ಅಧಿಕಾರಿಗಳ ಎಡವಟ್ಟು: ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಗೊಂದಲ
Team Udayavani, Dec 27, 2020, 2:31 PM IST
ಕಡಬ: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಕೆಲವು ಮತದಾರರ ಹೆಸರಿಲ್ಲ ಎನ್ನುವ ವಿಚಾರವು ಗೊಂದಲಕ್ಕೆ ಕಾರಣವಾಯಿತು.
ಅಭ್ಯರ್ಥಿಗಳ ಬೆಂಬಲಿಗರು ಮತಗಟ್ಟೆಯ ಆವರಣದೊಳಗೆ ಬಂದು ಮತಗಟ್ಟೆ ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಸಿದರು.
ಇದನ್ನೂ ಓದಿ:ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಸ್ ಚಾಲಕ ಆತ್ಮಹತ್ಯೆ!
ಸುದ್ದಿ ತಿಳಿದ ಕಡಬ ತಹಸೀಲ್ದಾರ್ ಅನಂತ ಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದರು. ವಾರ್ಡ್ ವಿಂಗಡಣೆ ಸಂದರ್ಭ ಮತ ಪಟ್ಟಿ ಪರಿಷ್ಕರಣೆ ಮಾಡಿ ಕೆಲವು ಮತದಾರರ ಹೆಸರನ್ನು ಇನ್ನೊಂದು ವಾರ್ಡ್ ಗೆ ಸೇರಿಸಲಾಗಿತ್ತು. ಆದರೆ ಆ ವಿಚಾರವನ್ನು ಮತದಾರರಿಗೆ ಮನದಟ್ಟು ಮಾಡುವಲ್ಲಿ ಅಧಿಕಾರಿಗಳು ವಿಫಲರಾದುದು ಗೊಂದಲಕ್ಕೆ ಕಾರಣವಾಯಿತು. ಘಟನೆಯಿಂದಾಗಿ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ