ಕುದ್ಕೋಳಿ: ಗೋ ಕಳ್ಳರಿಂದ ಎಸ್ಐ ಮೇಲೆ ದಾಳಿ; ಪರಾರಿಯಾದ ಕಳ್ಳರು, ವಾಹನ, ಜಾನುವಾರು ವಶಕ್ಕೆ
Team Udayavani, May 15, 2022, 8:39 PM IST
ಪುಂಜಾಲಕಟ್ಟೆ :ಅಕ್ರಮ ಗೋ ಸಾಗಾಟದ ವಾಹನವನ್ನು ನಿಲ್ಲಿಸಲೆತ್ನಿಸಿದ ಎಸ್ಐ ಅವರು ಗೋ ಸಾಗಾಟದ ವಾಹನ ತಾಗಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ಬಂಟ್ವಾಳ ತಾಲೂಕಿನ ಕುದ್ಕೋಳಿ ಎಂಬಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ಐ ಸುತೇಶ್ ಅವರು ಗಾಯಗೊಂಡಿದ್ದು, ಗೋ ಕಳ್ಳರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗೋ ಸಾಗಾಟದ ಮಿನಿ ಲಾರಿಯಲ್ಲಿದ್ದ ಮೂರು ದನಗಳನ್ನು ರಕ್ಷಿಸಲಾಗಿದೆ.
ವಾಮದಪದವು-ಕುದ್ಕೋಳಿ ರಸ್ತೆಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಗಮಿಸಿದ ಮಿನಿಲಾರಿಯನ್ನು ತಪಾಸಣೆಗೈಯ್ಯಲು ಎಸ್ ಐ ಅವರು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೇ ಅವರ ಮೇಲೆ ನುಗ್ಗಿಸಿ ಮುಂದೆ ಸಾಗಿದ ಪರಿಣಾಮ ಎಸ್ ಐ ಅವರ ಕೈಗೆ ಗಾಯವಾಗಿದೆ. ಬಳಿಕ ಪೊಲೀಸರು ಬೆನ್ನತ್ತಿದಾಗ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ.
ವಾಹನದಲ್ಲಿದ್ದ ಮೊಬೈಲ್ಗಳು, ವಾಹನ ಮತ್ತಿತರ ಸೊತ್ತಿನ ಮೌಲ್ಯ ಆರು ಲಕ್ಷದ ನಲುವತ್ತು ಸಾವಿರ ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ