ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ


Team Udayavani, Aug 14, 2022, 12:38 AM IST

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ಪೇಟೆಯ ಹೃದಯ ಭಾಗದಲ್ಲಿ ಬ್ಯಾಂಕ್‌, ಹೊಟೇಲ್‌, ಮೆಡಿಕಲ್‌ ಶಾಪ್‌ಗೆ ನುಗ್ಗಿದ ಕಳ್ಳನೋರ್ವ, ಕಳವುಗೈಯುವ ಭರದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿಕೊಂಡು ಹೋದ ಘಟನೆ ನಡೆದಿದೆ.

ಇಲ್ಲಿನ ಗ್ರಾ.ಪಂ. ಕಚೇರಿ ಪಕ್ಕದಲ್ಲಿರುವ ಮೂರ್ತೆದಾರರ ಬ್ಯಾಂಕ್‌ನ ಮುಂಭಾಗದ ಬಾಗಿಲು ಒಡೆಯಲು ಯತ್ನಿಸಿದ್ದ. ಅದು ವಿಫ‌ಲವಾದಾಗ ಸನಿಹದಲ್ಲೆ ನಿಲ್ಲಿಸಿ ಹೋದ ಪಿಕಪ್‌ ವಾಹನದಲ್ಲಿರುವ ರಾಡ್‌ ಅನ್ನು ಬಳಸಲು ಯತ್ನಿಸಿದ್ದ. ಪಿಕಪ್‌ ಬಾಗಿಲು ತೆಗೆಯಲು ಅಸಾಧ್ಯವಾದಾಗ ಮುಂಭಾಗದ ಗಾಜು ಒಡೆದು ರಾಡು ತೆಗೆದು ಬ್ಯಾಂಕ್‌ನ ಬಾಗಿಲು ಒಡೆಯುವುದನ್ನು ಬಿಟ್ಟು ಪಕ್ಕದ ಹೊಟೇಲ್‌ಗೆ ನುಗ್ಗಿದ್ದ. ಅಲ್ಲಿ ಐದು ಸಾವಿರ ರೂ.ಗೂ ಹೆಚ್ಚಿನ ಹಣದೊಂದಿಗೆ ಪರಾರಿಯಾಗಿದ್ದ.

ಸಿಸಿ ಕೆಮರಾ ತುಂಡರಿಸಿದ್ದ
ಅನಂತರ ಆ ಕಳ್ಳ ಪಕ್ಕದ ಕ್ಲಿನಿಕ್‌ನ ಹಿಂಭಾಗದ ಕಿಟಕಿಯ ರಾಡ್‌ ಮುರಿದು ಒಳನುಗ್ಗಿ ಅಲ್ಲಿಯೂ ಜಾಲಾಡಿ ಸುಮಾರು ಐದು ಸಾವಿರ ರೂ. ಕಳವುಗೈದು ಅಲ್ಲಿಂದ ಹಿಂದಿರುಗುವ ವೇಳೆ ಅಲ್ಲಿದ್ದ ಸಿಸಿ ಕೆಮರಾವನ್ನು ಗಮನಿಸಿದ್ದ. ಇನ್ನು ತನ್ನ ಗುರುತು ಪತ್ತೆಯಾಗಬಹುದು ಎಂದುಕೊಂಡು ಅದರ ಸಂಪರ್ಕವನ್ನು ತುಂಡರಿಸಿ ಬಿಟ್ಟ. ಈ ವೇಳೆ ಆತನ ತಲೆಯ ಭಾಗಕ್ಕೆ ಹಿಂಭಾಗದ ಬಾಗಿಲು ಬಡಿದಿದೆ. ಅದರ ಹೊಡೆತಕ್ಕೆ ತೀವ್ರ ಗಾಯವುಂಟಾಗಿ ರಕ್ತ ಬರತೊಡಗಿದೆ. ಈ ಕಳ್ಳ ದಿಕ್ಕು ತೋಚದೆ ಅಲ್ಲಿಂದ ಪರಾರಿಯಾಗಿದ್ದ. ಈತ ಮರಳಿ ಹೋದಲ್ಲೆಲ್ಲ ರಕ್ತ ಒಸರಿದೆ. ಅಲ್ಲಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ.

ಮೆಡಿಕಲ್‌ ಶಾಪ್‌ ಮಾಲಕ ಡಾ| ಸಂತೋಷ್‌, ಪಿಕಪ್‌ ವಾಹನದ ಚಾಲಕ ಯಶೋಧರ, ಮೂತೇìದಾರರ ಬ್ಯಾಂಕ್‌ನ ವ್ಯವಸ್ಥಾಪಕರು ದೂರು ನೀಡಿದ್ದು, ಪೊಲೀಸರು ಕಳ್ಳನ ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಕಳ್ಳನ ಬಂಧನ
ಮೆಡಿಕಲ್‌ನಲ್ಲಿದ್ದ ಸಿಸಿ ಕೆಮರಾದಲ್ಲಿ ಕಳ್ಳನ ಮುಖದ ಸಂಪೂರ್ಣ ಚಹರೆ ಪತ್ತೆಯಾಗಿದೆ. ಆ ಕಳ್ಳ ಸ್ಥಳೀಯ ವ್ಯಕ್ತಿಯಾಗಿದ್ದು, ಜನಸಾಮಾನ್ಯರಿಗೆ ಚಿರಪರಿಚಿತನಾಗಿದ್ದ. ಈ ನಿಟ್ಟಿನಲ್ಲಿ ತನಿಖೆ ಕೈಗೆತ್ತಿಕೊಂಡ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಮನೆ ನಿವಾಸಿ ಅಬ್ದುಲ್‌ ಖಾದರ್‌ ಅವರ ಮಗ ಅಶ್ರಫ್ (37). ಪುತ್ತೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣದಲ್ಲೂ ಆರೋಪಿ ಯಾಗಿರುತ್ತಾನೆ. ಗುರುವಾಯನಕೆರೆ ಸಮೀಪ ಈತನನ್ನು ಬಂಧಿಸಿದ್ದಾರೆ.

ಕಸ ವಿಲೇವಾರಿಗೆ ಬಂದು
ಕಳ್ಳತನಕ್ಕೆ ಸ್ಕೆಚ್‌ ಹಾಕುತ್ತಿದ್ದ
ಬಂಧಿತ ಆರೋಪಿಯು ತಣ್ಣಿರುಪಂತ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣ ಕಾರ್ಯದಲ್ಲಿ ಕೆಲಸ ನಿರ್ವಹಿಸುತ್ತ ಕಳವು ಕೃತ್ಯಕ್ಕೆ ಯೋಗ್ಯ ಸ್ಥಳವನ್ನು ಗುರುತಿಸುತ್ತಿದ್ದನೆಂದೂ ತನಿಖೆಯ ವೇಳೆ ತಿಳಿದು ಬಂದಿದೆ. ಕಳವುಗೈದು ದೊರಕಿದ ಹಣದಿಂದ ಮೋಜು ಮಸ್ತಿ ನಡೆಸಿ ಚೀಲ ತುಂಬಾ ಹಣ್ಣು ಖರೀದಿಸಿ ಮನೆಯ ದಾರಿ ಹಿಡಿಯುವ ಯತ್ನದಲ್ಲಿದ್ದಾಗಲೇ ಪೊಲೀಸರ ವಶಕ್ಕೆ ಒಳಗಾದಂತಾಗಿದೆ.

 

 

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.