ಬೆಳ್ತಂಗಡಿ: ಅಪಘಾತವಾಗಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿ ಸಾವು
Team Udayavani, Oct 26, 2022, 12:41 AM IST
ಬೆಳ್ತಂಗಡಿ: ಪತ್ನಿ ಮತ್ತು ತನ್ನಿಬ್ಬರು ಮಕ್ಕಳ ಸಹಿತ ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಜೂ. 4ರಂದು ರಸ್ತೆ ದಾಟುವ ವೇಳೆಯಲ್ಲಿ ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಉಜಿರೆ ಮಾಚಾರು ನಿವಾಸಿ ಯುವಕ ಅಶ್ರಫ್ ಅವರು ಅ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಚಾರು ಕುದುರು ನಿವಾಸಿ, ಎಸ್ವೈಎಸ್ ಉಜಿರೆ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯ ಹಮೀದ್ ಅವರ ಪುತ್ರರಾಗಿರುವ ಅಶ್ರಫ್ ಅವರಿಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಪಯ್ಯಂಗಡಿಯಲ್ಲಿ ಅಪಘಾತವಾಗಿತ್ತು. ಕಾರಿನಲ್ಲಿ ಪತ್ನಿ, ಮಕ್ಕಳ ಸಮೇತ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಹೋಗಿದ್ದ ಅವರು ಒಂದೆಡೆ ಕಾರಿನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅತಿವೇಗದಿಂದ ಬಂದಿದ್ದ ಬೈಕೊಂದು ಅವರಿಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆ ಬಳಿಕ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆದರೂ ಚೇತರಿಗೆ ಕಂಡಿರಲಿಲ್ಲ.
ಅವರು ಉಪ್ಪಿನಂಗಡಿಯಲ್ಲಿ ಬ್ರೈಟ್ಲುಕ್ ವಸ್ತ್ರ ಮಳಿಗೆ ನಡೆಸುತ್ತಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ