ಒಂದೇ ದಿನದಲ್ಲಿ ಶೌಚಾಲಯ ನಿರ್ಮಾಣ!


Team Udayavani, Dec 9, 2018, 2:53 PM IST

9-december-10.gif

ಬಡಗನ್ನೂರು: ಯಾವುದೇ ಸರಕಾರಿ ದಾಖಲೆಗಳನ್ನು ಹೊಂದದೇ ಇರುವ ಪರಿಶಿಷ್ಟ ಜಾತಿಯ ಬಡ ಕುಟುಂಬಕ್ಕೆ ಒಂದೇ ದಿನದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಮೂಲಕ ಒಳಮೊಗ್ರು ಗ್ರಾಮ ಪಂಚಾಯತ್‌ ವಿಶ್ವ ಪರಿಸರ ದಿನವನ್ನು ಆಚರಿಸಿ ಗಮನ ಸೆಳೆದಿದೆ.

ಇಲ್ಲಿ ಒಟ್ಟು 12 ಕುಟುಂಬಗಳು ದಾಖಲೆಗಳನ್ನು ಹೊಂದಿಲ್ಲ. ಈ ಕಾರಣದಿಂದ ಅವರು ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯುವಲ್ಲಿ ಅರ್ಹರಾಗುವುದಿಲ್ಲ. ಇದನ್ನು ಮನಗಂಡು ಕಮಲಾ ಕೈಕಾರ ಅವರ ಕುಟುಂಬವನ್ನು ಆಯ್ಕೆ ಮಾಡಿದ ಒಳಮೊಗ್ರು ಗ್ರಾ.ಪಂ. ಅವರಿಗೆ ಒಂದೇ ದಿನದಲ್ಲಿ ಶೌಚಾಲಯ ನಿರ್ಮಿಸಿ ಕೊಟ್ಟಿದೆ. ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಹಾಗೂ ಅಧಿಕಾರಿಗಳ ಸಹಕಾರದಿಂದ ಈ ಕಾರ್ಯಕೈಗೂಡಿದೆ.

ಗ್ರಾಮ ಸ್ವರಾಜ್ಯದ ನನಸು
ಶೌಚಾಲಯ ನಿರ್ಮಾಣಕ್ಕೆ ಬೇಕಾದ ಅಗತ್ಯ ಸೊತ್ತುಗಳನ್ನು ಸಂಗ್ರಹಿಸಿಟ್ಟುಕೊಂಡು ಕೆಲಸ ಪ್ರಾರಂಭಿಸಲಾಯಿತು. ಬೆಳಗ್ಗೆ ಕೆಲಸ ಪ್ರಾರಂಭಿಸಿ ಸಂಜೆ ಹೊತ್ತಿಗೆ ಪೂರ್ಣಗೊಳಿಸಲಾಯಿತು. ಒಳಮೂಗ್ರು ಗ್ರಾ.ಪಂ.ನ ಈ ಕಾರ್ಯ ಇತರ ಪಂಚಾಯತ್‌ಗಳಿಗೆ ಮಾದರಿಯಾಗಿದೆ. ಮನೆ ನಂಬರ್‌, ಹಕ್ಕುಪತ್ರ ಇಲ್ಲದೆ ಸರಕಾರಿ ಸೌಲಭ್ಯಗಳಿಂದ ವಂಚಿತರಾದ ಎಲ್ಲ ಬಡವರ್ಗದ ಕುಟುಂಬಗಳ ಅಭಿವೃದ್ಧಿಯಲ್ಲಿ ಅಧಿಕಾರಿಗಳು ಕೆಲಸ ಮಾಡಿದಾಗ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಯಿತು.

ಎಲ್ಲರಿಗೂ ಶೌಚಾಲಯ
ಡಿಸೆಂಬರ್‌ ಅಂತ್ಯದೊಳಗೆ ಒಳಮೊಗ್ರು ಗ್ರಾ. ಪಂ. ವ್ಯಾಪ್ತಿಯ ಎಲ್ಲ ಮನೆಗಳಿಗೂ ಶೌಚಾಲಯ ನಿರ್ಮಿಸಿ ಕೊಡುವ ಗುರಿ ಹೊಂದಲಾಗಿದೆ.
-ಗೀತಾ ಎಸ್‌., ಗ್ರಾ.ಪಂ. ಪಿಡಿಒ

ಬಯಲು ಶೌಚಮುಕ್ತ
ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸುವುದು ನಮ್ಮ ಉದ್ದೇಶ. ಅನುದಾನ ಕೊರತೆ ಇದೆ. ಗ್ರಾ.ಪಂ. ಆದಾಯ ಕಡಿಮೆ. ಸರಕಾರದಿಂದ ಅನುದಾನ ಬಂದ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು.
-ಯತಿರಾಜ ರೈ ನೀರ್ಪಾಡಿ,
ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.