ಉಪ್ಪಿನಂಗಡಿ: ತೆಂಗಿನಕಾಯಿ ವಿಚಾರದ ಗಲಾಟೆಯಲ್ಲಿ ತಂದೆಯನ್ನೇ ಕಡಿದುಕೊಂದ ಮಕ್ಕಳು
Team Udayavani, Jun 15, 2020, 1:14 PM IST
ಪುತ್ತೂರು: ಮನೆಯ ಮರದ ತೆಂಗಿನಕಾಯಿ ಮಾರಾಟದ ವಿಚಾರದಲ್ಲಿ ನಡೆದ ಗಲಾಟೆ ಮಕ್ಕಳಿಬ್ಬರು ಸೇರಿ ತಂದೆಯನ್ನೇ ಕೊಂದು ಹಾಕುವಲ್ಲಿ ಅಂತ್ಯವಾದ ದುರ್ಘಟನೆ ಉಪ್ಪಿನಂಗಡಿಯ ಕರಾಯದಲ್ಲಿ ನಡೆದಿದೆ.
ಈ ಘಟನೆ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ಜೂ.14ರಂದು ಮಧ್ಯರಾತ್ರಿ ನಡೆದಿದ್ದು, ಧರ್ನಪ್ಪ ಪೂಜಾರಿ (65) ಎಂಬವರು ಕೊಲೆಯಾದ ವ್ಯಕ್ತಿ.
ಧರ್ನಪ್ಪನವರ ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬವರು ಕತ್ತಿಯಿಂದ ಕಡಿದು ಕೊಲೆ ನಡೆಸಿದ್ದು, ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಧರ್ನಪ್ಪ ಪೂಜಾರಿಯವರು ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಾಟ ಮಾಡುತ್ತಿದ್ದು, ಇದೇ ವಿಚಾರಕ್ಕೆ ಆಗಾಗ ಪತ್ನಿ, ಮಕ್ಕಳು ಇವರಲ್ಲಿ ಜಗಳ ಮಾಡುತ್ತಿದ್ದರು. ಆದಿತ್ಯವಾರ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ ಮಕ್ಕಳೊಳಗೆ ಜಗಳವಾಗಿದ್ದು, ಈ ಸಂದರ್ಭ ತಂದೆಗೆ ಮಕ್ಕಳು ಕತ್ತಿಯಿಂದ ಕಡಿದಿದ್ದಾರೆ.
ಹಲ್ಲೆಗೊಳಗಾದ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ