ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು
Team Udayavani, Aug 9, 2022, 12:11 AM IST
ವಿಟ್ಲ: ಅನಂತಾಡಿ ಗ್ರಾಮದ ಬಂಟ್ರಿಂಜದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.
ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ, ಅನಂತಾಡಿ ಗ್ರಾಮದ ಬಂಟ್ರಿಂಜ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ ಲಿಖಿತಾ (11)ಮೃತರು.
ತಾಯಿ ಚಂದ್ರಾವತಿ ದಿನಸಿ ಸಾಮಗ್ರಿ ತರಲೆಂದು ಹತ್ತಿರದ ಅಂಗಡಿಗೆ ತೆರಳಿದ್ದಾಗ ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದು, ಜೋಕಾಲಿಗೆ ಕಟ್ಟಿದ ಹಗ್ಗ ಆಕೆಯ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
ಮೃತ ಬಾಲಕಿ ತಂದೆ-ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲಿಸುತ್ತಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ