ಧ್ವಜ ಹಾರಿಸುವ ವೇಳೆ ಘಟನೆ: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸುಳ್ಯದ ಯುವಕ ಸಾವು
Team Udayavani, Aug 15, 2022, 10:26 PM IST
ಸುಳ್ಯ: ಹರ್ಘರ್ ತಿರಂಗಾ ಅಭಿಯಾನದ ಪ್ರಯುಕ್ತ ತಾವು ವಾಸಿಸುತ್ತಿದ್ದ ಕಟ್ಟಡದ 2ನೇ ಮಹಡಿಯ ಟೆರೇಸ್ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸುಳ್ಯ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ರವಿವಾರ ಸಂಭವಿಸಿದೆ.
ಮೂಲತಃ ದ.ಕ. ಜಿಲ್ಲೆಯ ಸುಳ್ಯದ ಬೂಡು ಭಗವತಿ ದೇವಸ್ಥಾನ ಬಳಿಯ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಇದ್ದು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ (ಮೂಲತಃ ವಿಟ್ಲ ಸಮೀಪದ ಎತ್ತುಕಲ್ಲು ಪುರೋಹಿತ ಮನೆತನದವರು) ನಾರಾಯಣ ಭಟ್ ಅವರ ಪುತ್ರ ವಿಶ್ವೇಶ ಕುಮಾರ್ (33) ಮೃತರು. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಹೆಣ್ಣೂರು ಎಚ್ಬಿಆರ್ಲೇಔಟ್ 5ನೇ ಬ್ಲಾಕ್ನಲ್ಲಿ ತಮ್ಮ ಕಟ್ಟಡದ ಟೆರೇಸ್ಗೆ ರಾಷ್ಟ್ರಧ್ವಜ ಹಾರಿಸುವ ಸಲುವಾಗಿ ಹೋಗಿದ್ದರು.
ಎರಡು ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಅವರು ಪತ್ನಿ ಹಾಗೂ ಎರಡು ವರ್ಷದ ಮಗಳು ಮತ್ತು ಪೋಷಕರ ಜತೆ ವಾಸವಿದ್ದರು. ಸುಳ್ಯದಲ್ಲಿದ್ದ ನಾರಾಯಣ ಭಟ್ ಕುಟುಂಬ ಮಗನಿಗೆ ಉದ್ಯೋಗ ಸಿಕ್ಕಿ, ಮದುವೆಯಾದ ಬಳಿಕ ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು