ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ಮನೀಶ್ ಪಾಂಡೆ ದಂಪತಿ
Team Udayavani, Mar 7, 2020, 3:48 PM IST
ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಖ್ಯಾತ ಮನೀಶ್ ಪಾಂಡೆ ದಂಪತಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮನೀಷ್ ಪಾಂಡೆ ತನ್ನ ಪತ್ನಿ ಆಶ್ರಿತಾ ಶೆಟ್ಟಿ ಜೊತೆಗೂಡಿ ನಾಗರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಆಗಮಿಸಿದ್ದು, ಪೂಜೆ ಸಲ್ಲಿಸಿ ಶ್ರೀ ದೇವರ ಆಶೀರ್ವಾದ ಪಡೆದರು.
ಶುಕ್ರವಾರ ರಾತ್ರಿಯೇ ಕುಕ್ಕೆಗೆ ಆಗಮಿಸಿದ್ದ ದಂಪತಿ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಇಂದು ದೇವಸ್ಥಾನಕ್ಕಾಗಮಿಸಿ ಆಶ್ಲೇಷ ಪೂಜೆ ಸಲ್ಲಿಸಿದರು. ಸ್ನೇಹಿತರು ಪಾಂಡೆ ದಂಪತಿಗೆ ಸಾಥ್ ನೀಡಿದರು.
ಇತ್ತೀಚೆಗಷ್ಟೇ ನಡೆದ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಭಾರತ ತಂಡದ ಪರ ಟಿ20 ಮತ್ತು ಏಕದಿನ ತಂಡದಲ್ಲಿ ಮನೀಶ್ ಪಾಂಡೆ ಆಡಿದ್ದರು. ನಂತರ ಕರ್ನಾಟಕದ ಪರ ರಣಜಿ ಕ್ವಾರ್ಟರ್ ಫೈನಲ್ ಮತ್ತು ಸೆಮಿ ಫೈನಲ್ ಆಡಿದ್ದರು. ಮನೀಶ್ ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.
ಮನೀಶ್ ಪಾಂಡೆ ಅವರು ಕಳೆದ ವರ್ಷ ಡಿಸೆಂಬರ್ 2ರಂದು ಮಂಗಳೂರು ಮೂಲದ, ಸದ್ಯ ಮುಂಬೈನಲ್ಲಿ ನೆಲೆಸಿರುವ ನಟಿ ಆಶ್ರಿತಾ ಶೆಟ್ಟಿಯವರನ್ನು ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’