ವಸತಿ ಸಮುಚ್ಚಯದಿಂದ ಬಿದ್ದು ಬಾಲಕ ಸಾವು: ಸಮಗ್ರ ತನಿಖೆ ನಡೆಸಲು ತಂದೆಯಿಂದ ದೂರು
Team Udayavani, Aug 7, 2022, 11:38 PM IST
ಪುತ್ತೂರು: ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಮೃತಪಟ್ಟ ಸುದಾನ ವಸತಿಯುತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ ಅವರ ಅಂತ್ಯಕ್ರಿಯೆ ಪುತ್ತೂರು ಮಡಿವಾಳಕಟ್ಟೆ ಶ್ಮಶಾನದಲ್ಲಿ ಆ. 6ರ ಸಂಜೆ ನಡೆಯಿತು. ಈ ಮಧ್ಯೆ ಮೃತ ಬಾಲಕನ ತಂದೆ ಮನೋಹರ್ ರೈಯವರು ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಆ. 5ರ ಸಂಜೆ ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತತ್ಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದರು. ಮೃತ ಸುಶಾನ್ ರೈಯವರ ತಂದೆ ಮನೋಹರ್ ರೈಯವರು ನೀಡಿದ ದೂರಿನಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾರಿ ಬದಲಿಸಿದ್ದ ಸುಶಾನ್
ಸುಶಾನ್ ರೈ ಅವರನ್ನು ಬೆಳಗ್ಗೆ ಅವರ ತಂದೆ ಮನೋಹರ್ ರೈ ಅವರು ಶಾಲೆಗೆ ಬಿಟ್ಟು ಬರುತ್ತಿದ್ದು, ಸಂಜೆ ಆತ ಆಟೋ ರಿಕ್ಷಾದಲ್ಲಿ ಬೊಳುವಾರಿಗೆ ಬಂದು ಅಲ್ಲಿಂದ ಹರಿಪ್ರಸಾದ್ ಹೊಟೇಲ್ ಪಕ್ಕದ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ. ಆ. 5ರಂದು ಎಂದಿನಂತೆ ಸಂಜೆ ಆಟೋ ರಿಕ್ಷಾದಲ್ಲಿ ಬಂದ ಸುಶಾನ್ ರೈ, ಬೊಳುವಾರಿನಲ್ಲಿ ಇಳಿದು ಬಳಿಕ ನಿತ್ಯ ಹೋಗುವ ರಸ್ತೆಯನ್ನು ಬದಲಾಯಿಸಿ ಬೊಳುವಾರು ವಸತಿ ಸಮುಚ್ಚಯದ ಬಳಿಯ ರಸ್ತೆಯಿಂದ ಮನೆ ಕಡೆಗೆ ಹೊರಟ್ಟಿದ್ದರು. ಆದರೆ ಮನೆ ಕಡೆ ಹೋಗದೆ ವಸತಿ ಸಮುಚ್ಚಯಕ್ಕೆ ಹೋಗಿದ್ದಾರೆ.. ಕೆಲವೇ ಕ್ಷಣದಲ್ಲಿ ಅವರು ಮಹಡಿಯಿಂದ ಬಿದ್ದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್