ಉದನೆ: ಉಪ್ಪಿನಂಗಡಿ ವ್ಯಾಪಾರಿಯ ಅಂಗಡಿ ಮುಚ್ಚಿಸಲು ಆಗ್ರಹ!
Team Udayavani, Apr 21, 2020, 10:01 AM IST
ಉಪ್ಪಿನಂಗಡಿ: ದಂಪತಿಗೆ ಕೋವಿಡ್-19 ಪಾಸಿಟಿವ್ ಬಂದಿದೆ ಎಂಬ ಕಾರಣಕ್ಕೆ ಉಪ್ಪಿನಂಗಡಿಯ ನಿವಾಸಿ ಪ್ರಸಕ್ತ ಶಿರಾಡಿ ಗ್ರಾಮದ ಉದನೆಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಅಲ್ಲಿನ ಜನತೆ ಭೀತರಾಗಿ ಅಂಗಡಿ ಮುಚ್ಚಲು ಒತ್ತಡ ಹಾಕಿದ ಘಟನೆ ಸೋಮವಾರ ನಡೆದಿದೆ.
ಉಪ್ಪಿನಂಗಡಿಯ ನಿವಾಸಿಯಾಗಿರುವ ವ್ಯಕ್ತಿ ಸೋಮವಾರ ಅಂಗಡಿ ತೆರೆದಾಗ ಅವರು ಉಪ್ಪಿನಂಗಡಿಯ ಕೋವಿಡ್-19 ಪೀಡಿತರೊಂದಿಗೆ ನಂಟು ಹೊಂದಿದ್ದಾರೆಂದು ಭ್ರಮಿಸಿ ಅಂಗಡಿಯನ್ನು ಮುಚ್ಚಬೇಕೆಂದು ಆಗ್ರಹಿಸಿದ್ದಲ್ಲದೆ ಅವರು ಇಲ್ಲಿನ ಜನತೆಗೆ ಕೋವಿಡ್-19 ವೈರಸ್ ಹರಡುತ್ತಾರೆಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದರು. ಪರಿಶೀಲನೆ ನಡೆಸಿದ ಪೊಲೀಸರು, ಕೋವಿಡ್-19 ಪೀಡಿತರ ಸಂಪರ್ಕದಲ್ಲಿ ವ್ಯಾಪಾರಿಯ ಹೆಸರು ಇಲ್ಲದ ಕಾರಣ ಕೇವಲ ಉಪ್ಪಿನಂಗಡಿಯ ವ್ಯಕ್ತಿ ಎಂಬ ಕಾರಣಕ್ಕೆ ಅವರಿಗೆ ದಿಗ್ಬಂಧನ ಹಾಕಲು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿದರು.
ಸೀಲ್ಡೌನ್ ಕಟ್ಟುನಿಟ್ಟು
ಉಪ್ಪಿನಂಗಡಿಯ ಲಕ್ಷ್ಮೀನಗರ ಹಾಗೂ ಕರಾಯ ಗ್ರಾಮದ ಕಲ್ಲೇರಿಯಲ್ಲಿ ಸೀಲ್ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಿಸಲ್ಪಟ್ಟಿದ್ದು, ಸ್ಥಳಕ್ಕೆ ಸಹಾಯಕ ಕಮಿಷನರ್ ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸಕ್ತ ನಿಗಾ ಘಟಕದಲ್ಲಿರುವ ಮಕ್ಕಳೂ ಸೇರಿದಂತೆ 12 ಮಂದಿಯ ಆರೋಗ್ಯದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?