Punjalkatte ಪತ್ನಿಗೆ ಎರಡನೇ ವಿವಾಹ ದೃಢ: ಜೀವನಾಂಶ ರದ್ದುಗೊಳಿಸಿ ಕೋರ್ಟ್‌ ಆದೇಶ


Team Udayavani, Dec 9, 2023, 11:08 PM IST

Punjalkatte ಪತ್ನಿಗೆ ಎರಡನೇ ವಿವಾಹ ದೃಢ: ಜೀವನಾಂಶ ರದ್ದುಗೊಳಿಸಿ ಕೋರ್ಟ್‌ ಆದೇಶ

ಪುಂಜಾಲಕಟ್ಟೆ: ವಿವಾಹದ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಆಕೆಯ ನಿರ್ವಹಣೆಗಾಗಿ ನೀಡಲಾಗುತ್ತಿದ್ದ ಜೀವನಾಂಶವನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್‌ ಅವರು ಮಂಗಳೂರಿನ ಮೇರಿಹಿಲ್‌ನ ಅನಿತಾ ನಾಯಕ್‌ರನ್ನು 2018ರಲ್ಲಿ ಮದುವೆಯಾಗಿದ್ದು, ಬಳಿಕ ಇವರ ದಾಂಪತ್ಯದಲ್ಲಿ ಕೆಲ ಅಡೆತಡೆಗಳು ಬಂದ ಹಿನ್ನೆಲೆಯಲ್ಲಿ ಉದಯ ನಾಯಕ್‌ ಅವರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವ್ಯಾಜ್ಯವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಅನಿತಾ ನಾಯಕ್‌ ಗೌಪ್ಯವಾಗಿ ಎರಡನೇ ವಿವಾಹವಾಗುತ್ತಿದ್ದಾಳೆಂದು ಪತಿ ಬೆಳ್ತಂಗಡಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಫಿರ್ಯಾದು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಠಾಣಾ ಅಧಿಕಾರಿಗೆ ಸೂಚಿಸಿತ್ತು.

ಈ ಮಧ್ಯೆ ಉದಯ್‌ ನಾಯಕ್‌ ಅವರಿಂದ ಜೀವನಾಂಶವನ್ನು ಕೋರಿ ಪತ್ನಿ ಅನಿತಾ ನಾಯಕ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಸಂದರ್ಭ ನ್ಯಾಯಾಲಯದ ಆದೇಶದಂತೆ ಉದಯ್‌ ನಾಯಕ್‌ ಅವರು ಪತ್ನಿಗೆ ನಿರ್ವಹಣ ಪಾವತಿಯಾಗಿ 15 ಸಾ. ರೂ.ವಿನ ಡಿಮ್ಯಾಂಡ್‌ ಡ್ರಾಫ್ಟ್ ಅನ್ನು ನೀಡಿದ್ದರು.

ಪತ್ತೆದಾರನಾದ ಪತಿ
ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಪತಿ ಉದಯ ನಾಯಕ್‌ ಖುದ್ದು ಪತ್ತೆದಾರಿಕೆಗೆ ಮುಂದಾದರು. ಪತ್ನಿ ಅನಿತಾ 2023ರ ಮಾರ್ಚ್‌ 13ರಂದು ಮುಂಬಯಿಯ ಡೊಂಬಿವಲಿಯ ಲೋಧಾ ಪ್ಯಾನೇಸಿಯಾದಲ್ಲಿ ಹರಿಕೃಷ್ಣ ಗಣಪತ್‌ ರಾವ್‌ ಕೀಲು ಅವರೊಂದಿಗೆ ಎರಡನೇ ವಿವಾಹವಾಗಿದ್ದು ಈ ಬಗ್ಗೆ ಮಹಾರಾಷ್ಟ್ರ ಶಾಸನ ರಾಜಪತ್ರದ ಮಾರ್ಚ್‌ 16-22, 2023ರ ಆವೃತ್ತಿಯಲ್ಲಿ ಪ್ರಕಟಗೊಂಡಿರುವ ದಾಖಲೆಯ ಮೂಲಕ ಉದಯ ನಾಯಕ್‌ ದೃಢಪಡಿಸಿಕೊಂಡರು. ಅನಿತಾ ನಾಯಕ್‌ ತನ್ನ ಹೆಸರನ್ನು ಅನಿತಾ ಹರಿಕೃಷ್ಣ ಕೀಲು ಎಂದು ಬದಲಾಯಿಸಿಕೊಂಡಿದ್ದರು. ಇವರ ಎರಡನೇ ವಿವಾಹವು 2022ರ ಡಿ. 27ರಂದೇ ನಡೆದಿತ್ತು ಎಂಬ ವಿಚಾರ ಮಹಾರಾಷ್ಟ್ರ ಗೆಜೆಟ್‌ ಕಚೇರಿಗೆ ಸಲ್ಲಿಸಿದ ಪ್ರಮಾಣಪತ್ರದ ಪ್ರಕಾರ ಬೆಳಕಿಗೆ ಬಂದಿದೆ. ಅನಿತಾ ಅವರ ಎರಡನೇ ವಿವಾಹದ ಛಾಯಾಚಿತ್ರಗಳನ್ನು ಆಕೆಯ ಸಂಬಂಧಿಯೋರ್ವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು. ಆದರೂ ಜೀವನಾಂಶ ಪಡೆಯಲು ಅನಿತಾಳ ತಂದೆ ರಾಮಚಂದ್ರ ನಾಯಕ್‌ ತನ್ನ ಸಂಬಂಧಿಯ ಜತೆ ಮಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದರೆನ್ನಲಾಗಿದೆ.

ಉದಯ್‌ ನಾಯಕ್‌ ತನ್ನ ಪತ್ನಿ ಅನಿತಾ ಎರಡನೇ ವಿವಾಹವಾದ ಕುರಿತಂತೆ ಛಾಯಾಚಿತ್ರಗಳ ಸಹಿತ ಪ್ರಕಟವಾದ ಮಹಾರಾಷ್ಟದ ಗೆಜೆಟ್‌ ಅನ್ನು ಕೌಟುಂಬಿಕ ನ್ಯಾಯಾಲಯಕ್ಕೆ ಪುರಾವೆಯಾಗಿ ಸಲ್ಲಿಸಿದರು. ಇದರ ವಿಚಾರಣೆ ನಡೆಸಿದ ಪ್ರಧಾನ ನ್ಯಾಯಾಧೀಶರು ಈ ಪುರಾವೆಗಳನ್ನು ಅಂಗೀಕರಿಸಿದ್ದಲ್ಲದೆ ಅನಿತಾಳಿಗೆ ನಿರ್ವಹಣೆಗಾಗಿ ನೀಡಲಾಗುತ್ತಿದ್ದ ಜೀವನಾಂಶವನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ. ಅನಿತಾ ನಾಯಕ್‌ ಅವರ ಎರಡನೇ ವಿವಾಹಕ್ಕೆ ಸಂಬಂಧಿಸಿದಂತೆ ಉದಯ್‌ ನಾಯಕ್‌ ಅವರ ಅರ್ಜಿಯ ಹೆಚ್ಚಿನ ತನಿಖೆಗೂ ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.