ಆ. 27ರೊಳಗೆ ಆರ್‌ಟಿಸಿ ವಿತರಣೆ: ಪಿಡಿಒಗಳಿಗೆ ಸೂಚನೆ


Team Udayavani, Aug 26, 2018, 1:08 PM IST

26-agust-12.jpg

ಬೆಳ್ತಂಗಡಿ: ತಾಲೂಕಿನ ಪ್ರತಿ ಗ್ರಾ.ಪಂ.ಗಳಲ್ಲೂ ಆರ್‌ಟಿಸಿ ನೀಡುವ ಕುರಿತು ಆ. 27ರೊಳಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಮ್ಮಲ್ಲಿ ಆರ್‌ಟಿಸಿ ನೀಡುವ ಕುರಿತು ಪ್ರತಿ ಪಿಡಿಒಗಳು ತಹಶೀಲ್ದಾರ್‌ಗೆ ದೃಢೀಕರಣ ನೀಡಬೇಕು. ಜತೆಗೆ ಈ ಕುರಿತು ತಾ.ಪಂ. ಇಒ ಅವರು ಮುತುವರ್ಜಿ ವಹಿಸಬೇಕು ಎಂದು ಶಾಸಕ ಹರೀಶ್‌ ಪೂಂಜ ಅವರು ಸೂಚನೆ ನೀಡಿದರು.

ಅವರು ಶನಿವಾರ ಲಾೖಲ ಗ್ರಾ.ಪಂ. ಸಭಾಂಗಣದಲ್ಲಿ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪದಿಂದ ಆಗಿರುವ ಹಾನಿಯ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜನರು ತಾಲೂಕು ಕಚೇರಿಗೆ ಬಂದು ಅಲೆದಾಡುವುದು ತಪ್ಪಬೇಕು ಎಂದು ಸರಕಾರ ಸೌಲಭ್ಯ ನೀಡಿದ್ದು, ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಮುಂದಿನ ಒಂದು ತಿಂಗಳಲ್ಲಿ ತಾಲೂಕು ಕಚೇರಿಯಲ್ಲಿ ಯಾವ ಗ್ರಾ.ಪಂ.ನವರು ಬಂದು ಹೆಚ್ಚಾಗಿ ಆರ್‌ಟಿಸಿ ತೆಗೆಯುತ್ತಾರೆ ಎಂದು ಗಮನಿಸಿ, ಅಂತಹ ಪಿಡಿಒಗಳಿಗೆ ಮೆಮೊ ನೀಡಬೇಕು ಎಂದು ತಹಶೀಲ್ದಾರ್‌ ಮದನ್‌ ಮೋಹನ್‌ ಅವರಿಗೆ ತಿಳಿಸಿದರು.

ಮೆಸ್ಕಾಂಗೆ 86.72 ಲಕ್ಷ. ರೂ. ನಷ್ಟ
ಮೆಸ್ಕಾಂ ಎಂಜಿನಿಯರ್‌ ಶಿವಶಂಕರ್‌ ಮಾಹಿತಿ ನೀಡಿ, ತಾಲೂಕಿನಲ್ಲಿ ಈ ಬಾರಿ ಮಳೆಗೆ ಮೆಸ್ಕಾಂಗೆ ಒಟ್ಟು 86.72 ಲಕ್ಷ ರೂ. ನಷ್ಟ ಸಂಭವಿಸಿದೆ. ಹಾನಿಯಾದ 891 ವಿದ್ಯುತ್‌ ಕಂಬಗಳ ಪೈಕಿ 850 ದುರಸ್ತಿಯಾಗಿದೆ. ಜತೆಗೆ ಹಾನಿಯಾದ 96 ವಿದ್ಯುತ್‌ ಪರಿವರ್ತಕಗಳಲ್ಲಿ 92 ದುರಸ್ತಿಯಾಗಿವೆ ಎಂದು ಮಾಹಿತಿ ನೀಡಿದರು.

ಫಾಗಿಂಗ್‌
ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಂಕ್ರಾಮಿಕ ರೋಗ ತಡೆಯಲು ಫಾಗಿಂಗ್‌ ನಡೆಸುವುದಕ್ಕೆ ಕುಂಟು ನೆಪವೊಡ್ಡಿ ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಪ್ರತಿ ಗ್ರಾಮ ಪಂಚಾಯತ್‌ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ಫಾಗಿಂಗ್‌ ನಡೆಸುವುದಕ್ಕೆ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಸದಸ್ಯರ ಮೂಲಕ ಊರಿನ ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸಿ ದೇಣಿಗೆ ಸಂಗ್ರಹಿಸುವಂತೆ ಸಲಹೆ ನೀಡಿದರು.

ದೂರು ನೀಡಿ
ಇಂದಬೆಟ್ಟಿನ ಕಲ್ಲಾಜೆಯಲ್ಲಿ ಖಾಸಗಿ ವ್ಯಕ್ತಿಯಿಂದಾಗಿ ರಸ್ತೆಗೆ ಹಾನಿಯಾಗಿರುವ ಕುರಿತು ಪಿಡಿಒ ಅವರು ಪೊಲೀಸರಿಗೆ ದೂರು ನೀಡದೇ ಇರುವುದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಸರಕಾರಿ ಸೊತ್ತುಗಳಿಗೆ ಖಾಸಗಿಯವರು ಹಾನಿ ಮಾಡಿದರೆ ಅಂಥವರ ವಿರುದ್ಧ ತತ್‌ ಕ್ಷಣ ಕ್ರಮ ಕೈಗೊಳ್ಳಿ. ಯಾವ ರಾಜಕೀಯ ಒತ್ತಡಗಳಿಗೂ ಮಣಿಯಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್‌ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ.
ಸೆಬಾಸ್ಟಿಯನ್‌, ಸದಸ್ಯ ಸುಧಾಕರ್‌, ಇಒ ಕುಶಾಲಪ್ಪ, ಲಾೖಲ ಗ್ರಾಮ ಪಂಚಾಯತ್‌ ಅಧ್ಯಕ್ಷೆ ವೀಣಾ ರಾವ್‌, ಉಪಾಧ್ಯಕ್ಷ ಗಿರೀಶ್‌ ಡೋಂಗ್ರೆ ಮೊದಲಾದವರಿದ್ದರು.

ಹೆಚ್ಚಿನ ಪರಿಹಾರಕ್ಕೆ ಶ್ರಮಿಸಿ
ತಾ|ನಲ್ಲಿ ಸುಮಾರು 100ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಗ್ರಾಮ ಕರಣಿಕರ ವರದಿಯನ್ನು ಆಧರಿಸಿ, ಪಂಚಾಯತ್‌ರಾಜ್‌ ಎಂಜಿನಿಯರ್‌ ಶೀಘ್ರ ವರದಿ ಸಿದ್ಧಪಡಿಸಬೇಕು. ಜತೆಗೆ ಮನೆ ಕುಸಿತದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವೊದಗಿಸುವ ನಿಟ್ಟಿನಲ್ಲಿ ಅಧಿಕಾರಿ ಶ್ರಮಿಸಬೇಕು. ವಸತಿ ಯೋಜನೆಯಲ್ಲಿ ಅವಕಾಶವಿದ್ದರೆ ಅದಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದರು.

ಮಳೆಯಿಂದಾಗಿ ದನದ ಹಟ್ಟಿಗೆ ಹಾನಿಯಾದರೆ ಯಾವುದೇ ಪರಿಹಾರವಿಲ್ಲ ಎಂದು ಅಧಿಕಾರಿಗಳು ತಿಳಿಸಿದಾಗ, ಹಟ್ಟಿ ನಿರ್ಮಾಣವನ್ನು ನರೇಗಾದಲ್ಲಿ ಸೇರಿಸಿ ದುರಸ್ತಿಗೆ ಕ್ರಮ ಕೈಗೊಳ್ಳಿ. ಹಾನಿಯಾಗಿರುವ ಕುರಿತು ವಿಎಗಳು ಪಿಡಿಒಗಳಿಗೆ ವರದಿ ನೀಡಿ, ತಾತ್ಕಾಲಿಕ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ತಿಳಿಸಿದರು. ಜತೆಗೆ ಶಾಲೆಗಳಿಗೆ ಹಾನಿ, ಅಂಗನವಾಡಿಗಳ ಹಾನಿಯ ಕುರಿತು ವರದಿ ನೀಡುವಂತೆಯೂ ತಿಳಿಸಿದರು.

ಅಡಿಕೆ ಕೊಳೆ‌ರೋಗ
ವಿಪರೀತ ಮಳೆಯಿಂದಾಗಿ ತಾ|ನಲ್ಲಿ ಅಡಿಕೆ ಕೊಳೆ‌ರೋಗ ವ್ಯಾಪಕವಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಇಲಾಖೆಯ
ಸ. ನಿರ್ದೇಶಕರು ಪ್ರತಿ ಗ್ರಾ.ಪಂ.ಗಳಿಗೂ ತೆರಳಿ ಬೆಳೆಗಾರರಿಂದ ಅರ್ಜಿ ಪಡೆಯಬೇಕು. ಈ ಕಾರ್ಯ ಸೆ. 20ರೊಳಗೆ ಪೂರ್ಣಗೊಳ್ಳಬೇಕಾಗಿದ್ದು, ಯಾವ ಗ್ರಾ.ಪಂ.ಗೆ ಯಾವ ದಿನ ಭೇಟಿ ನೀಡಲಾಗುತ್ತದೆ ಎಂದು ಪತ್ರಿಕೆಗಳಲ್ಲಿ ಮಾಹಿತಿ ನೀಡುವಂತೆ ಶಾಸಕ ಹರೀಶ್‌ ಪೂಂಜ ಸೂಚನೆ ನೀಡಿದರು.  ತಾ|ನಲ್ಲಿ ಮಳೆಯಿಂದಾಗಿ ರಾಜ್ಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ರಸ್ತೆಗಳು ತೀರಾ ಹದಗೆಟ್ಟಿವೆ. ಒಟ್ಟು 5 ಸೇತುವೆಗಳಿಗೆ ಹಾನಿ, 9 ಕಡೆ ಗಂಭೀರ
ಕುಸಿತ ಉಂಟಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಶಿವಪ್ರಸಾದ್‌ ಅಜಿಲ ಮಾಹಿತಿ ನೀಡಿದಾಗ, ಅದರ ಪೂರ್ಣ ವಿವರ ನೀಡುವಂತೆ ತಿಳಿಸಿದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.