![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪಠ್ಯ ವಿಚಾರದಲ್ಲಿ ರಾಜಕೀಯ ದುರ್ಲಾಭಕ್ಕೆ ಕಾಂಗ್ರೆಸ್ ಯತ್ನ: ಸಚಿವ ನಾಗೇಶ್
Team Udayavani, May 21, 2022, 12:26 AM IST
![ಪಠ್ಯ ವಿಚಾರದಲ್ಲಿ ರಾಜಕೀಯ ದುರ್ಲಾಭಕ್ಕೆ ಕಾಂಗ್ರೆಸ್ ಯತ್ನ: ಸಚಿವ ನಾಗೇಶ್](https://www.udayavani.com/wp-content/uploads/2022/05/BC-Nagesh-2-620x413.jpg)
ಪುತ್ತೂರು: ನಾರಾಯಣ ಗುರು, ಭಗತ್ ಸಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ರಾಜಕೀಯ ದುರ್ಲಾಭ ಗಳಿಸಲು ಪ್ರಯತ್ನಿಸುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆರೋಪಿಸಿದ್ದಾರೆ.
ಯಾವ ಪಠ್ಯವನ್ನೂ ಶಾಲಾ ಪುಸ್ತಕದಿಂದ ತೆಗೆದು ಹಾಕಿಲ್ಲ. ನಾರಾಯಣ ಗುರು, ಭಗತ್ ಸಿಂಗ್, ಬಸವಣ್ಣ ವಿಚಾರಗಳ ಪಾಠವೂ ಪುಸ್ತಕದಲ್ಲಿದೆ. ಮಕ್ಕಳಿಗೆ ಹೊರೆಯಾಗದಿರಲಿ ಎನ್ನುವ ಕಾರಣಕ್ಕೆ ಪಠ್ಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ ಎಂದು ಪತ್ರಕರ್ತರ ಜತೆ ಮಾತನಾಡಿದ ಅವರು ಹೇಳಿದರು.
ಕೊರೊನಾ ಬಳಿಕ ರಾಜ್ಯದಲ್ಲಿ ಶೈಕ್ಷಣಿಕ ಪ್ರಕ್ರಿಯೆಯೇ ಮುಗಿದಿದೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಆದರೆ ಈಗ ಎಲ್ಲ ವ್ಯವಸ್ಥೆಗಳು ಸುಗಮವಾಗಿ ನಡೆಯುತ್ತಿರುವಾಗ ಪಠ್ಯದ ವಿಚಾರ ಎತ್ತಿದ್ದಾರೆ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಶಿಕ್ಷಣವನ್ನೂ ಬಳಸುತ್ತಿದೆ, ಈ ವಿಚಾರದಲ್ಲೂ ಸುಳ್ಳು ಹರಡುತ್ತಿದೆ ಎಂದು ಆರೋಪಿಸಿದರು.
ಈ ಬಾರಿಯೂ ಎಲ್ಲ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡ ಬೇಕೆಂದು ಸೂಚನೆ ನೀಡಲಾಗಿದೆ. ಪ್ರೌಢಶಾಲೆ ತನಕ ಸರಕಾರವೇ ಸಮವಸ್ತ್ರವನ್ನು ಪೂರೈಸಲಿದೆ. ಈ ಬಾರಿ ಸಮವಸ್ತ್ರವನ್ನು ಒಂದು ತಿಂಗಳ ಒಳಗೆ ಪೂರೈಸಲಾಗುವುದು ಎಂದರು.
ಅಧ್ಯಾಪಕರಿಗೆ ಸಮವಸ್ತ್ರ ಕಡ್ಡಾಯ ಚಿಂತನೆ ಇಲ್ಲ
ಇತಿಹಾಸದಲ್ಲಿ ಮೊದಲ ಬಾರಿಗೆ ಶಾಲೆ ಆರಂಭದ ದಿನವೇ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಧ್ಯಾಪಕರಿಗೆ ಸಮವಸ್ತ್ರ ಕಡ್ಡಾಯಗೊಳಿ ಸುವ ಚಿಂತನೆ ಸರಕಾರದ ಮುಂದಿಲ್ಲ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.