ಮಸೀದಿ-ಮದ್ರಸ ವಕ್‌ ಅಧೀನಕ್ಕೆ ಸೇರಿಸಿ: ಜಮೀರ್‌ ಅಹ್ಮದ್‌ 


Team Udayavani, Oct 4, 2018, 12:18 PM IST

4-october-8.gif

ಸುಳ್ಯ : ಮಸೀದಿ-ಮದ್ರ‌ಸಗಳನ್ನು ವಕ್ಫ್ ಬೋರ್ಡ್‌ ಅಧೀನದಲ್ಲಿ ನೋಂದಾಯಿಸಿಕೊಂಡಲ್ಲಿ ಸರಕಾರದಿಂದ ಅನುದಾನ ಒದಗಿಸಲು ಸಾಧ್ಯವಿದೆ ಎಂದು ಅಲ್ಪಸಂಖ್ಯಾಕರ ಕಲ್ಯಾಣ, ವಕ್ಫ್ ಮತ್ತು ಹಜ್‌ ಖಾತೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಜಟ್ಟಿಪಳ್ಳ ಅನ್ಸಾರಿಯಾ ಯತೀಂಖಾನದಲ್ಲಿ ಬುಧವಾರ ನಡೆದ ತಾಲೂಕು ಮಸೀದಿ-ಮದ್ರಸ ಪದಾಧಿಕಾರಿಗಳ ಮತ್ತು ಇಮಾಮರುಗಳ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಮಸೀದಿ, ಮದ್ರಸಗಳಿಗೆ ಗರಿಷ್ಠ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅದಕ್ಕೆ ಪೂರಕವಾಗಿ ಮಸೀದಿ, ಮದ್ರಸ ನೋಂದಾಯಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಣಚೂರು ಮೋನು, ಎಸ್‌. ಸಂಶುದ್ದಿನ್‌, ಟಿ.ಎಂ. ಶಹೀದ್‌, ಕೆ.ಎಂ. ಮುಸ್ತಾಫ‌, ಇಕ್ಬಾಲ್‌ ಎಲಿಮಲೆ, ಅನ್ಸಾರಿಯ ಅಧ್ಯಕ್ಷ ಅಬ್ದುಲ್‌ ಮಜೀದ್‌, ಆರ್‌.ಕೆ. ಮಹಮ್ಮದ್‌, ರಫೀಕ್‌ ಪಡು, ಸಿದ್ದಿಕ್‌ ಕೊಕ್ಕೊ, ಶರೀಫ್‌ ಕಂಠಿ, ಉಮ್ಮರ್‌ ಮುಸ್ಲಿಯಾರ್‌ ಮರ್ದಾಳ, ಆದಂ ಕಮ್ಮಡಿ, ಅಬ್ಟಾಸ್‌ ಕಟ್ಟೆಕ್ಕಾರ್‌ ಉಪಸ್ಥಿತರಿದ್ದರು. ಅನ್ಸಾರಿಯಾ ವತಿಯಿಂದ ಸಚಿವರನ್ನು ಸಮ್ಮಾನಿಸಲಾಯಿತು. ಸಭೆಯ ಬಳಿಕ ಅನ್ಸಾರಿಯಾ ಕೇಂದ್ರದ ಮಕ್ಕಳೊಂದಿಗೆ ಬೆರೆತು, ಅವರ ಯೋಗಕ್ಷೇಮ ವಿಚಾರಿಸಿದರು.

ಕಾಮಗಾರಿಗೆ ಶಂಕುಸ್ಥಾಪನೆ
ಸುಳ್ಯ ನಗರದ ಗಾಂಧಿನಗರ ಮಸೀದಿಗೆ ಭೇಟಿ ನೀಡಿ ಅಲ್ಲಿನ ನವೀಕೃತ ಮಸೀದಿ ಕಾಮಗಾರಿ ವೀಕ್ಷಿಸಿದರು. ಬಳಿಕ ಮೊಗರ್ಪಣೆ ದರ್ಗಾ ಶರೀಫ್ ಮುಂಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾದಿ ಮಹಲ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಪೈಚಾರಿನಲ್ಲಿ ನೂತನ ಮದರಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಅನ್ಸಾರಿಯಾದಲ್ಲಿ ನಡೆದ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶದಲ್ಲಿ ಪಾಲ್ಗೊಂಡರು. ಸಂಜೆ ವೇಳೆ ನಗರದಲ್ಲಿ ಉತ್ತಮ ಮಳೆಯಾದ ಕಾರಣ ಮೊಗರ್ಪಣೆ ಸಹಿತ ಕೆಲವೆಡೆ ನಿಗದಿಯಾಗಿದ್ದ ಸಭಾ ಕಾರ್ಯಕ್ರಮ ಮೊಟಕುಗೊಂಡಿತ್ತು.

ಭರಪೂರ ಅನುದಾನ ಘೋಷಣೆ
ಮೊಗರ್ಪಣೆ ಮಸೀದಿ ಮುಂಭಾಗದಲ್ಲಿ ನಿರ್ಮಾಣಗೊಳ್ಳುವ ಶಾದಿ ಮಹಲ್‌ಗೆ 1 ಕೋಟಿ ರೂ., ಮೊಗರ್ಪಣೆ ಮದರಸಕ್ಕೆ 10 ಲಕ್ಷ ರೂ., ಅಂಬೆಟಡ್ಕ ಅನಘಿ  ಜುಮಾ ಮಸೀದಿಗೆ 5 ಲಕ್ಷ ರೂ., ಮಸೀದಿ ಆಧುನೀಕರಣಕ್ಕೆ 10 ಲಕ್ಷ ರೂ., ಅನ್ಸಾರಿಯ ಯತಿಂಖಾನ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 40 ಲಕ್ಷ ರೂ., ಗಾಂಧಿನಗರ ನವೀಕೃತ ಮಸೀದಿಗೆ 20 ಲಕ್ಷ ರೂ., ಪೈಚಾರು ಮದರಸ ಕಟ್ಟಡಕ್ಕೆ 20 ಲಕ್ಷ ರೂ. ಅನುದಾನ ನೀಡುವುದಾಗಿ ಸಚಿವರು ಘೋಷಿಸಿದರು.

ಕ್ರೀಡಾಪಟುವಿಗೆ ಆರ್ಥಿಕ ನೆರವು
ಅಂಗವಿಕಲರ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ ಸುಹೈಲ್‌ ಅವರಿಗೆ ಸಚಿವ ಜಮೀರ್‌ ಅಹಮ್ಮದ್‌ ಅವರು 25 ಸಾವಿರ ರೂ. ಆರ್ಥಿಕ ನೆರವು ನೀಡಿದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.