D.K.ಇನ್ನೂ ಆರಂಭಗೊಳ್ಳದ ಡೇ ಕೇರ್‌ ಸೆಂಟರ್‌! ಟೆಂಡರ್‌ ಹಂತದಲ್ಲಿ ಎನ್‌ಜಿಒ ಆಯ್ಕೆ

ದ.ಕ. ಜಿಲ್ಲೆಯ 4 ಪಾಲನ ಕೇಂದ್ರಗಳು ಸಿದ್ಧ

Team Udayavani, Nov 22, 2023, 6:30 AM IST

D.K.ಇನ್ನೂ ಆರಂಭಗೊಳ್ಳದ ಡೇ ಕೇರ್‌ ಸೆಂಟರ್‌! ಟೆಂಡರ್‌ ಹಂತದಲ್ಲಿ ಎನ್‌ಜಿಒ ಆಯ್ಕೆ

ಬಂಟ್ವಾಳ: ಎಂಡೋ ಸಲ್ಫಾನ್‌ ಸಂತ್ರಸ್ತರ ಆರೈಕೆಯ ದೃಷ್ಟಿಯಿಂದ ದ.ಕ.ಜಿಲ್ಲೆಗೆ ಮಂಜೂರಾಗಿರುವ 4 ಹೆಚ್ಚುವರಿ ಪಾಲನಾ ಕೇಂದ್ರ (ಡೇ ಕೇರ್‌ ಸೆಂಟರ್‌)ಗಳು ಸಿದ್ಧಗೊಂಡು ಹಲವು ಸಮಯಗಳೇ ಕಳೆದರೂ ಇನ್ನೂ ಕೂಡ ಕೇಂದ್ರವು ಕಾರ್ಯಾರಂಭಗೊಂಡಿಲ್ಲ. ಕೇಂದ್ರದ ನಿರ್ವಹಣೆಗೆ ಎನ್‌ಜಿಒ ಸಂಸ್ಥೆಯ ಆಯ್ಕೆ ಪ್ರಕ್ರಿಯೆಯು ಟೆಂಡರ್‌ ಹಂತದಲ್ಲಿದ್ದು, ಮುನ್ನಡೆಸಲು ಅನುದಾನ ಬಿಡುಗಡೆಗೊಂಡ ತತ್‌ಕ್ಷಣ ಕೇಂದ್ರಗಳು ಕಾರ್ಯಾರಂಭ ಗೊಳ್ಳುತ್ತವೆ ಎನ್ನಲಾಗಿದೆ.

ದ.ಕ.ಜಿಲ್ಲೆಯಲ್ಲಿ ಪ್ರಸ್ತುತ ಕಡಬದ ಕೊಯಿಲ ಹಾಗೂ ಬೆಳ್ತಂಗಡಿಯ ಕೊಕ್ಕಡದಲ್ಲಿ 2 ಪಾಲನಾ ಕೇಂದ್ರಗಳು ಕಾರ್ಯಾಚರಿಸುತ್ತಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ವಿಟ್ಲ, ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಪಾಣಾಜೆ ಹಾಗೂ ಸುಳ್ಯದ ಬೆಳ್ಳಾರೆಯಲ್ಲಿ ಎಂಡೋ ಪಾಲನಾ ಕೇಂದ್ರಗಳು ಸಿದ್ಧಗೊಂಡಿವೆ.

ದ.ಕ.ಜಿಲ್ಲೆಯಲ್ಲಿ ಎಂಡೋ ಸಂತ್ರಸ್ತರಿಗಾಗಿ ಶಾಶ್ವತ ಪುನರ್ವಸತಿ ಕೇಂದ್ರ ಅನುಷ್ಠಾನವು ಹಲವು ವರ್ಷಗಳ ಬೇಡಿಕೆಯಾಗಿದ್ದು, ಈಗಾಗಲೇ ಜಿಲ್ಲಾಧಿ ಕಾರಿಗಳ ಮೂಲಕ ಸರಕಾರಕ್ಕೆ ಪ್ರಸ್ತಾವನೆಯೂ ಸಲ್ಲಿಕೆ ಯಾಗಿದೆ. ಆಲಂಕಾರು ಹಾಗೂ ಕೊಕ್ಕಡದಲ್ಲಿ ಜಾಗವನ್ನೂ ಗುರುತಿಸಿದ್ದು, ಆದರೆ ಅದು ಇನ್ನೂ ಕೂಡ ಮಂಜೂರಾಗಿಲ್ಲ.

ಕೇಂದ್ರಗಳು
ಹಿಂದೆಯೇ ಮಂಜೂರು
ಕಳೆಡೆರಡು ವರ್ಷಗಳ ಹಿಂದೆಯೇ ಜಿಲ್ಲೆಗೆ ಹೆಚ್ಚುವರಿ 4 ಡೇ ಕೇರ್‌ ಕೇಂದ್ರಗಳು ಮಂಜೂರಾಗಿದ್ದರೂ, ಕಟ್ಟಡದ ಕಾಮಗಾರಿ, ನಿರ್ವಹಣೆಗಾಗಿ ಎನ್‌ಜಿಒ ಆಯ್ಕೆ, ನಿರ್ವಹಣ ಅನುದಾನ ಬಿಡುಗಡೆ ವಿಳಂಬವಾದ ಕಾರಣಕ್ಕೆ ಕೇಂದ್ರಗಳು ಎಂಡೋ ಸಂತ್ರಸ್ತರ ಆರೈಕೆಗೆ ತೆರೆದುಕೊಂಡಿರಲಿಲ್ಲ.

ಸರಕಾರದ ಲೆಕ್ಕಾ ಚಾರದ ಪ್ರಕಾರ ಜಿಲ್ಲೆಯಲ್ಲಿ ಪ್ರಸ್ತುತ ಸುಮಾರು 4 ಸಾವಿರ ಎಂಡೋ ಸಂತ್ರಸ್ತರಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳು ಹಾಗೂ ಬಂಟ್ವಾಳದ ವಿಟ್ಲ ಭಾಗ ಮತ್ತು ಮಂಗಳೂರಿನ ಮೂಡುಬಿದಿರೆ ಭಾಗಗಳಲ್ಲಿ ಎಂಡೋ ಸಂತ್ರಸ್ತರ ಸಂಖ್ಯೆ ಹೆಚ್ಚಿವೆ. ಹೀಗಾಗಿ ಈ ಪ್ರದೇಶಗಳನ್ನು ಕೇಂದ್ರೀಕರಿಸಿ ಡೇ ಕೇರ್‌ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಹಗಲು ಹೊತ್ತಿನಲ್ಲಿ ಸಂತ್ರಸ್ತರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಿ ರಾತ್ರಿ ಮತ್ತೆ ಮನೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಸಂತ್ರಸ್ತರನ್ನು ಕೇಂದ್ರದ ವಾಹನದ ಮೂಲಕವೇ ಕರೆತರುವ ವ್ಯವಸ್ಥೆ ಇರುತ್ತದೆ.

ನಿರ್ವಹಣೆಗೆ ಬೇಕಿದೆ ಅನುದಾನ
ಆರೋಗ್ಯ ಇಲಾಖೆಯ ಎಂಜಿನಿಯರಿಂಗ್‌ ವಿಭಾಗದ ಮೂಲಕ ಸುಮಾರು 1.77 ಕೋ.ರೂ.ಗಳಲ್ಲಿ 4 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕೇಂದ್ರದ ಕಟ್ಟಡಕ್ಕಾಗಿ ವಿಟ್ಲಕ್ಕೆ 47 ಲಕ್ಷ ರೂ., ಕಣಿಯೂರಿಗೆ 20.91 ಲಕ್ಷ ರೂ., ಪಾಣಾಜೆಗೆ 47.20 ಲಕ್ಷ ರೂ. ಹಾಗೂ ಬೆಳ್ಳಾರೆಗೆ 62 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ವೈದ್ಯಕೀಯ ವ್ಯವಸ್ಥೆಯ ಅನುಕೂಲದ ದೃಷ್ಟಿಯಿಂದ ಸ್ಥಳೀಯ ಆರೋಗ್ಯ ಕೇಂದ್ರಗಳ ಆವರಣದಲ್ಲೇ ಕಟ್ಟಡ ನಿರ್ಮಾಣ ಮಾಡಲಾಗಿದೆ.

ಕಟ್ಟಡದ ಕೆಲಸಗಳು ಪೂರ್ಣಗೊಂಡ ಬಳಿಕ ಎಲ್ಲ ಕೇಂದ್ರಗಳಿಗೂ ಬೇಕಾದ ಅಗತ್ಯ ಮೂಲಸೌಕರ್ಯಗಳನ್ನು ಕೂಡ ಒದಗಿಸಲಾಗಿದೆ. ಕೇಂದ್ರಕ್ಕೆ ಸಿಬಂದಿಯನ್ನು ನಿಯೋಜಿಸಿ ಮುನ್ನಡೆಸಿಕೊಂಡು ಹೋಗುವ ದೃಷ್ಟಿಯಿಂದ ಈಗಾಗಲೇ ಎನ್‌ಜಿಒ ಸಂಸ್ಥೆಯನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜತೆಗೆ ಕೇಂದ್ರಗಳ ನಿರ್ವಹಣೆಗೆ ತಿಂಗಳಿಗೆ 2 ರಿಂದ 3 ಲಕ್ಷ ರೂ. ಮೊತ್ತ ಬೇಕಿರುವುದರಿಂದ ಸರಕಾರ ಅದನ್ನು ಕೂಡ ಬಿಡುಗಡೆ ಮಾಡಬೇಕಿದೆ.

ಎನ್‌ಜಿಒ ಆಯ್ಕೆ ಟೆಂಡರ್‌ ಹಂತ
ದ.ಕ.ಜಿಲ್ಲೆಯ 4 ಹೆಚ್ಚುವರಿ ಕೇಂದ್ರಗಳ ಕಟ್ಟಡ ಹಾಗೂ ಮೂಲ ಸೌಕರ್ಯ ಒದಗಿಸುವ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಕೇಂದ್ರವನ್ನು ನಿರ್ವಹಿಸಿಕೊಂಡು ಹೋಗುವುದಕ್ಕೆ ಎನ್‌ಜಿಒ ಆಯ್ಕೆ ಟೆಂಡರ್‌ ಹಂತದಲ್ಲಿದೆ. ನಿರ್ವಹಣೆಗೆ ಸರಕಾರದಿಂದ ಅನುದಾನ ಬಿಡುಗಡೆಯಾದ ತತ್‌ಕ್ಷಣ ಕೇಂದ್ರಗಳು ಕಾರ್ಯಾಚರಣೆಗೊಳ್ಳುತ್ತದೆ.
-ಸಾಜುದ್ದೀನ್‌, ಜಿಲ್ಲಾ ಸಂಯೋಜಕರು, ಎಂಡೋಸಲ್ಫಾನ್‌ ಕೋಶ, ದ.ಕ.ಜಿಲ್ಲೆ

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.