ಸರ್ವೇ ಕಾರ್ಯಕ್ಕೆ ವನ್ಯಜೀವಿ ವಿಭಾಗದ ಸಮ್ಮತಿ: ದಿಡುಪೆ-ಸಂಸೆ ರಸ್ತೆ ನನಸಾಗುವತ್ತ


Team Udayavani, Sep 16, 2021, 6:25 AM IST

Untitled-1

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನವನದ ಮೂಲಕ ಹಾದು ಹೋಗುವ ದಿಡುಪೆ-ಎಳನೀರು-ಸಂಸೆ ನಡುವೆ ರಸ್ತೆ ನಿರ್ಮಿಸುವ ಬಗ್ಗೆ ಸರ್ವೇ ಕಾರ್ಯ ಕೈಗೊಳ್ಳಲು ಕೊನೆಗೂ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ಅನುಮತಿಸಿದ್ದು, ತಾಲೂಕಿನ ದಿಡುಪೆ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಈಡೇರುವ ಕಾಲ ಸನ್ನಿಹಿತವಾಗಿದೆ.

ಅನೇಕ ವರ್ಷಗಳ ಹೋರಾಟದ ಫಲವಾಗಿ ವನ್ಯಜೀವಿ ವಿಭಾಗವು ರಸ್ತೆಗೆ ಸರ್ವೇ ನಡೆಸುವಂತೆ ಲೋಕೋಪಯೋಗಿ ಇಲಾಖೆಯ ಬೆಳ್ತಂಗಡಿ ಸಹಾಯಕ ಕಾರ್ಯಪಾಲಕ ಅಭಿಯಂತ ಶಿವಪ್ರಸಾದ್‌ ಅವರಿಗೆ ಪತ್ರ ಬರೆದು ಸೂಚನೆ ನೀಡಿದೆ. ಮಳೆ ಪರಿಸ್ಥಿತಿ ಅವಲೋಕಿಸಿ ಸರ್ವೇ ಕಾರ್ಯದ ರೂಪುರೇಖೆ ಸಿದ್ಧವಾಗಲಿದೆ.

ಘಾಟಿ ಕ್ರಮಿಸುವ ವ್ಯಾಪ್ತಿ ಅತೀ ಕಡಿಮೆ:

ಗುಡ್ಡ ಕುಸಿತದಿಂದ ನಲುಗಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಲಕ್ರಮೇಣ ಸಂಚಾರ ಬಾಧಿತವಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ದಿಡುಪೆ-ಸಂಸೆ ರಸ್ತೆಯು ಪರ್ಯಾಯವಾಗುವ ಜತೆಗೆ ಕೇವಲ 7 ಕಿ.ಮೀ.ಗಳಷ್ಟೇ ಘಾಟಿ ಪ್ರದೇಶದಲ್ಲಿ ಕ್ರಮಿಸುವ ಅಂತರವಾಗಲಿದೆ. ಉಳಿ

ದಂತೆ ಮಾಳ ಮತ್ತು ಚಾರ್ಮಾಡಿ ಘಾಟಿಗಳಲ್ಲಿ 20 ಕಿ.ಮೀ. ದೂರ ಕ್ರಮಿಸಬೇಕಿದೆ. ನೂತನ ರಸ್ತೆ ನಿರ್ಮಾಣಕ್ಕೆ ದೊಡ್ಡ ಸೇತುವೆಗಳ ಆವಶ್ಯಕತೆಯಿಲ್ಲ. ಮೋರಿಗಳ ಆಗತ್ಯವಷ್ಟೇ ಇದೆ. ಭಾರೀ ಮರಗಳ ತೆರವಿಗೆ ಆಸ್ಪದವಿಲ್ಲ. 4 ಕಿ.ಮೀ. ರಸ್ತೆಯಷ್ಟೇ ವನ್ಯಜೀವಿ ವಲಯಕ್ಕೆ ಸೇರಲಿದ್ದು, ಉಳಿದಂತೆ ಎಳನೀರು ಗಡಿಯಿಂದ ಹಲಸಿನಕಟ್ಟೆವರೆಗಿನ 3.30 ಕಿ.ಮೀ. ಕಂದಾಯ ಭೂಮಿಗೆ ಸೇರಿದ್ದಾಗಿದೆ.

ಪ್ರಮುಖ ಪ್ರಯೋಜನೆ:

ರಾ.ಹೆ. 73ರ ಚಾರ್ಮಾಡಿ ರಸ್ತೆಗೆ ಪರ್ಯಾಯ ರಸ್ತೆಯಾಗುವ ಜತೆಗೆ 4 ಪ್ರಮುಖ ಯಾತ್ರಾಸ್ಥಳಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡುಗಳನ್ನು ಬಹುಬೇಗನೆ ಸಂದರ್ಶಿಸಲು ಅನಕೂಲವಾಗಲಿದೆ. ಇಲ್ಲವಾದಲ್ಲಿ 150 ಕಿ.ಮೀ. ಸುತ್ತುಬಳಸಿ ಚಾರ್ಮಾಡಿ ಅಥವಾ ಬಜಗೋಳಿಯಾಗಿ ಬಂದು ಹೊರನಾಡಿನಿಂದ ಶೃಂಗೇರಿಗೆ ತೆರಳಬೇಕಾಗಿದೆ. ನೂತನ ರಸ್ತೆಯಾದಲ್ಲಿ 100 ಕಿ.ಮೀ. ಉಳಿತಾಯವಾಗಲಿದೆ.

ಮತ್ತೂಂದೆಡೆ ಎಳನೀರು ಪ್ರದೇಶದಲ್ಲಿ 500ಕ್ಕೂ ಅಧಿಕ ಜನಸಂಖ್ಯೆಯಿದ್ದು, ಆರೋಗ್ಯ, ಶಿಕ್ಷಣ ಇತ್ಯಾದಿಗಳಿಗಾಗಿ ತಾಲೂಕು ಕೇಂದ್ರಕ್ಕೆ ತಲುಪಲು ಅವರ ಜೀವಮಾನದ ಸಂಪರ್ಕ ರಸ್ತೆ ಇದು ಎನಿಸಿಕೊಳ್ಳಲಿದೆ. ಇಲ್ಲವಾದಲ್ಲಿ ಅವರು ಬೆಳ್ತಂಗಡಿಗೆ ತಲುಪಲು ಬಸ್‌ನಲ್ಲಾದರೆ 100 ಕಿ.ಮೀ. ಸುತ್ತಬೇಕು. ಕಾಲ್ನಡಿಗೆಯಲ್ಲಾದರೆ 12 ಕಿ.ಮೀ. ಕ್ರಮಿಸುವ ಅನಿವಾರ್ಯ ಎಳನೀರು ನಿವಾಸಿಗಳದ್ದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.