ಅಪಾಯಕಾರಿಯಾಗಿದೆ ಕಲ್ಲುಗುಡ್ಡೆ – ಕೊಣಾಜೆ ರಸ್ತೆ

ಎಚ್ಚರ ತಪ್ಪಿದರೆ ಅವಘಡ; ಪೊದೆಗಳಿಂದಾವೃತ ರಸ್ತೆಯ ಬದಿ ತಡೆಗೋಡೆಯೂ ಇಲ್ಲ

Team Udayavani, Nov 21, 2019, 4:49 AM IST

gg-19

ಕಲ್ಲುಗುಡ್ಡೆ: ಇಚ್ಲಂಪಾಡಿ – ಕಲ್ಲುಗುಡ್ಡೆ – ಕಡ್ಯ ಕೊಣಾಜೆ ಸಂಪರ್ಕ ಕಲ್ಪಿಸುವ ಸಡಕ್‌ ರಸ್ತೆಯ ಕಲ್ಲುಗುಡ್ಡೆ – ಕೊಣಾಜೆ ರಸ್ತೆಯ ಹಲವೆಡೆ ರಸ್ತೆಯ ಅಂಚುಗಳಲ್ಲಿ ತಡೆಗೋಡೆಗಳಿಲ್ಲದೆ ಅಪಘಾತಗಳು ಸಂಭವಿಸುತ್ತಿದ್ದು, ಅಪಾಯಕಾರಿಯಾಗಿದೆ. ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ – ಕೊಣಾಜೆ ರಸ್ತೆಯಲ್ಲಿ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿಯ ವರೆಗೆ ಸಡಕ್‌ನಲ್ಲಿ ರಸ್ತೆ ಅಭಿವೃದ್ಧಿಗೊಂಡಿದ್ದು, ಆದರೆ ಈ ರಸ್ತೆಯ ಹಲವೆಡೆ ತೋಡಿನ ಬದಿಗಳಲ್ಲಿ ತಡೆಗೋಡೆಗಳಿಲ್ಲದೆ ಸವಾರರು ಅಪಾಯಕಾರಿ ಸ್ಥಿತಿಯಲ್ಲಿ ವಾಹನ ಚಲಾಯಿಸಬೇಕಾಗಿದೆ. ಈ ರಸ್ತೆಯ ಮಾರಪ್ಪೆ, ಕೇಪುಂಜ, ನಡುಗುಡ್ಡೆ, ಕಲಾ°ರು, ಹರ್ಪಾಳ ಎನ್ನುವಲ್ಲಿ ಅಪಾಯವಿದೆ. ಕೆಲವೆಡೆ ರಸ್ತೆ ತಿರುವುಗಳಲ್ಲಿ ಪೊದರುಗಳು ಬೆಳೆದಿದ್ದು, ವಾಹನ ಸವಾರರು ರಸ್ತೆಯ ಅಂಚನ್ನು ಗುರುತಿಸುವುದೇ ಕಷ್ಟವಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು, ಶಾಲಾ ಬಸ್‌ಗಳು ಸಂಚರಿಸುತ್ತಿವೆ.

ಅಪಘಾತ ವಲಯ
ರಸ್ತೆಯ ತಿರುವುಗಳಲ್ಲಿ ವಾಹನ ಸವಾರರು ವೇಗವಾಗಿ ಬಂದಲ್ಲಿ ತಿರುವುಗಳನ್ನು ನಿಭಾಯಿಸಲು ಕಷ್ಟಕರವಾಗಿದ್ದು, ಮುಂದೆ ಹೋದರೆ ತೋಡಿಗೆ ಬೀಳುವ ಪರಿಸ್ಥಿತಿ ಇದೆ. ಈ ಪ್ರದೇಶಗಳಲ್ಲಿ ಹಲವು ಬಾರಿ ವಾಹನ ಅಪಘಾತಗಳು ಸಂಭವಿಸಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಆದರೆ ವಾಹನಗಳಿಗೆ ಧಕ್ಕೆಯಾಗಿದೆ ಎನ್ನುತ್ತಾರೆ ಗ್ರಾಮಸ್ಥರು. ವಾರದ ಹಿಂದೆ ಕಾರೊಂದು ನಿಯಂತ್ರಣ ತಪ್ಪಿ ತೋಡಿನ ಬದಿಯ ವರೆಗೆ ಹೋಗಿ ಮರದಲ್ಲಿ ಸಿಲುಕಿಕೊಂಡು ಬಚಾವಾಗಿತ್ತು. ಅದರಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರು.

ಬೇಕಿದೆ ತಡೆಗೋಡೆ
ಕೊಣಾಜೆ ಸಂಪರ್ಕ ರಸ್ತೆಯ ವಿವಿಧೆಡೆ ತೋಡಿನ ಸಮೀಪದಿಂದ ರಸ್ತೆ ನಿರ್ಮಿಸಿದ್ದರೂ ತಡೆಗೋಡೆ ನಿರ್ಮಿಸಿಲ್ಲ. ಅಗತ್ಯವಾದಲ್ಲಿಯೂ ಈ ವ್ಯವಸ್ಥೆ ಮಾಡಿಲ್ಲ. ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ತೋಡಿನ ಬದಿಯಲ್ಲಿ ತಡೆಗೋಡೆ ನಿರ್ಮಿಸುವಂತೆ ಅಥವಾ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಸ್ತೆಯೂ ಕುಸಿತ
ಇದೇ ರಸ್ತೆಯ ರೆಂಜಿಲಾಡಿಯ ಕೇಪುಂಜ ಬಳಿ ನಡುಗುಡ್ಡೆ ಯಲ್ಲಿ ಹರಿಯುತ್ತಿರುವ ತೋಡಿನ ಸಮೀಪ ರಸ್ತೆ ಅಂಚಿನ ವರೆಗೆ ರಸ್ತೆ ಕುಸಿತಗೊಂಡಿದೆ. ಸರಿಪಡಿಸುವ ಗೋಜಿಗೆ ಸಂಬಂಧಪಟ್ಟವರು ಇನ್ನೂ ಮುಂದಾಗಿಲ್ಲ. ಈ ಬಗ್ಗೆ ಪಂಚಾಯತ್‌ ಸಭೆಯಲ್ಲಿಯೂ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

 ಸೂಕ್ತ ಕ್ರಮ ಅಗತ್ಯ
ಈ ರಸ್ತೆಯ ಹಲವು ಕಡೆಗಳಲ್ಲಿ ಅಪಾಯಕಾರಿ ಸ್ಥಳಗಳಿದ್ದು, ಖಾಸಗಿಯವರು ಹಾಗೂ ನಾನೂ ಗ್ರಾ.ಪಂ.ಗೆ ಕ್ರಮಕ್ಕೆ ಹಲವು ಬಾರಿ ಮನವಿ ಮಾಡಿದ್ದೆ. ಅಧಿಕ ಅನುದಾನ ಅಗತ್ಯವಿದೆ ಎಂದು ತಿಳಿದುಬಂದಿದೆ. ಶಾಸಕರ ಅಥವಾ ಇನ್ನಾವುದೋ ಮೂಲದಿಂದ ಅನುದಾನ ತರುವಲ್ಲಿ ಪ್ರಯತ್ನ ನಡೆಯಬೇಕಿದೆ.
– ರಜಿತಾ ಪದ್ಮನಾಭ ಕೇಪುಂಜ, ಗ್ರಾ.ಪಂ. ಸದಸ್ಯೆ ನೂಜಿಬಾಳ್ತಿಲ

 ಮನವಿ ಮಾಡಲಾಗಿದೆ
ರಸ್ತೆಯ ಅಪಾಯಕಾರಿ ಸ್ಥಿತಿ – ಗತಿಗಳ ಬಗ್ಗೆ ಸಾರ್ವಜನಿಕರು ಗ್ರಾಮಸಭೆಯಲ್ಲಿ ಅರ್ಜಿ ನೀಡಿ ದ್ದಾರೆ. ಕೊಣಾಜೆ ರಸ್ತೆಯ ಅಪಾಯ ಕಾರಿ ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಅನುದಾನ ಕ್ಕಾಗಿ ತಾ.ಪಂ.ಗೆ ಮನವಿ ಮಾಡಲಾಗಿದೆ. ಗ್ರಾಮ ಪಂಚಾಯತ್‌ ಅನುದಾನ ದಿಂದ ಈ ಕೆಲಸ ಅಸಾಧ್ಯ.
– ಸದಾನಂದ ಗೌಡ ಸಾಂತ್ಯಡ್ಕ, ಗ್ರಾ.ಪಂ. ಅಧ್ಯಕ್ಷರು ನೂಜಿಬಾಳ್ತಿಲ

– ದಯಾನಂದ ಕಲ್ನಾರು

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.