ಋಣಭಾರ ಪರಿಹಾರ ಯೋಜನೆ: ಬಾಣಲೆಯಿಂದ ಬೆಂಕಿಗೆ

ಪಂಜದಲ್ಲಿ ಅರ್ಜಿ ಸಿದ್ಧಪಡಿಸುವ ನೆಪದಲ್ಲಿ ಅನಕ್ಷರಸ್ಥ, ಬಡವರ ಸುಲಿಗೆ: ಆರೋಪ

Team Udayavani, Aug 29, 2019, 5:00 AM IST

h-12

ಸಾಂದರ್ಭಿಕ ಚಿತ್ರ

ಸುಬ್ರಹ್ಮಣ್ಯ: ರಾಜ್ಯ ಸರಕಾರವು ಜಾರಿಗೊಳಿಸಿದ ಋಣ ಪರಿಹಾರ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ ಅವಕಾಶ ನೀಡಲಾಗಿದೆ. ಇನ್ನೊಂದೆಡೆ ಯೋಜನೆಯ ದುರ್ಲಾಭವನ್ನು ಪಡೆದುಕೊಳ್ಳಲು ಕೆಲವರು ಹವಣಿಸುತ್ತಿದ್ದಾರೆ.

ಋಣಭಾರ ಪರಿಹಾರ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಹಣ ಗಳಿಸುತ್ತಿರುವ ಘಟನೆ ಪಂಜದಲ್ಲಿ ಬುಧವಾರ ಬೆಳಕಿಗೆ ಬಂದಿದೆ.

ಪಂಜ ಮುಖ್ಯ ಪೇಟೆಯ ಕೆಳಗಿನ ಪೇಟೆಯ ಕಚೇರಿಯೊಂದರಲ್ಲಿ ಯೋಜನೆಯ ಫಲಾನುಭವಿಗಳಿಗೆ ಅರ್ಜಿ ನಮೂನೆಯನ್ನು ಸಿದ್ಧಪಡಿಸಿ ಕೊಡುವ ಕೆಲಸ ನಡೆದಿತ್ತು. ಅರ್ಜಿ ನಮೂನೆ ಸಿದ್ಧಪಡಿಸಿ ಕೊಡುತ್ತೇವೆ ಎಂದು ಹೇಳಿ ಯೋಜನೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡದೆ ದಾರಿ ತಪ್ಪಿಸಿ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ವ್ಯಕ್ತವಾಗಿದೆ.

ಮೂಲ ದಾಖಲೆ
ಯೋಜನೆ ಕುರಿತು ಸರಿಯಾದ ಮಾಹಿತಿ ಇಲ್ಲದವರು ಈ ಕಚೇರಿಗೆ ದಾಖಲೆ ಪತ್ರಗಳೊಂದಿಗೆ ಆಗಮಿಸಿದ್ದಾರೆ. ಫಲಾನುಭವಿಗಳು ಯೋಜನೆಯಲ್ಲಿ ತಿಳಿಸಿದಂತೆ ಮೂಲ ದಾಖಲೆಗಳನ್ನು ಅಂಗಡಿ ಸಿಬಂದಿ ಕೈಗೆ ಒಪ್ಪಿಸಿದ್ದಾರೆ. ಅದನ್ನು ಪಡೆದ ಕಚೇರಿ ಸಿಬಂದಿ ಅರ್ಜಿ ನಮೂನೆ ಭರ್ತಿ ಮಾಡಿ ಕೊಡುತ್ತೇವೆ ಎಂದಿದ್ದಾರೆ.

ಕಚೇರಿಗೆ ಬರುವ ಗ್ರಾಹಕರಿಂದ ಮೂಲ ದಾಖಲೆ ಪತ್ರಗಳನ್ನು ಪಡೆಯುವ ಕಚೇರಿ ಸಿಬಂದಿ ಜೆರಾಕ್ಸ್‌, ಅರ್ಜಿ ನಮೂನೆ ಸಿದ್ಧಪಡಿಸುವ ನೆಪದಲ್ಲಿ ಫ‌ಲಾನುಭವಿಗಳಿಂದ ದೊಡ್ಡ ಮೊತ್ತದ ಹಣ ಪಡೆಯುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.

ದಾಖಲೆ ಸಿದ್ಧಪಡಿಸಿ ಕೊಡುವ ಕೆಲಸ
ಫಲಾನುಭವಿಗಳಿಂದ ದಾಖಲೆ ಪತ್ರ ಪಡೆದು, ಬಳಿಕ ಅರ್ಜಿ ನಮೂನೆಯಲ್ಲಿ ಟೈಪ್‌ ಮಾಡಿ ಸಿದ್ಧಪಡಿಸುತ್ತಿದ್ದಾರೆ. ನಕಲು ಪ್ರತಿ ತೆಗೆಯುವುದು, ಅರ್ಜಿ ನಮೂನೆ ಹಾಗೂ ದಾಖಲೆಗಳನ್ನು ಲಕೋಟೆಯಲ್ಲಿ ತುಂಬುವುದು ಇತ್ಯಾದಿ ಕೆಲಸಗಳಿಗೆ ಖರ್ಚಿನ ಬಾಬ್ತು 150 ರೂ.ಗಳಿಂದ 300 ರೂ. ತನಕ ಪಡೆಯುತ್ತಿರುವುದು ಕಂಡು ಬರುತ್ತಿದೆ. ಒಂದು ಪ್ರತಿಯನ್ನು ಉಪ ವಿಭಾಗಾಧಿಕಾರಿಗೆ, ಮತ್ತೂಂದು ಪ್ರತಿಯನ್ನು ಮುಖ್ಯಮಂತ್ರಿ ಕಚೇರಿಗೆ ಸಲಹೆ ನೀಡುತ್ತಿದ್ದಾರೆ. ಸಣ್ಣ ರೈತರು ಭೂರಹಿತ ಕೃಷಿ ಕಾರ್ಮಿಕರು ದುರ್ಬಲ ವರ್ಗದ ಜನತೆ ಅಧಿಕ ಬಡ್ಡಿಯಿಂದ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಈ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ.

ತನಿಖೆ ಮಾಡುವೆಮುಗ್ಧ ಬಡವರನ್ನು ಈ ರೀತಿ ವಂಚಿಸಿ ಹಣ ಗಳಿಸುವುದು ತಪ್ಪು. ಕಾನೂನು ದುರುಪಯೋಗ ಮಾಡಿಕೊಂಡು ವಂಚನೆ ನಡೆಸಿದರೆ ಅಂಥವರ ಮೇಲೆ ಕ್ರಿಮಿನಲ್ ದೂರು ದಾಖಲಿಸಿಕೊಳ್ಳುತ್ತೇವೆ. ಈಗಲೇ ಅಲ್ಲಿಗೆ ಅಧಿಕಾರಿಗಳನ್ನು ಕಳುಹಿಸಿ ತನಿಖೆ ನಡೆಸುತ್ತೇನೆ. ಗುರುವಾರ ನಾನು ಖುದ್ದು ಅಲ್ಲಿಗೆ ತೆರಳಿ ತನಿಖೆ ಮಾಡುವೆ.
– ಕುಂಞಿ ಅಹಮ್ಮದ್‌ ತಹಶೀಲ್ದಾರ್‌ ಸುಳ್ಯ

ಸಿದ್ಧಪಡಿಸಿ ಕೊಡುತ್ತಿದ್ದೇವೆನಮ್ಮಲ್ಲಿ ಅರ್ಜಿಗಳು ಸಿಗುತ್ತಿಲ್ಲ. ನಾವು ಅರ್ಜಿ ನಮೂನೆಗಳನ್ನು ತಯಾರು ಮಾಡಿ ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿ ಕೊಡುತ್ತೇವೆ. ಅದಕ್ಕೆ 150ರಿಂದ 200 ರೂ. ಪಡೆದುಕೊಳ್ಳುತ್ತಿದ್ದೇವೆ.
– ಪಂಜದ ಕಚೇರಿಯ ಸಿಬಂದಿ

200ಕ್ಕೂ ಹೆಚ್ಚು ಜನರು

ಪಂಜದ ಕಚೇರಿಗೆ ಬುಧವಾರ 200ಕ್ಕೂ ಮಿಕ್ಕಿದ ಬಡ ಫಲಾನುಭವಿಗಳು ಆಗಮಿಸಿದ್ದರು. ಕಚೇರಿ ಮುಂದೆ ಸಾಲುಗಟ್ಟಿ ನಿಂತಿದ್ದರು. ಒಂದು ಬಾರಿ ಸಾಲದಿಂದ ಮುಕ್ತರಾಗಿ ಅಡವಿಟ್ಟ ಆಭರಣಗಳನ್ನು ಮರಳಿ ಪಡೆಯುವ ಕನಸಿನೊಂದಿಗೆ ಬಂದಿದ್ದ ಜನರು ಇಲ್ಲಿ ಜಾಸ್ತಿ ಹಣ ನೀಡಬೇಕಾಗಿ ಬಂದಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.