Voter ಶತಾಯುಷಿ ಮತದಾರರಿಗೆ ಆಯೋಗದ ಗೌರವ
ದ.ಕ. ಜಿಲ್ಲೆಯಲ್ಲಿದ್ದಾರೆ 522 ಶತಾಯುಷಿಗಳು
Team Udayavani, Nov 25, 2023, 11:30 PM IST
ಬೆಳ್ತಂಗಡಿ: ಚುನಾವಣ ಆಯೋಗ, ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ 100 ವರ್ಷ ದಾಟಿದ ಮತದಾರರನ್ನು ಆಯ್ಕೆ ಮಾಡಿ ಗೌರವಿ ಸುವ ಪ್ರಕ್ರಿಯೆ ನಡೆಯುತ್ತಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ 80 ವರ್ಷ ಮೇಲ್ಪಟ್ಟ, ಅಂಗವಿಕಲ, ಹಾಸಿಗೆ ಹಿಡಿದ ಮತದಾರರಿಗೆ ಮನೆಯಿಂದಲೇ ಮತದಾನದ ಅವಕಾಶವನ್ನು ಆಯೋಗ ಕಲ್ಪಿಸಿತ್ತು. ಇದರಿಂ ದಾಗಿ ಅರ್ಹ ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಭಾಗವಹಿಸುವಂತಾಗಬೇಕು ಎಂಬ ಆಯೋಗದ ಇರಾದೆ ಬಹುತೇಕ ಫಲಪ್ರದ ವಾಗಿತ್ತು. ಇದರ ಮುಂದುವರಿದ ಭಾಗವಾಗಿ ಆಯೋಗವು ಶತಾಯುಷಿ ಮತದಾರರನ್ನು ಗುರುತಿಸಲು ಮುಂದಾಗಿದೆ.
ದ.ಕ. ಜಿಲ್ಲೆಯಲ್ಲಿ 522 ಮಂದಿ ಶತಾಯುಷಿಗಳನ್ನು ಖಾತ್ರಿ ಪಡಿಸಿ ಜಿಲ್ಲಾಡಳಿತ ಮತ್ತು ಜಿ.ಪಂ. ಸಹ ಯೋಗದಲ್ಲಿ ಮನೆಗೆ ತೆರಳಿ ಪ್ರಮಾಣ ಪತ್ರದೊಂದಿಗೆ ಗೌರವಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 46 ಮಂದಿ ಶತಾಯುಷಿಗಳನ್ನು ಗುರುತಿಸಿ ಗೌರವಿಸಲಾಗಿದೆ.
ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ದಲ್ಲಿ ಭಾಗವಹಿಸುವಂತೆ ಮಾಡುವುದು ಮತ್ತು ಯುವ ಮತದಾರರಿಗೆ ಮಾದರಿಯಾಗಿ ಅವರು ಕೂಡ ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಶತಾಯುಷಿ ಮತದಾರರಿಗೆ ಚುನಾವಣ ಆಯೋಗ ಮತ್ತು ಜಿಲ್ಲಾಡಳಿತದಿಂದ ಗೌರವ ಸಲ್ಲಿಸಲಾಗುತ್ತಿದೆ.
– ಮುಲ್ಲೈ ಮುಗಿಲನ್, ಜಿಲ್ಲಾಧಿಕಾರಿ, ದ.ಕ.
– ಡಾ| ಆನಂದ್ ಕೆ., ಸಿಇಒ, ಜಿ.ಪಂ.
ದ.ಕ. ಜಿಲ್ಲೆಯ ಶತಾಯುಷಿಗಳು
- ಮಂಗಳೂರು ಉತ್ತರ- 107
- ಮಂಗಳೂರು ದಕ್ಷಿಣ-176
- ಮಂಗಳೂರು-38
- ಬಂಟ್ವಾಳ- 42
- ಪುತ್ತೂರು-24
- ಬೆಳ್ತಂಗಡಿ-33
- ಮೂಡುಬಿದಿರೆ -69
- ಸುಳ್ಯ-33
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ