ಪಠ್ಯ ವಿಚಾರದಲ್ಲಿ ರಾಜಕೀಯ ದುರ್ಲಾಭಕ್ಕೆ ಕಾಂಗ್ರೆಸ್ ಯತ್ನ: ಸಚಿವ ನಾಗೇಶ್
Team Udayavani, May 21, 2022, 12:26 AM IST
ಪುತ್ತೂರು: ನಾರಾಯಣ ಗುರು, ಭಗತ್ ಸಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ರಾಜಕೀಯ ದುರ್ಲಾಭ ಗಳಿಸಲು ಪ್ರಯತ್ನಿಸುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆರೋಪಿಸಿದ್ದಾರೆ.
ಯಾವ ಪಠ್ಯವನ್ನೂ ಶಾಲಾ ಪುಸ್ತಕದಿಂದ ತೆಗೆದು ಹಾಕಿಲ್ಲ. ನಾರಾಯಣ ಗುರು, ಭಗತ್ ಸಿಂಗ್, ಬಸವಣ್ಣ ವಿಚಾರಗಳ ಪಾಠವೂ ಪುಸ್ತಕದಲ್ಲಿದೆ. ಮಕ್ಕಳಿಗೆ ಹೊರೆಯಾಗದಿರಲಿ ಎನ್ನುವ ಕಾರಣಕ್ಕೆ ಪಠ್ಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ ಎಂದು ಪತ್ರಕರ್ತರ ಜತೆ ಮಾತನಾಡಿದ ಅವರು ಹೇಳಿದರು.
ಕೊರೊನಾ ಬಳಿಕ ರಾಜ್ಯದಲ್ಲಿ ಶೈಕ್ಷಣಿಕ ಪ್ರಕ್ರಿಯೆಯೇ ಮುಗಿದಿದೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಆದರೆ ಈಗ ಎಲ್ಲ ವ್ಯವಸ್ಥೆಗಳು ಸುಗಮವಾಗಿ ನಡೆಯುತ್ತಿರುವಾಗ ಪಠ್ಯದ ವಿಚಾರ ಎತ್ತಿದ್ದಾರೆ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಶಿಕ್ಷಣವನ್ನೂ ಬಳಸುತ್ತಿದೆ, ಈ ವಿಚಾರದಲ್ಲೂ ಸುಳ್ಳು ಹರಡುತ್ತಿದೆ ಎಂದು ಆರೋಪಿಸಿದರು.
ಈ ಬಾರಿಯೂ ಎಲ್ಲ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡ ಬೇಕೆಂದು ಸೂಚನೆ ನೀಡಲಾಗಿದೆ. ಪ್ರೌಢಶಾಲೆ ತನಕ ಸರಕಾರವೇ ಸಮವಸ್ತ್ರವನ್ನು ಪೂರೈಸಲಿದೆ. ಈ ಬಾರಿ ಸಮವಸ್ತ್ರವನ್ನು ಒಂದು ತಿಂಗಳ ಒಳಗೆ ಪೂರೈಸಲಾಗುವುದು ಎಂದರು.
ಅಧ್ಯಾಪಕರಿಗೆ ಸಮವಸ್ತ್ರ ಕಡ್ಡಾಯ ಚಿಂತನೆ ಇಲ್ಲ
ಇತಿಹಾಸದಲ್ಲಿ ಮೊದಲ ಬಾರಿಗೆ ಶಾಲೆ ಆರಂಭದ ದಿನವೇ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಧ್ಯಾಪಕರಿಗೆ ಸಮವಸ್ತ್ರ ಕಡ್ಡಾಯಗೊಳಿ ಸುವ ಚಿಂತನೆ ಸರಕಾರದ ಮುಂದಿಲ್ಲ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ