ನಡೆದಿತ್ತು. ಈ ಸಂದರ್ಭ ಸಹಕಾರ ಭಾರತಿ ಅಭ್ಯರ್ಥಿಯಾಗಿ ವೆಂಕಟ ದಂಬೆಕೋಡಿ, ಡಾ| ರಾಜೇಂದ್ರ ಕುಮಾರ್‌ ಬೆಂಬಲಿತ ಅಭ್ಯರ್ಥಿಯಾಗಿ ಕೆ.ಎಸ್‌.ದೇವರಾಜ್‌ ಸ್ಪರ್ಧಿಸಿದ್ದರು. ಒಟ್ಟು 23 ಸಹಕಾರ ಬ್ಯಾಂಕ್‌ಗಳ ಪೈಕಿ 17 ರಲ್ಲಿ ಸಹಕಾರ ಭಾರತಿ ಬೆಂಬಲಿಗರು ಅಧಿಕಾರದಲ್ಲಿದ್ದ ಕಾರಣ ವೆಂಕಟ್‌ ಅವರಿಗೆ ಗೆಲುವು ನಿರೀಕ್ಷಿಸಲಾಗಿತ್ತು. ಆದರೆ ವೆಂಕಟ್‌ ಪರಾಭವಗೊಂಡಿದ್ದರು. ಇದು ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಮಾಹಿತಿಗೆ ನಕಾರ
ಪ್ರವಾಸಿ ಮಂದಿರದಲ್ಲಿ ಆಹ್ವಾನಿತ ಸದಸ್ಯರಿಗಷ್ಟೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಪಕ್ಷದ ಆಂತರಿಕ ವಿಚಾರವಾಗಿರುವ ಹಿನ್ನೆಲೆಯಲ್ಲಿ ಎರಡು ತಾಸುಗಳ ಕಾಲ ಗುಪ್ತ ಸಭೆ ನಡೆಯಿತು. ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ರಾಜ್ಯಾಧ್ಯಕ್ಷರನ್ನು ಪತ್ರಕರ್ತರು ಪ್ರಶ್ನಿಸಿದ ಸಂದರ್ಭದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಅಸಮಾಧಾನಿತ ಗುಂಪಿನ ಸದಸ್ಯರು ರಾಜ್ಯಾಧ್ಯಕ್ಷರ ಸೂಚನೆಯಂತೆ ಸಭೆಯ ಚರ್ಚಾ ವಿಷಯಗಳನ್ನು ಬಹಿರಂಗವಾಗಿ ಪ್ರಕಟಿಸಲಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.