ಗಾಳಿಯ ರಭಸಕ್ಕೆ  ನೆಲಕ್ಕುರುಳಿದ ಮರಗಳು, ಮನೆ-ಅಂಗಡಿಗಳಿಗೆ ಹಾನಿ


Team Udayavani, Jul 16, 2018, 3:04 PM IST

16-july-14.jpg

ಆಲಂಕಾರು : ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಸ್ವಲ್ಪ ಕಡಿಮೆ ಯಾದರೂ ಬೀಸುತ್ತಿರುವ ಬಿರುಗಾಳಿಯ ಬಗ್ಗೆ ಜನತೆ ಆತಂಕ ಹೊಂದಿದ್ದಾರೆ. ರವಿವಾರ ಬೆಳಗ್ಗೆ ಆಲಂಕಾರು ಗ್ರಾಮದ ಅಲ್ಲಲ್ಲಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಕೃಷಿ ಸಾರ್ವಜನಿಕ ಸೊತ್ತುಗಳು ನಾಶವಾಗಿವೆ. ಆಲಂಕಾರು ಗ್ರಾಮದ ಶರವೂರು, ಕೊಂಡಾಡಿ, ಕೊಪ್ಪ, ನಾಡ್ತಿಲದಲ್ಲಿ ಬೀಸಿದ ಭಾರಿ ಸುಂಟರಗಾಳಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಕೊಂಡಾಡಿ ಮೋನಪ್ಪ
ಅವರ ಮನೆಗೆ ಹಾಗೂ ಕೊಟ್ಟಿಗೆಗೆ ತೆಂಗಿನ ಮರ ಮುರಿದು ಬಿದ್ದು 50 ಸಾವಿರ ರೂ.ಗೂ ಮಿಕ್ಕಿ ನಷ್ಟ ಸಂಭವಿಸಿದೆ. ಪಕ್ಕದಲ್ಲಿದ್ದ ಬೃಹತ್‌ ತೆಂಗಿನ ಮರ ಬುಡದಿಂದಲೇ ಮುರಿದು ಕೊಟ್ಟಿ ಗೆಯ ಮಾಡಿಗೆ ಬಿದ್ದು ಮಾಡಿನ ಸಿಮೆಂಟ್‌ ಶೀಟ್‌ ಸಂಪೂರ್ಣ ನಾಶವಾಗಿದೆ. ಈ ವೇಳೆ ತೆಂಗಿನಮರ ಮನೆಯ ವಿದ್ಯುತ್‌ ಸಂಪರ್ಕದ ವಯರ್‌ ಮೇಲೆ ಬಿದ್ದ ಪರಿಣಾಮ ಮನೆಯ ಮಾಡಿಗೆ ಅಪಾರ ಹಾನಿ ಉಂಟಾಗಿದ್ದು, ಪಕ್ಕಾಸು ಹಾಗೂ ಹೆಂಚುಗಳು ಪುಡಿಯಾಗಿವೆ.

ಕೊಂಡಾಡಿ ಏಣಿತ್ತಡ್ಕ ರವಿ ಗೌಡರ ಮನೆಗೂ ಹಾನಿಯಾಗಿದ್ದು ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಅಲ್ಲದೆ, ಸಿಮೆಂಟ್‌ ಶೀಟ್‌ಗಳಿಗೆ ಹಾನಿಯುಂಟಾಗಿದೆ. 20 ಅಡಿಕೆ ಮರಗಳು ಗಾಳಿಗೆ ತುಂಡಾಗಿದ್ದು, ಏಣಿತ್ತಡ್ಕ ಪದ್ಮಯ್ಯ ಗೌಡರ 18 ಅಡಿಕೆ ಮರಗಳು ಗಾಳಿಗೆ ಬಿದ್ದಿವೆ. ಕೊಂಡಾಡಿಕೊಪ್ಪ ಶೀನಪ್ಪ ಕುಂಬಾರರ ತೋಟಕ್ಕೂ ಹಾನಿಯಾಗಿದೆ.

ಕೃಷಿ ನಾಶ
ಮಾ. 19ರಂದು ಶರವೂರು, ಕಂದ್ಲಾಜೆ, ನಗ್ರಿ, ಕಕ್ವೆ ಮೊದಲಾದ ಕಡೆಗಳಲ್ಲಿ ಇದೇ ಮಾದರಿಯ ಬಿರುಗಾಳಿ ಬೀಸಿದ್ದು ಭಾರೀ ಪ್ರಮಾಣದ ಆಸ್ತಿ-ಪಾಸ್ತಿಗೆ ನಷ್ಟ ಸಂಭವಿಸಿತ್ತು. ಅಲ್ಲದೆ ಶನಿವಾರ ಕೊಯಿಲ ಹಾಗೂ ರಾಮಕುಂಜ ಗ್ರಾಮಗಳ ಕೆಲವು ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಬೀಸಿದ ಭಾರಿ ಸುಂಟರಗಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾಗಿತ್ತು. ಭಾರೀ ಗಾತ್ರದ ಮರಗಳು ವಿದ್ಯುತ್‌ ತಂತಿ ಮೇಲೆ ಬಿದ್ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಗಳಿಗೆ ಆಲಂಕಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಶೆಟ್ಟಿ, ಗ್ರಾ.ಪಂ. ಸದಸ್ಯ ಸದಾನಂದ ಆಚಾರ್ಯ, ಉಗ್ರಾಣಿ ವಿಶ್ವನಾಥ ಭೇಟಿ ನೀಡಿ ಸಂಭವಿಸಿದ ನಷ್ಟ ಪರಿಶೀಲಿಸಿದರು. ಪ್ರಾಕೃತಿಕ ವಿಕೋಪದಡಿ ಪರಿಹಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು. 

ಮೊಬೈಲ್‌ ಶಾಪ್‌ಗೆ ಹಾನಿ
ಶಾಂತಿಮೊಗರು ಕಮ್ತೀಲು ರವಿ ಅವರ ಮೊಬೈಲ್‌ ಶಾಪ್‌ ಬಿರುಗಾಳಿಗೆ ಸಿಲುಕಿ ಭಾರಿ ನಷ್ಟ ಸಂಭವಿಸಿದೆ. ಶಾಪ್‌ನ ಛಾವಣಿಯ 16 ಸಿಮೆಂಟ್‌ ಶೀಟ್‌ಗಳು ಗಾಳಿಗೆ ಸಿಲುಕಿ ಸಂಪೂರ್ಣ ನಾಶವಾಗಿವೆ. ಪರಿಣಾಮ ಅಂಗಡಿಯೊಳಗಿದ್ದ ಜೆರಾಕ್ಸ್‌ ಮೆಷಿನ್‌, ಮೊಬೈಲ್‌ ಫೊನ್‌ಗಳು, ದುರಸ್ತಿಗೆ ಬಂದ
ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಹಾಗೂ ವಿದ್ಯುತ್‌ ಉಪಕರಣಗಳು ಮಳೆ ನೀರಿಗೆ ಹಾನಿಯಾಗಿದ್ದು, ಸುಮಾರು 70 ಸಾವಿರ ರೂ. ನಷ್ಟ ಸಂಭವಿಸಿದೆ.

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.