ಕಬಕ: ರೈಲು ಢಿಕ್ಕಿ ಹೊಡೆದು ಯುವಕ ಸಾವು
Team Udayavani, May 17, 2022, 7:17 PM IST
ಪುತ್ತೂರು: ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಕಾರ್ತಿಕ್(24) ಮೃತಪಟ್ಟ ಯುವಕ.
ಮಿತ್ತೂರಿನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದ ಕಾರ್ತಿಕ್ ಕೆಲವು ವರ್ಷದ ಹಿಂದೆ ಊರಿಗೆ ಬಂದು ಮೇಸ್ತ್ರಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ಭಟ್ಕಳ: ಲಂಗರು ಹಾಕಿದ ಬೋಟ್ ಪಲ್ಟಿಯಾಗಿ ಲಕ್ಷಾಂತರ ರೂ. ನಷ್ಟ
ಮೂರು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಅವರು ಮೇ 15ರಂದು ರಾತ್ರಿ ಸುಮಾರು 9.30ಕ್ಕೆ ಮನೆಗೆ ಫೋನ್ ಮಾಡಿದ್ದರು. ಬಸ್ ಸಿಗದ ಹಿನ್ನೆಲೆಯಲ್ಲಿ ಮಿತ್ತೂರಿನಲ್ಲಿ ಸೇತುವೆ ಮೂಲಕ ಉಪ್ಪಿನಂಗಡಿ ಸಂಪರ್ಕಿಸುವ ಪ್ರಯತ್ನ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿರಬಹುದು ಎಂದು ರೈಲ್ವೇ ಪೊಲೀಸರು ಶಂಕಿಸಿದ್ದಾರೆ.
ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು