ಜನವಸತಿ ಇಲ್ಲದ ಕಡೆಗೆ ನಗರಸಭೆಯಿಂದ ಕಾಂಕ್ರೀಟ್‌ ರಸ್ತೆಯ ಕೊಡುಗೆ!


Team Udayavani, Sep 18, 2019, 5:00 AM IST

e-32

ಜನವಸತಿಯೇ ಇಲ್ಲದ ಪ್ರದೇಶಕ್ಕೆ ನಗರಸಭೆ ವತಿಯಿಂದ ರಸ್ತೆ ಕಾಂಕ್ರೀಟ್‌ ಕಾಮಗಾರಿ ನಡೆಸಲಾಗುತ್ತಿದೆ.

ನಗರ: ಜನವಸತಿ ಹೆಚ್ಚಾದಂತೆ ನೂರಾರು ಕಡೆಗಳಲ್ಲಿ ರಸ್ತೆ ಮೂಲ ಸೌಕರ್ಯ ಹೆಚ್ಚಿಸುವ ಬೇಡಿಕೆ ಹೆಚ್ಚುತ್ತಿದ್ದರೂ ಅದನ್ನು ಪೂರೈಸಲು ಆಡಳಿತ ವ್ಯವಸ್ಥೆಗೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮಾತ್ರ ಸದ್ಯಕ್ಕೆ ಜನವಸತಿಯೇ ಇಲ್ಲದ ಕಡೆಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣ ಸಾಧ್ಯವಾಗಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ನಗರ ವ್ಯಾಪ್ತಿಯ ಸಾಮೆತ್ತಡ್ಕದಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಈ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗುತ್ತಿದೆ. ಆದರೆ ಆ ಭಾಗದಲ್ಲಿ ಯಾವುದೇ ಮನೆಗಳಿಲ್ಲ. ಇಂತಹ ಕಡೆಗೂ ರಸ್ತೆ ನಿರ್ಮಾಣ ಮಾಡಲು ನಗರಸಭೆ ಮುಂದಾಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.

ಉದ್ಯಮಿಗೆ ವರದಾನ?
ನಗರಸಭಾ ದಾಖಲೆಗಳ ಪ್ರಕಾರ ರಸ್ತೆ ನಿರ್ಮಾಣವಾಗಿರುವ ಬಳಿ ಇರುವ ಈ ಪಾಳು ಭೂಮಿ ಉದ್ಯಮಿಯೊಬ್ಬರಿಗೆ ಸೇರಿದ ಸ್ಥಳವಾಗಿದೆ. ಉದ್ಯಮಿಯ ಮನೆಗೆ ದಾರಿ ಎಂದೇ ದಾಖಲಾಗಿದೆ. ಆದರೆ ಆ ಉದ್ಯಮಿಯ ಮನೆ ಅಲ್ಲಿಂದ ದೂರದ ಪಾಂಗಳಾಯಿ ಎಂಬ ಪ್ರದೇಶದಲ್ಲಿದೆ. ಪೂರ್ವಭಾವಿ ಚಿಂತನೆಯೊಂದಿಗೆ ಇಲ್ಲಿಗೆ ರಸ್ತೆ ವ್ಯವಸ್ಥೆ ಮಾಡಲಾಗಿದೆಯೇ ಎನ್ನುವ ಅನುಮಾನ ಸಾರ್ವಜನಿಕ ವಲಯದಲ್ಲಿದೆ.

ಬೇಡಿಕೆಗೆ ಇಲ್ಲ ಸ್ಪಂದನೆ
ನಗರಸಭಾ ವ್ಯಾಪ್ತಿಯಲ್ಲಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬೇಡಿಕೆ ಇದೆ. ಇಂತಹ ಸಮಸ್ಯೆಗಳ ಮಧ್ಯೆ ಜನವಸತಿಯೇ ಇಲ್ಲದ ಪಾಳುಭೂಮಿಗೂ ಸರಕಾರಿ ವ್ಯವಸ್ಥೆಯಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಸ್ಥಳೀಯಾಡಳಿತ ಮುಂದಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ. ಸ್ಥಳೀಯವಾಗಿ ಕಲ್ಲಾರೆಯಿಂದ ಸಾಮೆತ್ತಡ್ಕಕ್ಕೆ ಹೋಗುವ ರಸ್ತೆ ದುರಸ್ತಿಗಾಗಿ ಇಲ್ಲಿನ ಜನತೆ ಹಲವಾರು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಆದರೆ ಈ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ

ಉದ್ಯಮಿಗಳು ಹೇಳಿದ ತತ್‌ಕ್ಷಣ ಅನಗತ್ಯವಾಗಿರುವ ಕಡೆಗಳಿಗೂ ರಸ್ತೆ ನಿರ್ಮಿಸಲು ನಗರಸಭೆಯಲ್ಲಿ ಅನುದಾನವಿದೆ. ಆದರೆ ಜನಸಾಮಾನ್ಯರ ಬೇಡಿಕೆಗಳಿಗೆ ಸ್ಪಂದಿಸುವುದಿಲ್ಲ. ಇಲ್ಲಿ ಯಾವುದೇ ಮನೆಗಳಿಲ್ಲ. ಆದರೂ ನಗರಸಭೆ ವತಿಯಿಂದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಸ್ಥಳೀಯ ವ್ಯಾಪಾರಿಯೋರ್ವರು.

 ನಿರ್ಣಯವಾಗಿ ಅನುಮತಿ
ನಗರಸಭೆಯ ಹಿಂದಿನ ಆಡಳಿತದ ಅವಧಿಯಲ್ಲಿ ಕೌನ್ಸಿಲ್‌ ಮೀಟಿಂಗ್‌ನಲ್ಲಿ ನಿರ್ಣಯಗೊಂಡು ಅನುಮತಿ ಪಡೆದ ಕಾಮಗಾರಿ ಇದಾಗಿದೆ. ಈ ಕಾರಣದಿಂದ ಕಾಮಗಾರಿಯನ್ನು ಬಾಕಿ ಬಿಡಲು ಸಾಧ್ಯವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಜನವಸತಿಗೆ ಪ್ರಯೋಜನವಾಗುವ ದೃಷ್ಟಿಯನ್ನೂ ಹೊಂದಿರಬಹುದು.
 - ರೂಪಾ ಟಿ. ಶೆಟ್ಟಿ, ಪೌರಾಯುಕ್ತರು, ನಗರಸಭೆ ಪುತ್ತೂರು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.