ಉಪ್ಪಿನಂಗಡಿ: ಬಸ್- ಕಾರು ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
Team Udayavani, Aug 3, 2022, 12:00 AM IST
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಕಾರು ಮತ್ತು ಬಸ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಗಾಯಾಳುಗಳನ್ನು ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಎಂದು ಗುರುತಿಸಲಾಗಿದೆ.
ಇವರಿಬ್ಬರು ಕಾರ್ಯನಿಮಿತ್ತ ಕಾರಿನಲ್ಲಿ ಸಕಲೇಶಪುರದ ಕಡೆಗೆ ಹೋದವರು ರಾಮಕುಂಜಕ್ಕೆ ಹಿಂತಿರುಗುತ್ತಿದ್ದಾಗ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಕಾಲು ಮತ್ತು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು- ಬೈಕ್ ಢಿಕ್ಕಿ
ಕಾರು ಮತ್ತು ಬಸ್ ನಡುವಿನ ಅಪಫಾತಕ್ಕೂ ಸ್ವಲ್ಪ ಮೊದಲು ಅದೇ ಸ್ಥಳದಲ್ಲಿ ಕಾರು ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ, ಬೆಂಗಳೂರು ಮೂಲದ ಭರತ್ (24) ಅವರು ಗಾಯಗೊಂಡಿದ್ದು ಅವರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು