ಸರ್ವಋತು ರಸ್ತೆ, ಸೇತುವೆಗೆ ಬೇಡಿಕೆ


Team Udayavani, May 23, 2019, 5:50 AM IST

s-17

ಕೆಯ್ಯೂರು: ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ಕಣಿಯಾರು -ಕಜೆಮೂಲೆ-ಒಡಪಲ್ಲ-ಕಳಾಯಿ ರಸ್ತೆಗೆ ಸೇತುವೆ ಸಹಿತ ಸರ್ವಋತು ರಸ್ತೆಯನ್ನಾಗಿ ಪರಿವರ್ತಿಸಬೇಕು ಎನ್ನುವ ಬೇಡಿಕೆಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ. ಹಲವು ಮನವಿಗಳು, ಸ್ಥಳೀಯರು ರಸ್ತೆಗಾಗಿ ಜಾಗ ಬಿಟ್ಟುಕೊಟ್ಟರೂ ಇಲಾಖೆಗಳಿಂದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಹಾಗಾಗಿ ಈ ಬಾರಿಯೂ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳಿಗೆ ಸುತ್ತಾಟವೇ ಗತಿ ಎನಿಸಿದೆ.

100 ಮನೆಗಳಿಗೆ ದಾರಿ
ಈ ರಸ್ತೆಯು ಕಣಿಯಾರು, ಇಳಂತಜೆ, ಅರ್ತ್ಯಡ್ಕ,, ಕಜೆಮೂಲೆ, ಒಡಪಲ್ಲ, ಕಲಾಯಿ, ಪೆರ್ಲಂಪಾಡಿ ಪ್ರದೇಶದ 100ಕ್ಕೂ ಅಧಿಕ ಮನೆಗಳ 500ಕ್ಕೂ ಅಧಿಕ ಮಂದಿಗೆ ಸಂಚಾರ ರಸ್ತೆಯಾಗಿದೆ. ಆದರೆ ರಸ್ತೆ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಈ ರಸ್ತೆಯಲ್ಲಿ ಸೇತುವೆ ನಿರ್ಮಾಣದ ಬೇಡಿಕೆ ಇದ್ದು, ಈ ತನಕ ಈಡೇರಿಲ್ಲ. ಹೀಗಾಗಿ ಮಳೆಗಾಲದಲ್ಲಿ ವಾಹನ ಸಂಚಾರ ಸಾಧ್ಯವಾಗುವುದಿಲ್ಲ. ಸ್ಥಳೀಯ ಗ್ರಾ.ಪಂ.ನಿಂದ ಕಾಲುಸಂಕ ನಿರ್ಮಾಣವಾದ ಕಾರಣ ವಿದ್ಯಾರ್ಥಿಗಳ ಸಂಚಾರಕ್ಕೆ ಒಂದಷ್ಟು ಅನುಕೂಲವಾಗಿದೆ.

ಜಾಗ ಕೊಟ್ಟಿದ್ದಾರೆ
ಸರ್ವಋತು ರಸ್ತೆಯನ್ನಾಗಿ ಪರಿವರ್ತಿಸಲು ಸ್ಥಳೀಯರು ಸ್ವಂತ ಸ್ಥಳವನ್ನು ಬಿಟ್ಟುಕೊಟ್ಟಿದ್ದಾರೆ. ಗ್ರಾ.ಪಂ. ಸುಪರ್ದಿಗೆ ನೀಡಿ 3 ವರ್ಷಗಳೇ ಸಂದಿವೆ. ಈ ರಸ್ತೆ ದುರಸ್ತಿಗೆ ಜನರೇ 3.80 ಲಕ್ಷ ರೂ. ವ್ಯಯಿಸಿದ್ದಾರೆ. ಇಷ್ಟಾದರೂ ಶಾಸಕರ, ಸಂಸದರ ಅಥವಾ ಇನ್ನಿತರ ಮೂಲಗಳಿಂದ ಅನುದಾನ ಕಾದಿರಿಸುವ ಯಾವ ಪ್ರಯತ್ನವೂ ನಡೆದಿಲ್ಲ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಅನುದಾನದ ಕಾರಣದಿಂದ ಬೇಡಿಕೆ ಈಡೇರುತ್ತಿಲ್ಲ ಎಂದು ಸ್ಥಳೀಯರು ದೂರುತ್ತಾರೆ.

ಸುತ್ತಾಟ ತಪ್ಪಲಿದೆ
ಸೇತುವೆ ನಿರ್ಮಾಣವಾದಲ್ಲಿ ಮಳೆಗಾಲದಲ್ಲಿ ಕೆಯ್ಯೂರು ಸಂಪರ್ಕಕ್ಕೆ ಸುಮಾರು 10 ಕಿ.ಮೀ. ಹತ್ತಿರ. ಈಗಂತೂ ಪೆರ್ಲಂಪಾಡಿ ರಸ್ತೆ ಮೂಲಕ ಕೆಯ್ಯೂರಿಗೆ ಸುತ್ತು ಬಳಸಿ ಬರಬೇಕು. ಈ ರಸ್ತೆ ಹಾದು ಹೋಗುವ ಪ್ರದೇಶದಲ್ಲಿ ಒಡಪಲ್ಲ ಕಾಲನಿ, ಕಳಾಯಿ ಕಾಲನಿಗಳಲ್ಲಿ ಸುಮಾರು 60ಕ್ಕೂ ಅಧಿಕ ಪರಿಶಿಷ್ಟ ಜಾತಿ ಕುಟುಂಬಗಳು ವಾಸಿಸುತ್ತಿವೆ. ಕಳೆದ ಐದು ವರ್ಷದಲ್ಲಿ ಬೇಡಿಕೆಗೆ ಸಂಬಂಧಿಸಿ ಶಾಸಕರಿಗೆ, ತಾ.ಪಂ., ಎಂ.ಪಿ., ಕೆಯ್ಯೂರು ಗ್ರಾ.ಪಂ.ಗೆ ಮನವಿ ನೀಡಲಾಗಿದೆ ಎನ್ನುತ್ತಾರೆ ಸ್ಥಳೀಯರು.

 ಮೋರಿಗೆ ಅನುದಾನ
ಗ್ರಾ.ಪಂ.ನಿಂದ ಮೋರಿ ಕಾಮಗಾರಿಗೆ 1 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಕಾಲುಸಂಕ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನದ ಅಗತ್ಯವಿದ್ದು, ಸಂಸದರ ನಿಧಿ ಅಥವಾ ನಬಾರ್ಡ್‌ ಯೋಜನೆಯಿಂದ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.
– ಸುಬ್ರಹ್ಮಣ್ಯ ಕೆ.ಎಂ., ಪಿಡಿಒ, ಕೆಯ್ಯೂರು ಗ್ರಾ.ಪಂ.

ವಾಹನ ಓಡಾಟ ಅಸಾಧ್ಯ
ಮಳೆಗಾಲದಲ್ಲಿ ಈ ಪರಿಸರದ ಯಾವುದೇ ವಾಹನವನ್ನು ಓಡಿಸುವಂತಿಲ್ಲ. ಬಾಡಿಗೆ ವಾಹನಗಳು ತೆರಳಲು ಸಾಧ್ಯವಿಲ್ಲ. ಸೇತುವೆ ನಿರ್ಮಾಣ ಅತಿ ಆವಶ್ಯಕವಾಗಿದೆ. ಜನಪ್ರತಿನಿಧಿಗಳು ಬಗ್ಗೆ ಗಮನ ಹರಿಸಬೇಕು. ಜೀವನ ನಿರ್ವಹಣೆಗೆ ಆಟೋರಿಕ್ಷಾ ಓಡಿಸುವವರು ಇದ್ದು, ಮಳೆಗಾಲದಲ್ಲಿ ಮನೆಯಲ್ಲಿ ಕೂರಬೇಕಾದ ಸ್ಥಿತಿ ಇದೆ.
– ಮಧುಸೂದನ ಭಟ್‌ ಕಜೆಮೂಲೆ ಸ್ಥಳೀಯ ನಿವಾಸಿ

– ಗೋಪಾಲಕೃಷ್ಣ ಸಂತೋಷ್‌ನಗರ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.