ಬಂಟ್ವಾಳ: ಸಿಲಿಂಡರ್ ಸ್ಪೋಟಗೊಂಡು ಗಾಯ
Team Udayavani, Jan 30, 2022, 11:20 AM IST
ಬಂಟ್ವಾಳ: ಫರಂಗಿಪೇಟೆ ಅಮ್ಮೆಮಾರ್ ಬಳಿ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪುಡಿ ಮಾಡುವ ವೇಳೆ ಅದು ಸ್ಪೋಟಗೊಂಡು ಕಾರ್ಮಿಕ ಗಾಯಗೊಂಡು ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಶನಿವಾರ ಸಂಜೆ ನಡೆದಿದೆ.
ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ ಗಾಯಗೊಂಡವರು. ಅವರು ಅಮ್ಮೆಮಾರಿನ ಗುಜರಿ ಅಂಗಡಿಗೆ ಆಟೋ ರಿಕ್ಷಾದ ಮೂಲಕ ಆಗಮಿಸಿ ಸಿಲಿಂಡರ್ ಪುಡಿ ಮಾಡುವ ಕಾರ್ಯ ನಿರ್ವಹಿಸುವ ವೇಳೆ ಘಟನೆ ನಡೆದಿದೆ.
ಘಟನೆಯಲ್ಲಿ ಆಟೋ ರಿಕ್ಷಾ ಸಹಿತ ಅಲ್ಲಿದ್ದ ಕೆಲವು ಸೊತ್ತುಗಳು ಭಸ್ಮವಾಗಿವೆ. ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯನಿರ್ವಹಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ