ಪಂಚಾಯತ್‌ರಾಜ್‌ ವಿಭಾಗಕ್ಕೂ ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳ ಬೇಡಿಕೆ

ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿದ ಕಾಮಗಾರಿ ಬಂಟ್ವಾಳ: ಗ್ರಾಮೀಣ ಭಾಗಗಳಲ್ಲಿ ಸರಕಾರಿ ಅ

Team Udayavani, Sep 11, 2020, 4:38 AM IST

ಪಂಚಾಯತ್‌ರಾಜ್‌ ವಿಭಾಗಕ್ಕೂ ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳ ಬೇಡಿಕೆ

ಬಂಟ್ವಾಳ: ಗ್ರಾಮೀಣ ಭಾಗಗಳಲ್ಲಿ ಸರಕಾರಿ ಅನುದಾನದ ಕಾಮಗಾರಿಗಳು ಜಿ.ಪಂ. ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮೂಲಕ ಅನುಷ್ಠಾನಗೊಳ್ಳುತ್ತಿದ್ದು, ಆದರೆ ಈ ವಿಭಾಗದಲ್ಲಿ ಸಿವಿಲ್‌ ಎಂಜಿನಿಯರ್‌ಗಳು ಮಾತ್ರ ಇರುವುದರಿಂದ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮೆಸ್ಕಾಂ ಎಂಜಿನಿಯರ್‌ಗಳನ್ನೇ ಆಶ್ರಯಿಸಬೇಕಾದ ಸ್ಥಿತಿ ಇದೆ. ಹೀಗಾಗಿ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಲ್ಲೂ ಎಲೆಕ್ಟ್ರಿಕಲ್‌ ಎಂಜಿ ನಿಯರ್‌ಗಳು ಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ.

ಇದು ಮೆಸ್ಕಾಂ ಎಂಜಿನಿಯರ್‌ಗಳು ಮಾಡ ಬೇಕಾದ ಕಾರ್ಯಗಳಲ್ಲ. ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮೂಲಕವೇ ನಡೆಯಬೇಕಿದ್ದರೂ ಸಿವಿಲ್‌ ಎಂಜಿನಿಯರ್‌ಗಳು ಎಲೆಕ್ಟ್ರಿಕಲ್‌ ವಿಭಾಗದಲ್ಲಿ ಪರಿಣಿತರು ಅಲ್ಲದೇ ಇರು ವುದರಿಂದ ಅವರು ಮೆಸ್ಕಾಂ ಎಂಜಿನಿಯರ್‌ಗಳನ್ನು ಕಾಯುತ್ತಾರೆ. ಹೀಗಾಗಿ ಬಹುತೇಕ ಕಾಮಗಾರಿ ವಿಳಂಬವಾಗುತ್ತಿವೆ ಎಂಬ ಆರೋಪ ಇದೆ.

ಪ್ರಸ್ತುತ ಹೇಗೆ ನಡೆಯುತ್ತಿದೆ ಕಾರ್ಯ?
ಗ್ರಾಮೀಣ ಭಾಗಗಳಲ್ಲಿ ಗ್ರಾ.ಪಂ.ಗಳು ಹೊಸ ವಿದ್ಯುತ್‌ ಲೈನ್‌ ಅಥವಾ ಇನ್ಯಾವುದೇ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಅನುದಾನ ಮೀಸಲಿಡುತ್ತವೆ. ಅದರ ಕ್ರೀಯಾಯೋಜನೆಯನ್ನು ಮೆಸ್ಕಾಂ ಎಂಜಿನಿಯರ್‌ಗಳು ಸಿದ್ಧಪಡಿಸುತ್ತಾರೆ. ಬಳಿಕ ಗುತ್ತಿಗೆದಾರರ ಮೂಲಕ ಕಾಮಗಾರಿಗಳು ನಡೆದು, ಅದರ ಪರಿಪೂರ್ಣತೆಯನ್ನೂ ಮೆಸ್ಕಾಂ ಎಂಜಿನಿಯರ್‌ಗಳೇ ಹೇಳಬೇಕಾಗುತ್ತದೆ. ಇಷ್ಟೆಲ್ಲ ಕೆಲಸಗಳು ನಡೆದ ಬಳಿಕ ಅದರ ಬಿಲ್‌ ಪಾವತಿಯ ಕಾರ್ಯವನ್ನು ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮೂಲಕವೇ ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ಕಾರ್ಯಗಳಿಗೆ ಮೆಸ್ಕಾಂ ಎಂಜಿನಿಯರ್‌ಗಳನ್ನೇ ಕಾಯಬೇಕಿದ್ದು, ಕಾಮಗಾರಿ ವಿಳಂಬಕ್ಕೆ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಅಂದರೆ ಮೆಸ್ಕಾಂನವರು ತಮ್ಮ ಕೆಲಸದ ಜತೆಗೆ ಇದನ್ನು ಹೆಚ್ಚುವರಿಯಾಗಿ ನಿರ್ವಹಿಸಬೇಕಾಗುತ್ತದೆ.

ಅಧಿಕಾರಿಗಳ ಸಭೆಯಲ್ಲೂ ಚರ್ಚೆ
ಕೆಲವು ದಿನಗಳ ಹಿಂದೆ ಬಂಟ್ವಾಳ ತಾ.ಪಂ.ನಲ್ಲಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಗುತ್ತು ನೇತೃ ತ್ವದಲ್ಲಿ ನಡೆದ ಗ್ರಾ.ಪಂ. ಪಿಡಿಒ ಹಾಗೂ ಆಡಳಿತಾಧಿ ಕಾರಿಗಳ ಸಭೆಯಲ್ಲಿ 14ನೇ ಹಣಕಾಸು ಯೋಜನೆಯ ಬಹುತೇಕ ಕಾಮಗಾರಿಗಳ ವಿಳಂಬಕ್ಕೆ ಇದೇ ಸಮಸ್ಯೆ ಎದುರಾಗಿದ್ದು, ಒಂದು ವೇಳೆ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳು ಇರುತ್ತಿದ್ದರೆ ಈ ತೊಂದರೆ ಇರುತ್ತಿರಲಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿತ್ತು.

ಹಿಂದೆ ಜಿಲ್ಲೆಗೊಬ್ಬರು ಇದ್ದರು
ಕೆಲವು ವರ್ಷಗಳ ಹಿಂದೆ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಲ್ಲಿ ಜಿಲ್ಲೆಗೆ ಒಬ್ಬರು ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳು ಇರುತ್ತಿದ್ದರು. ಆದರೆ ಹಿಂದೆ ಇದ್ದ ಎಂಜಿನಿಯರ್‌ಗಳು ನಿವೃತ್ತಿ ಹೊಂದಿದ ಬಳಿಕ ಹೊಸ ಹುದ್ದೆಗಳನ್ನು ನೇಮಕ ಮಾಡದೆ, ಎಲೆಕ್ಟ್ರಿಕಲ್‌ ಹುದ್ದೆಯನ್ನೇ ತೆಗೆದು ಹಾಕಲಾಗಿತ್ತು ಎಂದು ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ತಾಲೂಕಿಗೆ ಒಬ್ಬರಾದರೂ ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳು ಬೇಕು ಎಂಬ ಬೇಡಿಕೆ ಇದೆ.

ವಿ. ಸಭೆಯಲ್ಲೂ ಚರ್ಚೆ
ಗ್ರಾಮೀಣ ಭಾಗಗಳಲ್ಲಿ ಕಟ್ಟಡದ ವಿದ್ಯುತ್‌ ಸಂಪರ್ಕ ವ್ಯವಸ್ಥೆ, ವಿದ್ಯುತ್‌ ಲೈನ್‌ ವರ್ಕ್‌ ಹೀಗೆ ಹಲವು ಕಾಮಗಾರಿಗಳು ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳಿಲ್ಲದೆ ಬಾಕಿಯಾಗಿದ್ದು, ಹೀಗಾಗಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಎಲೆಕ್ಟ್ರಿಕಲ್‌ ಎಂಜಿನಿಯರ್‌ಗಳ ಹುದ್ದೆಯನ್ನು ಸೃಷ್ಟಿಸು ವಂತೆ ಬಂಟ್ವಾಳ ಶಾಸಕರು ಒಂದೂವರೆ ವರ್ಷಗಳ ಹಿಂದೆ ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾವಿಸಿದ್ದರು.

ಮೆಸ್ಕಾಂ ಎಂಜಿನಿಯರ್‌ಗಳು ನಿರ್ವಹಣೆ
ಪ್ರಸ್ತುತ ಎಲೆಕ್ಟ್ರಿಕಲ್‌ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಮೊದಲಾದ ಕೆಲಸಗಳನ್ನು ಮೆಸ್ಕಾಂ ಎಂಜಿನಿಯರ್‌ಗಳ ಮೂಲಕವೇ ಮಾಡಲಾಗುತ್ತದೆ. ಅಂದರೆ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಸಿವಿಲ್‌ ಎಂಜಿನಿಯರ್‌ಗಳು ಮಾತ್ರ ಇರುತ್ತಾರೆ. ಹೀಗಾಗಿ ಹಿಂದೆ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕರು ಎಲೆಕ್ಟ್ರಿಕಲ್‌
ಎಂಜಿನಿಯರ್‌ಗಳ ವಿಚಾರವನ್ನು ಪ್ರಸ್ತಾವಿಸಿದ್ದರು.
-ತಾರಾನಾಥ್‌ ಸಾಲ್ಯಾನ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ, ಬಂಟ್ವಾಳ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.