ದಡ್ಡಲಕಾಡು ಸರಕಾರಿ ಮಾ. ಹಿ.ಪ್ರಾ. ಶಾಲೆ ಸಾಧನೆ

ಮುಚ್ಚುವ ಹಂತದಲ್ಲಿದ್ದ ಶಾಲೆಯಲ್ಲೀಗ 650ಕ್ಕೂ ಹೆಚ್ಚು ಮಕ್ಕಳು

Team Udayavani, May 11, 2019, 9:27 AM IST

30

ಬಂಟ್ವಾಳ: ಮೂಡ ನಡುಗೋಡು ಗ್ರಾಮ ದಡ್ಡಲಕಾಡು ಸರಕಾರಿ ಮಾದರಿ ಹಿ.ಪ್ರಾ. ಶಾಲೆ ಹಾಲಿ ಶೈಕ್ಷಣಿಕ ವರ್ಷಕ್ಕೆ ಒಟ್ಟು 650 ಮಕ್ಕಳ ಸಂಖ್ಯೆಯನ್ನು ಮುಟ್ಟುವ ಮೂಲಕ ಒಂದು ಕಾಲದಲ್ಲಿ ಮುಚ್ಚುವ ಹಂತದ ಶಾಲೆ ಕಿಕ್ಕಿರಿದು ತುಂಬುವಂತಾಗಿದೆ.

ಸ್ಥಳೀಯ ಯುವಕರ ತಂಡ ಶ್ರೀ ದುರ್ಗಾ ಫ್ರೆಂಡ್ಸ್‌ ಕ್ಲಬ್‌ ಹೆಸರಲ್ಲಿ ಒಟ್ಟುಗೂಡಿ ಶಾಲೆ ಬೆಳೆಸಲು ಪಣತೊಟ್ಟು ಯಶಸ್ವಿಯಾಗಿ ರಾಜ್ಯಪಾಲರೇ ಬರುವಂತೆ ಮಾಡಿದ ಭಗೀರಥ ಪ್ರಯತ್ನದ ಫಲ ಕೊಟ್ಟಿದೆ.ಒಂದನೇ ತರಗತಿಗೆ ಮಕ್ಕಳ ಸೇರ್ಪಡೆ 110, ಎಲ್ಕೆಜಿ, ಯುಕೆಜಿಗೆ 134 ಒಟ್ಟಾರೆಯಾಗಿ ಈ ವರ್ಷ 235 ಮಕ್ಕಳ ಸೇರ್ಪಡೆಯಾಗಿದೆ.

ಸೀಟು ಸಿಗುವುದೇ
ಈ ಸಾಲಿನ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ 110 ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಸರಕಾರಿ ಶಾಲೆಗಳ ಮಕ್ಕಳ ಸೇರ್ಪಡೆಯಲ್ಲೇ ದಾಖಲೆ ಬರೆದಿದೆ. ಮನೆ ಮನೆ ಭೇಟಿ ಕಾರ್ಯಕ್ರಮ ವಿಲ್ಲದೆ, ಪ್ರಚಾರಕ್ಕಾಗಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸದೇ ಇದ್ದರೂ ಈ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ವಿದ್ಯಾರ್ಥಿಗಳ ಹೆತವರು ಶಾಲೆಗೇ ಬರುತ್ತಾರೆ. ಸೀಟು ಉಂಟಾ ಎಂದು ಕೇಳುತ್ತಿದ್ದಾರೆ.

2015-16ರಲ್ಲಿ 33 ಮಕ್ಕಳಿಂದ ಮುಚ್ಚುವ ಸ್ಥಿತಿಗೆ ಬಂದಿದ್ದ ದಡ್ಡಲಕಾಡು ಶಾಲೆಯನ್ನು ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್‌ ದತ್ತು ಸ್ವೀಕರಿಸಿಕೊಂಡ ಬಳಿಕ ಶಾಲೆಯ ಅಭಿವೃದ್ದಿಯಲ್ಲಿ ಕ್ರಾಂತಿಯಾಗಿದೆ. ಶಾಲೆಗೆ ಸುಸಜ್ಜಿತ ಕಟ್ಟಡ, ಮೂಲ ಸೌಕರ್ಯಗಳನ್ನು ಒದಗಿಸುವ ಜತೆಗೆ ಗುಣಮಟ್ಟದ ಶಿಕ್ಷಣ ನೀಡಿದ ಕಾರಣ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಎಲ್ಕೆಜಿ, ಯುಕೆಜಿಗೆ ಒಟ್ಟು 134 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಕೊಠಡಿ ಸಮಸ್ಯೆ ಎದುರಾಗುವ ಕಾರಣ ದಾಖಲಾತಿಯನ್ನು ಪೂರ್ಣ ಗೊಳಿಸಲಾಗಿದೆ. ಒಂದನೇ ತರಗತಿಗೆ ಈಗಾಗಲೇ 110 ಮಕ್ಕಳು ಸೇರ್ಪಡೆಗೊಂಡಿರು ವುದರಿಂದ ಮೂರು ವಿಭಾಗಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಮೌರೀಸ್‌ ಡಿ’ಸೋಜಾ ತಿಳಿಸಿದ್ದಾರೆ.

ಪೋಷಕರಿಂದಲೇ ಶ್ರಮದಾನ
ಶಾಲೆಯ ಮೂರನೇ ಹಂತದ ನಿರ್ಮಾಣ ಕಾರ್ಯ ಆರಂಭ ಗೊಂಡಿದೆ. ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಹೊಸ ಕೊಠಡಿಗಳು, ಆವರಣಗೋಡೆ, ಸಭಾಂಗಣ ನಿರ್ಮಾಣಗೊಳ್ಳಲಿದೆ. ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌ ನಿರಂತರ ಹೋರಾಟದ ಫಲವಾಗಿ ದಡ್ಡಲಕಾಡು ಸರಕಾರಿ ಶಾಲೆ ರಾಜ್ಯದಲ್ಲೇ ಮಾದರಿ ಶಾಲೆಯಾಗಿ ಬೆಳೆಯುತ್ತಿದ್ದು, ಸಮುದಾಯದ ಸಹಕಾರದೊಂದಿಗೆ ಮುನ್ನುಗುತ್ತಿದೆ. ಉಚಿತ ಸ್ಮಾರ್ಟ್‌ ಕ್ಲಾಸ್‌, ಯೋಗ, ನೃತ್ಯ, ಕರಾಟೆ, ಸಂಗೀತದೊಂದಿಗೆ ಕ್ರೀಡೆ, ಕೃಷಿ ಹಾಗೂ ಸಂಸ್ಕಾರಯುತ ಶಿಕ್ಷಣವನ್ನು ಈ ಶಾಲೆಯಲ್ಲಿ ನೀಡಲಾಗುತ್ತಿದೆ. ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಕಲಿಕೆ, ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯೂ ಇರುವುದರಿಂದ ಸಹಜವಾಗಿಯೇ ಹೆತ್ತವರ ಒಲವು ಶಾಲೆಯತ್ತ ಬೀರಿದೆ.

ಹೆಚ್ಚು ಶಿಕ್ಷಕರು
ದಡ್ಡಲಕಾಡು ಶಾಲೆಯಲ್ಲಿ ಹೆಚ್ಚಾಗಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಈಗ ಐದು ಮಂದಿ ಶಿಕ್ಷಕರಿದ್ದಾರೆ. 6 ಮಂದಿಯನ್ನು ಮುಂದಕ್ಕೆ ನಿಯೋಜನೆಯಲ್ಲಿ ಒದಗಿಸಲಾಗುವುದು. ಅಂದರೆ ಸರಕಾರದಿಂದ ಒಟ್ಟು 11 ಮಂದಿ ಶಿಕ್ಷಕರನ್ನು ಒದಗಿಸಿದಂತಾಗುವುದು.
-ಎನ್‌. ಶಿವಪ್ರಕಾಶ್‌ ಕ್ಷೇತ್ರ ಶಿಕ್ಷಣಾಧಿಕಾರಿ, ಬಂಟ್ವಾಳ

ಶಾಲೆಯಲ್ಲಿದೆ ವಿವಿಧ ಸೌಲಭ್ಯಗಳು
ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌ ನಿರಂತರ ಹೋರಾಟದ ಫಲವಾಗಿ ದಡ್ಡಲಕಾಡು ಸರಕಾರಿ ಶಾಲೆ ರಾಜ್ಯದಲ್ಲೇ ಮಾದರಿ ಶಾಲೆಯಾಗಿ ಬೆಳೆಯುತ್ತಿದ್ದು, ಸಮುದಾಯದ ಸಹಕಾರದೊಂದಿಗೆ ಮುನ್ನುಗುತ್ತಿದೆ. ಉಚಿತ ಸ್ಮಾರ್ಟ್‌ ಕ್ಲಾಸ್‌, ಯೋಗ, ನೃತ್ಯ, ಕರಾಟೆ, ಸಂಗೀತದೊಂದಿಗೆ ಕ್ರೀಡೆ, ಕೃಷಿ ಹಾಗೂ ಸಂಸ್ಕಾರಯುತ ಶಿಕ್ಷಣವನ್ನು ಈ ಶಾಲೆಯಲ್ಲಿ ನೀಡಲಾಗುತ್ತಿದೆ. ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಕಲಿಕೆ, ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯೂ ಇರುವುದರಿಂದ ಸಹಜವಾಗಿಯೇ ಹೆತ್ತವರ ಒಲವು ಶಾಲೆಯತ್ತ ಬೀರಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.