ಸಮಾಜದ ರಕ್ಷಣೆಗೆ ಸಾಹಿತ್ಯದ ಕೊಡುಗೆ: ಡಾ| ರಂಗನಾಥ್‌

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ

Team Udayavani, Dec 15, 2020, 11:05 PM IST

ಬೆಂಗಳೂರಿನ ಡಾ| ಎಸ್‌.ರಂಗನಾಥ್‌ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು.

ಧರ್ಮಸ್ಥಳ: ಲಕ್ಷದೀಪೋತ್ಸವದ ಪ್ರಯುಕ್ತ ವಿದ್ಯುದ್ದೀಪಗಳಿಂದ ಅಲಂಕೃತವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ.

ಬೆಳ್ತಂಗಡಿ: ಸಾಹಿತ್ಯ ಕೃತಿ ಜೀವನ ಮೌಲ್ಯದ ಆಕಾರವಾಗಿದೆ. ಸಾಹಿತ್ಯದ ಮೌಲ್ಯಗಳು ಸ್ವಂತ ಅಧ್ಯಯನ, ಅನುಭವ
ಸಂಸ್ಕಾರ ಮತ್ತು ಜೀವನಗಳಿಂದ ಸಮ್ಮಿಳಿತ. ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಹರ್ನಿಶಿಯಾಗಿ ಶ್ರಮಿಸುತ್ತಿದೆ ಎಂದು ಬೆಂಗಳೂರಿನ ಹಿರಿಯ ವಿದ್ವಾಂಸರಾದ ಡಾ| ಎಸ್‌.ರಂಗನಾಥ್‌ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಯುಕ್ತ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನವನ್ನು ಅಮೃತವರ್ಷಿಣಿ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯವು ಸಮಾಜದ ಕನ್ನಡಿಯಂತೆ. ಸಮಾಜವು ಯಾವ ವಿಧದಲ್ಲಿದ್ದರೂ ಅದರ ಪ್ರತಿಬಿಂಬವೇ ಸಾಹಿತ್ಯದಲ್ಲಿ ರೂಪಿತವಾಗುತ್ತದೆ. ಸಮಾಜದ ರೂಪುರೇಷೆಗಳು, ಏರಿಳಿತಗಳು, ಅಭ್ಯುದಯಗಳ ನಿಶ್ಚಯಾತ್ಮಕ ವಾದ ಜ್ಞಾನ ನಮಗೆ ಸಮಕಾಲೀನ ಸಾಹಿತ್ಯದಿಂದ ಪ್ರತಿಫ‌ಲಿಸುತ್ತದೆ ಎಂದರು.

ಸಾಹಿತ್ಯದ ಅಧ್ಯಯನವೇ ಸ್ವರ್ಗ ಶಿಸ್ತು ಇಲ್ಲದ ಶಾಲೆ, ದಯೆ ಇಲ್ಲದ ಧರ್ಮ, ಪಾಲನೆ ಇಲ್ಲದ ಬೋಧನೆ ವ್ಯರ್ಥ. ಸಾಹಿತ್ಯದ ಮೂಲಕ ಆಧ್ಯಾತ್ಮಿಕ, ಧಾರ್ಮಿಕ, ಮಾನವೀಯ, ಸಾಂಸ್ಕೃತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಡಾ| ಹೆಗ್ಗಡೆ ಚಿಂತನೆ ಅಸದೃಶ ಶ್ರೀ ಕ್ಷೇತ್ರದಲ್ಲಿ ಡಾ| ಹೆಗ್ಗಡೆ ಅವರ ಪರಿಕಲ್ಪನೆಯಲ್ಲಿ ನಡೆದು ಬರುತ್ತಿರುವ ಸಾಹಿತ್ಯ ಸಮ್ಮೇಳನ ಹೆಗ್ಗಡೆಯವರ ಪರಂಪರೆಯ ವ್ಯಕ್ತಿತ್ವವನ್ನು ಪ್ರಜ್ವಲಿಸುತ್ತಿದೆ. ಕ್ಷೇತ್ರದ ಜನಜಾಗೃತಿ, ಸ್ವ-ಉದ್ಯೋಗ ಪರಿಕಲ್ಪನೆ, ಆಯುರ್ವೇದಕ್ಕೆ ನೀಡಿದ ಮನ್ನಣೆ, ದೇಗುಲ ಜೀರ್ಣೋದ್ಧಾರ, ಶಿಕ್ಷಣ ಕ್ರಾಂತಿಯೆಡೆಗಿನ ಚಿಂತನಾ ಲಹರಿ ಅಸದೃಶ ಎಂದು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ ಖ್ಯಾತ ವಿಮರ್ಶಕ, ಹಿರಿಯ ಸಾಹಿತಿ ಡಾ| ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಧರ್ಮದ ನಡೆ ಸಮಾಜದ ಕಡೆಗಿರಬೇಕು. ಧರ್ಮಕ್ಕೆ ಬೇಕಿರುವುದು ಮಾತೃಹೃದಯ. ಅದು ಧರ್ಮಸ್ಥಳದಲ್ಲಿ ವಾತ್ಸಲ್ಯ ಯೋಜನೆಯ ಮೂಲಕ ಸಾಕಾರಗೊಂಡಿದೆ ಎಂದರು.

ದೇವರನ್ನು ಅಥವಾ ದೇವಸ್ಥಾನಗಳನ್ನು ಆದಾಯದ ಶ್ರೀಮಂತಿಕೆಯಿಂದ ಅಳೆಯ ದಿರಿ. ಬದಲಾಗಿ ಜನಕಲ್ಯಾಣಕ್ಕಾಗಿ ತೊಡಗಿ ಸಿದ ಸೇವೆಯನ್ನು ಗೌರವಿಸಿ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಮಾನವ ಜೀವನಕ್ಕೆ ಹಿತವನ್ನುಂಟು ಮಾಡುವುದೇ ಸಾಹಿತ್ಯದ ಉದ್ದೇಶವಾಗಿದೆ. ಧರ್ಮ ಮತ್ತು ಸಾಹಿತ್ಯ ಮಾನವ ಜೀವನದ ಏಳಿಗೆಗೆ ಪೂರಕ ಮತ್ತು ಪ್ರೇರಕವಾಗಿದೆ. ಸರ್ವರ ಹಿತರಕ್ಷಣೆಯೊಂದಿಗೆ ಭಾಷಾ ಸಾಮರಸ್ಯ ಭಾಷಾಭಿಮಾನದ ಜತೆಗೆ ಮಾನವೀಯ ಮೌಲ್ಯಗಳ ಉದ್ದೀಪನ ಹಾಗೂ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕಾಗಿ ಸಾಹಿತ್ಯ ಅಗತ್ಯ ಎಂದರು.

ಸಮ್ಮೇಳನದಲ್ಲಿ ಉಪನ್ಯಾಸ ಪಂಪನ ಆದಿ ಪುರಾಣದಲ್ಲಿ ಜೀವನ ವೃಷ್ಟಿ ವಿಚಾರವಾಗಿ ಮೈಸೂರಿನ ಪ್ರಾಧ್ಯಾಪಕಿ, ಸಂಸ್ಕೃತ ಚಿಂತಕಿ ಡಾ| ಜ್ಯೋತಿ ಶಂಕರ್‌, ಲಿಪಿ-ಭಾಷೆ ಹಾಗೂ ಸಂಸ್ಕೃತಿ ವಿಚಾರವಾಗಿ ವಿಶ್ರಾಂತ ಪ್ರಾಧ್ಯಾಪಕ ಡಾ| ಪುಂಡಿಕಾಯ್ ಗಣಪಯ್ಯ ಭಟ್‌ ಉಪನ್ಯಾಸ ನೀಡಿದರು.

ಸಮ್ಮೇಳನದ ಅಧ್ಯಕ್ಷರು ಹಾಗೂ ಉದ್ಘಾಟಕರನ್ನು ಡಾ| ಹೆಗ್ಗಡೆಯವರು ಗೌರವಿಸಿದರು. ಡಿ. ಹರ್ಷೇಂದ್ರ ಕುಮಾರ್‌ ಉಪನ್ಯಾಸಕರನ್ನು ಗೌರವಿಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಡಿ. ರಾಜೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌, ನೀತಾ ರಾಜೇಂದ್ರ ಕುಮಾರ್‌, ಅಮಿತ್‌ ಕುಮಾರ್‌, ಶ್ರದ್ಧಾ ಅಮಿತ್‌ ಉಪಸ್ಥಿತರಿದ್ದರು.

ಉಜಿರೆ ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆ ಪ್ರಾಜೆಕ್ಟ್ ನಿರ್ದೇಶಕ ಡಿ. ಶ್ರೇಯಸ್‌ ಕುಮಾರ್‌ ಹಾಗೂ ಮೈತ್ರಿ ನಂದೀಶ್‌ ಸಮ್ಮಾನ ಪತ್ರ ವಾಚಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಡಾ| ಬಿ.ಪಿ. ಸಂಪತ್‌ ಕುಮಾರ್‌ ಕಾರ್ಯಕ್ರಮ ನಿರ್ವಹಿಸಿ, ರುಡ್‌ ಸೆಟ್‌ ನಿರ್ದೇಶಕ ಪಿ.ಸಿ. ಹಿರೇಮಠ ವಂದಿಸಿದರು.

ಧರ್ಮಸ್ಥಳ ಪಂಚದಾನ ಶ್ರೇಷ್ಠ
ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯ ದಾನ ಎಂಬ ಚತುರ್ವಿಧದಾನದೊಂದಿಗೆ ಡಾ| ಹೆಗ್ಗಡೆಯವರು ಯುವ ಜನತೆಯಲ್ಲಿ ಮತ್ತು ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವ ಸ್ವಶಕ್ತಿ ದಾನವನ್ನು ಅಳವಡಿಸಿಕೊಂಡು ಕ್ರಾಂತಿ ಕಾರಿ ಸುಧಾರಣೆ ಮಾಡಿದ್ದಾರೆ. ಅದಕ್ಕಾಗಿ ಧರ್ಮಸ್ಥಳ ಚತುರ್ದಾನ ಕ್ಕಿಂತಲೂ ಪಂಚದಾನ ಶ್ರೇಷ್ಠ ಎಂದು ಬಣ್ಣಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.