D.K: 13 ಎಸೆಸೆಲ್ಸಿ ಪರೀಕ್ಷಾ ಕೇಂದ್ರ ರದ್ದು! ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ


Team Udayavani, Mar 12, 2024, 7:20 AM IST

D.K: 13 ಎಸೆಸೆಲ್ಸಿ ಪರೀಕ್ಷಾ ಕೇಂದ್ರ ರದ್ದು! ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ

ಪುತ್ತೂರು: ಎಸೆಸೆಲ್ಸಿ ಅಂತಿಮ ಪರೀಕ್ಷೆ ಮಾ. 25ರಿಂದ ಎ. 6ರ ತನಕ ನಡೆಯಲಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ರದ್ದುಪಡಿಸಿ ರುವುದರಿಂದ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಸಂಕಷ್ಟ ಅನುಭವಿಸಲಿದ್ದಾರೆ.

ಕೇಂದ್ರಗಳ ಧಾರಣ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯಾರ್ಥಿ ಸಂಖ್ಯೆ ಇಲ್ಲದಿರುವ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಇದರಿಂದ ಗ್ರಾಮಾಂತರ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ ಎಂಬುದು ಪೋಷಕರ ದೂರು.

ರದ್ದು, ಹೊಸ ಕೇಂದ್ರ ಎಷ್ಟು?
ಜಿಲ್ಲೆಯಲ್ಲಿ 2023ರಲ್ಲಿ 98 ಪರೀಕ್ಷಾ ಕೇಂದ್ರಗಳಿದ್ದವು. ಈ ಬಾರಿ 88ಕ್ಕೆ ಇಳಿದಿದೆ. ಬಂಟ್ವಾಳ ತಾಲೂಕಿನಲ್ಲಿ 1, ಪುತ್ತೂರು 2, ಬೆಳ್ತಂಗಡಿ 1, ಮಂಗಳೂರು ಉತ್ತರ 2, ಮಂಗಳೂರು ದಕ್ಷಿಣದಲ್ಲಿ 7 ಕೇಂದ್ರಗಳನ್ನು ರದ್ದುಪಡಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ 1, ಮಂಗಳೂರು ಉತ್ತರ 1, ಮಂಗಳೂರು ದಕ್ಷಿಣದಲ್ಲಿ 1 ಹೊಸ ಕೇಂದ್ರ ತೆರೆಯಲಾಗಿದೆ. ಒಟ್ಟು 13 ಕೇಂದ್ರ ರದ್ದುಪಡಿಸಿ 3 ಹೊಸ ಕೇಂದ್ರ ತೆರೆಯಲಾಗಿದೆ.

ಉಡುಪಿ ಯಥಾಸ್ಥಿತಿ
ಉಡುಪಿ ಜಿಲ್ಲೆಯಲ್ಲಿ 5 ವಲಯಗಳಿದ್ದು, 51 ಪರೀಕ್ಷಾ ಕೇಂದ್ರಗಳಿವೆ. ಬೈಂದೂರು-8, ಕುಂದಾಪುರ-8, ಕಾರ್ಕಳ-9, ಬ್ರಹ್ಮಾವರ-11, ಉಡುಪಿ-15 ಕೇಂದ್ರಗಳಿವೆ. ಕಳೆದ ಬಾರಿಗೆ ಹೋಲಿಸಿದರೆ ಯಾವುದೇ ಬದಲಾವಣೆ ಇಲ್ಲ ಎಂದು ಡಿಡಿಪಿಐ ಗಣಪತಿ ತಿಳಿಸಿದ್ದಾರೆ.

ರದ್ದು ಏಕೆ?
ಪರೀಕ್ಷಾ ಕೇಂದ್ರಗಳಲ್ಲಿ 250 ವಿದ್ಯಾರ್ಥಿ ಬಲ ಇರಬೇಕು ಅನ್ನುವುದು ಇಲಾಖೆಯ ನಿಯಮ. ಕನಿಷ್ಠ 180ರಿಂದ 200 ಆದರೂ ಬೇಕು. ಅದಕ್ಕಿಂತ ಕಡಿಮೆ ಸಂಖ್ಯೆ ಇರುವ ಕಾರಣ 13 ಕೇಂದ್ರಗಳ ರದ್ದತಿ ಅನಿವಾರ್ಯವಾಗಿತ್ತು ಅನ್ನುವುದು ಅಧಿಕಾರಿಗಳ ಹೇಳಿಕೆ. ರದ್ದಾದ ಕೇಂದ್ರಕ್ಕೆ ಒಳಪಟ್ಟಿರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಹಿಂದೆ ಆರೇಳು ಕಿ.ಮೀ. ದೂರದಲ್ಲಿ ಇದ್ದ ಪರೀಕ್ಷಾ ಕೇಂದ್ರ ರದ್ದಾದ ಪರಿಣಾಮ ಇನ್ನು ಹತ್ತಾರು ಕಿ.ಮೀ. ದೂರ ತೆರಳಬೇಕಾದ ಸ್ಥಿತಿ ಈಗ ಸೃಷ್ಟಿಯಾಗಿದೆ.

ಪುತ್ತೂರು ತಾಲೂಕಿನ ಗ್ರಾಮಾಂತರ ಪ್ರದೇಶದ ಕುಂಬ್ರ ಕೆಪಿಎಸ್‌ನಲ್ಲಿ ಇದ್ದ ಪರೀಕ್ಷಾ ಕೇಂದ್ರವನ್ನು ರದ್ದು ಪಡಿಸಲಾಗಿದೆ. ಪರಿಸರದ ವಿದ್ಯಾರ್ಥಿಗಳು ಪುತ್ತೂರಿನ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಿದೆ. ಹೆಚ್ಚಿನ ಸಮಯವನ್ನು ಪ್ರಯಾಣದಲ್ಲೇ ಕಳೆಯುವ ಹಾಗಾಗಿದ್ದು, ಕುಂಬ್ರದಲ್ಲೇ ಕೇಂದ್ರ ಸ್ಥಾಪಿಸಬೇಕೆನ್ನುವುದು ನಮ್ಮೆಲ್ಲರ ವಿನಂತಿ.
– ಸಯ್ಯದ್‌ ಗಫೂರ್‌ ಸಾಹೇಬ್‌ ಪಾಲ್ತಾಡು
ಕಾರ್ಯಾಧ್ಯಕ್ಷ, ಸರಕಾರಿ ಪ್ರೌಢಶಾಲೆ ಮಣಿಕ್ಕರ

ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ತಗ್ಗಿಸಲಾಗಿದೆ. ದ.ಕ.ದಲ್ಲೂ 10 ಕೇಂದ್ರ ಕಡಿಮೆ ಆಗಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಇಲಾಖೆ ಪೂರಕ ಕ್ರಮ ಕೈಗೊಂಡಿದೆ.
– ವೆಂಕಟೇಶ್‌ ಸುಬ್ರಾಯ ಪಟಾYರ್‌,
ಡಿಡಿಪಿಐ, ದ.ಕ. ಜಿಲ್ಲೆ

ರದ್ದಾದ ಕೇಂದ್ರಗಳು
ಬಂಟ್ವಾಳ: ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯ ಪಾಣೆಮಂಗಳೂರು
ಬೆಳ್ತಂಗಡಿ: ಕಣಿಯೂರು ಪದು¾ಂಜ ಸರಕಾರಿ ಪ್ರೌಢಶಾಲೆ
ಪುತ್ತೂರು: ಸುದಾನ ಪ್ರೌಢಶಾಲೆ ಪುತ್ತೂರು, ಕುಂಬ್ರ ಕೆಪಿಎಸ್‌ ಪ್ರೌಢಶಾಲೆ
ಮಂಗಳೂರು ಉತ್ತರ: ಹಂಪನಕಟ್ಟೆ ಮಿಲಾಗ್ರಿಸ್‌ ಪ.ಪೂ. ಕಾಲೇಜು, ಗಣಪತಿ ಆಂಗ್ಲಮಾಧ್ಯಮ ಶಾಲೆ ಹಂಪನಕಟ್ಟೆ
ಮಂಗಳೂರು ದಕ್ಷಿಣ: ಸೈಂಟ್‌ ಆ್ಯಗ್ನೆಸ್‌ ಪ್ರೌಢಶಾಲೆ ಬೆಂದೂರುವೆಲ್‌, ಭಾರತ ಪ್ರೌಢ ಶಾಲೆ ಉಳ್ಳಾಲ, ಸರಕಾರಿ ಪ್ರೌಢಶಾಲೆ ದೇರಳಕಟ್ಟೆ, ಸ.ಪ.ಪೂ. ಕಾಲೇಜು ಮುತ್ತೂರು, ಸೇಕ್ರೆಡ್‌ ಹಾರ್ಡ್‌ ಪ್ರೌಢಶಾಲೆ ಕುಲಶೇಖರ, ಸೈಂಟ್‌ ಮೇರಿಸ್‌ ಪ್ರೌಢಶಾಲೆ ಪಳ್ನೀರು, ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಾಮಂಜೂರು

ಹೊಸ ಕೇಂದ್ರಗಳು
ಎಸ್‌ವಿಎಸ್‌ ಆಂಗ್ಲಮಾಧ್ಯಮ ಪ್ರೌಢಶಾಲೆ ಬಂಟ್ವಾಳ,
ಸೈಂಟ್‌ ಅಲೋಶಿಯಸ್‌ ಉರ್ವ, ಸರಕಾರಿ ಪ್ರೌಢಶಾಲೆ ಗುರುಪುರ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.