ಅರಂತೋಡು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Team Udayavani, Sep 11, 2022, 11:48 PM IST
ಅರಂತೋಡು: ಇಲ್ಲಿನ ಹೊನ್ನಪ್ಪ ಮಡಿವಾಳ ಅವರ ಪುತ್ರ ಕೇಶವ(33) ರವಿವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಶನಿವಾರ ಮನೆಯ ಸದಸ್ಯರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದು, ಕೇಶವ ಅವರು ಮಾತ್ರ ಮನೆಯಲ್ಲಿದ್ದರು. ತಾಯಿ ರಾತ್ರಿ ಕರೆ ಮಾಡಿದಾಗ ತಾನು ನೆಂಟರ ಮನೆಗೆ ಹೋಗುವುದಾಗಿ ತಿಳಿಸಿದ್ದರೆನ್ನಲಾಗಿದೆ.
ದೇವಸ್ಥಾನಕ್ಕೆ ತೆರಳಿದ್ದವರು ರವಿವಾರ ಬೆಳಗ್ಗೆ ಮನೆಗೆ ಬಂದು ಬಾಗಿಲು ತೆರೆದು ನೋಡಿದಾಗ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಅವಿವಾಹಿತರಾಗಿರುವ ಅವರು ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಮನೆಯಿಂದ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಯುವಕನ ಡೆತ್ನೋಟ್ ದೊರೆತಿದ್ದು ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿ, ಸಹೋದರನನ್ನು ಅಗಲಿದ್ದಾರೆ.