ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಾಣ
ಶೀಘ್ರ ಸ್ಪಂದನೆ: ನಾಲ್ಕೇ ದಿನಗಳಲ್ಲಿ ಕ್ರಮ ಕೈಗೊಂಡ ಹೆದ್ದಾರಿ ಇಲಾಖೆ
Team Udayavani, Sep 14, 2019, 5:00 AM IST
ಕನಕಮಜಲು ಬಳಿ ನಿರ್ಮಿಸಿದ ತಡೆಗೋಡೆ.
ಕನಕಮಜಲು: ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಸಮೀಪ ಹೆದ್ದಾರಿ ಬದಿ ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಿಸ ಲಾಗಿದೆ. ಸಿಮೆಂಟ್ ಕಲ್ಲುಗಳನ್ನು ಹಾಕಿ ರಸ್ತೆ ಬದಿ ಹೊಂಡಕ್ಕೆ ಅಡ್ಡಲಾಗಿ ತಡೆಗೋಡೆ ಕಟ್ಟಲಾಗಿದೆ.
ಕನಕಮಜಲು ಪೇಟೆಯಿಂದ ಕೃಷಿ ಪತ್ತಿನ ಸಹಕಾರ ಸಂಘದ ರಸ್ತೆ ಮಧ್ಯೆ 100 ಮೀಟರ್ ಅಂತರದಲ್ಲಿ ಅಡಿಕೆ ತೋಟಕ್ಕೆ ಹೊಂದಿಕೊಂಡಂತೆ ಭಾರೀ ಹೊಂಡವೊಂದು ಇದೆ. ಗುಂಡಿ ಬಿಟ್ಟು ಎರಡೂ ಕಡೆ ತಡೆಬೇಲಿ ಹಾಕಲಾಗಿತ್ತು. ಗುಂಡಿ ಮಾತ್ರ ಹೆದ್ದಾರಿಗೆ ತೆರೆದುಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಸಂಚಕಾರವಾಗಿತ್ತು.
ಗುಂಡಿ ಪೊದೆಯಿಂದ ಮುಚ್ಚಿದ್ದು ಹೊಂಡವಿರುವ ಭಾಗ ಚಾಲಕರಿಗೆ ಸರಿಯಾಗಿ ಕಾಣುವುದಿಲ್ಲ ಎನ್ನುವ ಆತಂಕ ಸ್ಥಳೀಯರಲ್ಲಿ ಮನೆ ಮಾಡಿತ್ತು.
ಈ ಕುರಿತು ಸೆ. 9ರಂದು “ಉದಯವಾಣಿ’ ಸುದಿನದಲ್ಲಿ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ತ್ವರಿತಗತಿಯಲ್ಲಿ ಸ್ಪಂದಿಸಿದ ಅಧಿ ಕಾರಿಗಳು ಕೇವಲ ನಾಲ್ಕು ದಿನಗಳಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡಿ ದ್ದಾರೆ. ಈ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರ ವಾಗಿದೆ. ತಡೆಗೋಡೆಗೆ ಸುಣ್ಣ ಅಥವಾ ಬಿಳಿ ಬಣ್ಣ ಬಳಿದರೆ ಚಾಲಕರಿಗೆ ದೂರದಿಂದಲೇ ಅರಿವಾಗ ಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್