ಅಡಿಕೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರದ ಬೇಡಿಕೆ


Team Udayavani, Aug 23, 2021, 4:30 AM IST

ಅಡಿಕೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರದ ಬೇಡಿಕೆ

ಪುತ್ತೂರು: ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಇದಕ್ಕೊಂದು ಸ್ಪಂದನೆ ದೊರೆಯುವ ನಿರೀಕ್ಷೆ ಬೆಳೆಗಾರರದ್ದು.

ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ ಕುಟುಂಬಗಳು ತತ್ತರಿ ಸಿವೆ. ಸಂಪಾಜೆ, ಚೆಂಬು, ಪೆರಾಜೆ ಮೊದಲಾದ ಗ್ರಾಮಗಳಲ್ಲಿ ಅಡಿಕೆ ಕೃಷಿ ಶೇ. 90ರಷ್ಟು ನಾಶವಾಗಿದ್ದು, ಪರ್ಯಾಯ ಬೆಳೆಯತ್ತ ಜನರು ಮುಖ ಮಾಡುವ ಅನಿವಾರ್ಯ ಸೃಷ್ಟಿಯಾಗಿದೆ. ಹಳದಿ ರೋಗದಿಂದಾಗಿ ಅಡಿಕೆಯನ್ನು ನಂಬಿರುವ ಕುಟುಂಬಗಳು ಬೀದಿಗೆ ಬೀಳುವ ಅಪಾಯದಲ್ಲಿವೆ.

ಉತ್ತರ ಸಿಕ್ಕಿಲ್ಲ:

47 ವರ್ಷದ ಹಿಂದೆ ಆರಂಭಗೊಂಡ ಈ ಹಳದಿ ರೋಗ ಅಡಿಕೆಗೆ ತಗಲಿರುವ ಲಕ್ಷಣ ಕಾಣಿಸುಕೊಳ್ಳುವುದು ನಾಶದ ಅಂಚಿನಲ್ಲಿ. ಆರಂಭಿಕ ರೋಗ ಲಕ್ಷಣ ಬಿಟ್ಟುಕೊಡದ ಕಾರಣ, ಇದಕ್ಕೆ ಪರಿಹಾರ ಏನು ಎಂಬ ಬಗ್ಗೆ ಉತ್ತರ ಸಿಕ್ಕಿಲ್ಲ.

ಅಡಿಕೆ ಹಣ್ಣಾಗದಿರುವುದು, ಹಣ್ಣಾದ ಅಡಿಕೆ ಗುಣಮಟ್ಟ ಇಲ್ಲದಿರುವುದು, ಫ‌ಸಲು ಕಡಿಮೆ ಆಗು ವುದು, ಕ್ರಮೇಣ ಎಲೆಯು ಹಳದಿ ಬಣ್ಣಕ್ಕೆ ತಿರುಗಿ ಅಡಿಕೆ ಗಿಡ ನಶಿಸುವುದು ಇದರ ಲಕ್ಷಣ. ರೋಗ ಸಾಂಕ್ರಾಮಿಕವಾಗಿದ್ದು, ಒಂದು ಗಿಡಕ್ಕೆ ತಗಲಿತೆಂದರೆ ಪರಿಸರದ ಗಿಡಗಳಿಗೂ ವ್ಯಾಪ್ತಿಸುತ್ತದೆ.

ಸಂಪಾಜೆ, ಅರಂತೋಡು, ತೊಡಿಕಾನ, ಆಲೆಟ್ಟಿ, ಮರ್ಕಂಜ, ಮಡಪ್ಪಾಡಿ, ಕಲ್ಮಕಾರುಗಳಲ್ಲಿ ಕಾಣಿಸಿಕೊಂಡಿರುವ ಹಳದಿ ರೋಗ, ಈಗ ನೆರೆಯ ಗ್ರಾಮಗಳಲ್ಲಿಯೂ ಗೋಚರಿಸಿದೆ. ಅಂದಾಜಿನ ಪ್ರಕಾರ ಒಟ್ಟು 5 ಸಾವಿರ ಎಕ್ರೆ ತೋಟ ನಾಶವಾಗಿದೆ. ಪುತ್ತೂರು ತಾಲೂಕಿನ ಕೆಲವು ಗ್ರಾಮಗಳ ತೋಟಗಳಲ್ಲಿ ಹಳದಿ ರೋಗದ ಲಕ್ಷಣ ಕಂಡು ಬಂದಿದೆ. ರೋಗ ಏನು ಅನ್ನುವ ಬಗ್ಗೆ ಇನ್ನು ಖಚಿತ ಉತ್ತರ ಬಂದಿಲ್ಲ. ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅವರಿಂದಲೂ ರೋಗ ಅಥವಾ ನಿಯಂತ್ರಣಕ್ಕೆ ಬೇಕಾದ ಔಷಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕಾಂಡದಲ್ಲಿ ಬೇರು ಹುಳ ರೋಗ ಕಾಣಿಸಿಕೊಂಡ ಸಂದರ್ಭದಲ್ಲಿ ಮೈಸೂರಿನಿಂದ ವಿಜ್ಞಾನಿಗಳು ಬಂದು ಪರಿಶೀಲಿಸಿ¨ªಾರೆ. ಅವರಿಂದಲೂ ಉತ್ತರ ಸಿಗಲಿಲ್ಲ.

ಬೆಳೆಯೂ ಇಲ್ಲ, ಪರಿಹಾರವೂ ಇಲ್ಲ :

ಹಳೆ ಅಡಿಕೆ ಮರ ಕಡಿದು ಹೊಸ ಗಿಡ ನಾಟಿ ಮಾಡಿದರೂ ಅದರಿಂದ ಪ್ರಯೋಜನ ಸಿಕ್ಕಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಅಡಿಕೆ ಗಿಡ ಬೆಳವಣಿಗೆ ಕಂಡಿಲ್ಲ. ಇನ್ನು ಈ ರೋಗದಿಂದ ಕೃಷಿ ನಾಶಗೊಂಡಿದ್ದಕ್ಕೆ ಪರಿಹಾರ ಕೊಡಿ ಎಂದು ರೈತರು ವಿವಿಧ ಇಲಾಖೆ, ಸರಕಾರಗಳಿಗೆ ಬೇಡಿಕೆ ಇಟ್ಟಿದ್ದರೂ ಪರಿಹಾರ ಸಿಕ್ಕಿಲ್ಲ. ಇದರ ಮಧ್ಯೆ ಜೀವನ ನಿರ್ವಹಣೆಗಾಗಿ ಕೆಲವು ರೈತರು, ಪರ್ಯಾಯ ಬೆಳೆಯತ್ತ ಚಿಂತನೆ ನಡೆಸಿ, ತಾಳೆಬೆಳೆಯನ್ನು ನಾಟಿ ಮಾಡಿದ್ದಾರೆ.

ಸಚಿವೆ ಮೇಲಿದೆ ನಿರೀಕ್ಷೆ : ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 3 ಸಾವಿರ ಹೆಕ್ಟೇರಿಗಿಂತಲೂ ಅಧಿಕ ತೋಟ ಹಳದಿ ರೋಗದಿಂದ ನಾಶ ಹೊಂದಿದ್ದು, ರೈತರಿಗೆ ಎಕ್ರೆಗೆ 10 ಲಕ್ಷ ರೂ. ಪರಿಹಾರ ನೀಡಬೇಕು. 25 ಕೋ.ರೂ.ಪ್ಯಾಕೇಜ್‌ ಘೋಷಿಸಬೇಕು ಎಂಬಿತ್ಯಾದಿ ಬೇಡಿಕೆಗಳಿದ್ದು ಕೇಂದ್ರ ಕೃಷಿ ಸಚಿವೆ ಸುಳ್ಯ, ಪುತ್ತೂರು ಭಾಗದ ಕೃಷಿಕರ ಧ್ವನಿಯಾಗಿ ಇದಕ್ಕೊಂದು ಪರಿಹಾರ ಒದಗಿಸುತ್ತಾರೋ ಎಂದು ರೈತರು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.