ಮಾಹಿತಿ ಮರೆಮಾಚಿದ ಶಂಕಿತ ಕೋವಿಡ್ ಬಾಧಿತ

ಪುತ್ತೂರು ಆಸ್ಪತ್ರೆಯಿಂದ ಪಲಾಯನ?; ವೆನ್ಲಾಕ್ ಗೆ ದಾಖಲು

Team Udayavani, Mar 19, 2020, 6:37 AM IST

ಮಾಹಿತಿ ಮರೆಮಾಚಿದ ಶಂಕಿತ ಕೊರೊನಾ ಬಾಧಿತ

ರೋಗಿಯ ಸಾಗಾಟಕ್ಕೆ ಆ್ಯಂಬುಲೆನ್ಸ್‌

ಪುತ್ತೂರು: ದುಬಾೖಯಿಂದ ಆಗಮಿಸಿದ ವಿಟ್ಲ ಕಂಬಳಬೆಟ್ಟಿನ ಜ್ವರ ಪೀಡಿತನೊಬ್ಬ ನೈಜ ಹೆಸರು ಹಾಗೂ ಮಾಹಿತಿಯನ್ನು ಮರೆಮಾಚಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಗೊಂದಲ, ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆದಿದೆ. ಮಾ. 7ರಂದು ಮನೆಗೆ ಮರಳಿದ್ದ ಆತ ಮಂಗಳವಾರ ರಾತ್ರಿ ಜ್ವರ ಬಾಧಿತನಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ನೋಂದಣಿ ಸಂದರ್ಭ ದುಬಾೖಯಿಂದ ಮರಳಿ ರುವ ವಿಚಾರವನ್ನಾಗಲೀ ನೈಜ ಹೆಸರು, ವಿಳಾಸವನ್ನಾಗಲೀ ನೀಡದೆ ಜ್ವರ ಬರುತ್ತಿದೆ, ಶೀತವಾಗಿದೆ ಎಂದಷ್ಟೇ ಹೇಳಿದ್ದ ಎನ್ನಲಾಗಿದೆ.

ಬುಧವಾರ ಬೆಳಗ್ಗೆ ಈತನ ಕುರಿತು ಅನುಮಾನಗೊಂಡ ವೈದ್ಯರು ಮನೆಗೆ ಕರೆ ಮಾಡಿದಾಗ ಆತ ದುಬಾೖಯಿಂದ ಮರಳಿರುವ ವಿಚಾರ ತಿಳಿಯಿತು. ತತ್‌ಕ್ಷಣ ಅವರು ಪುತ್ತೂರು ಸಹಾಯಕ ಕಮಿಷನರ್‌ಗೆ ಮಾಹಿತಿ ನೀಡಿದ್ದು, ಅವರು ಆತನನ್ನು ಮಂಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು.  ಆತ ದಾಖಲಾಗಿದ್ದ ಖಾಸಗಿ ಆಸ್ಪತ್ರೆಗೆ ಪುತ್ತೂರು ತಹಶೀಲ್ದಾರ್‌ ರಮೇಶ್‌ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದರು.

ನಾಪತ್ತೆ ?
ರೋಗಿಯನ್ನು ಮಂಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅಷ್ಟರಲ್ಲಿ ಡಿಸ್ಚಾರ್ಜ್‌ ಪ್ರಕ್ರಿಯೆ ಪೂರ್ಣಗೊಳಿಸಿದ ರೋಗಿಯು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ. ಬಳಿಕ ಆಸ್ಪತ್ರೆಯ ಸಿಸಿ ಕೆಮರಾದಲ್ಲಿ ಪರಿಶೀಲಿಸಿದಾಗ ಮನೆಯವರು ಕರೆದೊಯ್ದಿರುವುದು ಪತ್ತೆಯಾಗಿದೆ.

ಸುಖಾಂತ್ಯ
ವ್ಯಕ್ತಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಮನೆಯವರು ವಿಟ್ಲ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿರುವ ಮಾಹಿತಿ ಲಭಿಸಿತು. ರೋಗಿಯು ಪುತ್ತೂರಿನಿಂದ ಬಂದಿರುವುದಾಗಿ ಅಲ್ಲಿ ಮಾಹಿತಿ ನೀಡಿದ್ದಾನೆ. ಈ ನಡುವೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದ ಕೊರೊನಾ ಶಂಕಿತ ರೋಗಿ ಪರಾರಿಯಾಗಿದ್ದಾನೆ ಎಂಬ ವಿಚಾರ ನಗರದಾದ್ಯಂತ ಹರಡಿ ಒಂದಷ್ಟು ಆತಂಕ ಸೃಷ್ಟಿಯಾಯಿತು.

ರೋಗಿ ಮೇಲೆ ನಿಗಾ
ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಜ್ವರ-ಶೀತದಿಂದ ಬಳಲುತ್ತಿದ್ದಾರೆ. ವಿದೇಶದಿಂದ ಬಂದವರಾದರೂ ಮಾಹಿತಿ ಸಂಗ್ರಹದ ವೇಳೆ ಸರಿಯಾಗಿ ಸ್ಪಂದಿಸಿರಲಿಲ್ಲ. ಆದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುರ್ತಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲಿಸಲಾಗಿದೆ. ಆತನ ವಿಚಾರದಲ್ಲಿ ವಿಶೇಷ ನಿಗಾ ವಹಿಸಲಾಗಿದೆ.
– ಡಾ| ಯತೀಶ್‌ ಉಳ್ಳಾಲ್‌, ಸಹಾಯಕ ಕಮಿಷನರ್‌

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.