ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಯಂತ್ರಣ


Team Udayavani, Jul 9, 2021, 5:00 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಯಂತ್ರಣ

ಬಂಟ್ವಾಳ: ಕೋವಿಡ್‌ ಆತಂಕದ ಮಧ್ಯೆಯೂ ಡೆಂಗ್ಯೂ- ಮಲೇ ರಿಯಾ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಇಳಿದಿರುವುದು ಸಮಾಧಾನಕರ ವಿಚಾರ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಈ ವರ್ಷ ಜೂನ್‌ ಅಂತ್ಯಕ್ಕೆ ಜಿಲ್ಲೆಯಲ್ಲಿ 127 ಡೆಂಗ್ಯೂಹಾಗೂ 356 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದೆ.

ರಾಜ್ಯದಲ್ಲಿ ದ.ಕ.ಜಿಲ್ಲೆಯಲ್ಲೇ ಹೆಚ್ಚಿನ ಮಲೇರಿಯಾ ಪ್ರಕರಣಗಳು ದಾಖ ಲಾಗುತ್ತಿದ್ದು, ಆರೋಗ್ಯ ಇಲಾಖೆಯ ಅಂಕಿಅಂಶವನ್ನು ಗಮನಿಸುವಾಗ ಇಡೀ ಜಿಲ್ಲೆಯಲ್ಲಿ ಮಂಗಳೂರು ನಗ ರವೇ ಮಲೇರಿಯಾಕ್ಕೆ ಹಾಟ್‌ಸ್ಪಾಟ್‌ ಎನಿಸಿಕೊಂಡಿದೆ. ಅಂದರೆ ಈ ವರ್ಷ ಪತ್ತೆಯಾದ ಜಿಲ್ಲೆಯ ಒಟ್ಟು 356 ಮಲೇ ರಿಯಾ ಪ್ರಕರಣಗಳಲ್ಲಿ 329 ಪ್ರಕರ ಣಗಳು ಮನಪಾ ವ್ಯಾಪ್ತಿಯಲ್ಲೇ ಪತ್ತೆಯಾಗಿವೆ. ಈ ವರ್ಷ ಜಿಲ್ಲೆಯಲ್ಲಿ ಡೆಂಗ್ಯೂ ಬಂಟ್ವಾಳದಲ್ಲೇ ಹೆಚ್ಚು ಪತ್ತೆ ಯಾಗಿದೆ.

ಪ್ರಕರಣಗಳ ಸಂಖ್ಯೆ ಇಳಿಕೆ:

ಕಳೆದ 4 ವರ್ಷಗಳ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳನ್ನು ಗಮನಿಸಿದರೆ ಈ ವರ್ಷ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. 2017 ರಲ್ಲಿ 136(ಡೆಂಗ್ಯೂ), 4,741 (ಮಲೇರಿಯಾ), 2018ರಲ್ಲಿ 584 (ಡೆಂಗ್ಯೂ), 3,871(ಮಲೇರಿಯಾ), 2019ರಲ್ಲಿ 1,539(ಡೆಂಗ್ಯೂ), 2,797 (ಮಲೇರಿಯಾ), 2020ರಲ್ಲಿ 239 (ಡೆಂಗ್ಯೂ), 1,397(ಮಲೇರಿಯಾ), 2021(ಜೂನ್‌ವರೆಗೆ) 127(ಡೆಂಗ್ಯೂ), 356(ಮಲೇರಿಯಾ) ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂವಿನಿಂದ 2019ರಲ್ಲಿ 4 ಮಂದಿ ಹಾಗೂ 2020ರಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷ ಈತನಕ ಸಾವಿನ ಪ್ರಕರಣ ದಾಖಲಾಗಿಲ್ಲ.

ತಾಲೂಕುವಾರು ವಿವರ:

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಲೇರಿಯಾ ಪ್ರಕರಣಗಳಿದ್ದು, 2021ರ ಜೂನ್‌ 30ರ ವರೆಗೆ ಮನಪಾ 10 ಡೆಂಗ್ಯೂ, 329 ಮಲೇರಿಯಾ, ಮಂಗಳೂರು ತಾ|(ಮನಪಾ ಹೊರತು) 15 ಡೆಂಗ್ಯೂ, 13 ಮಲೇರಿಯಾ, ಬಂಟ್ವಾಳ 38 ಡೆಂಗ್ಯೂ, 6 ಮಲೇರಿಯಾ, ಪುತ್ತೂರು 28 ಡೆಂಗ್ಯೂ, 2 ಮಲೇರಿಯಾ, ಬೆಳ್ತಂಗಡಿ 13 ಡೆಂಗ್ಯೂ, 6 ಮಲೇರಿಯಾ, ಸುಳ್ಯ 23 ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಿಲ್ಲ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಸುಳ್ಯದಲ್ಲಿ 2017ರಲ್ಲಿ 3 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದು, 2018ರ ಬಳಿಕ ಯಾವುದೇ ಮಲೇರಿಯಾ ಪ್ರಕರಣಗಳು ದಾಖಲಾಗಿಲ್ಲ. ಸಾಮಾನ್ಯವಾಗಿ ಸುಳ್ಯದ ವ್ಯಕ್ತಿ ಮಂಗಳೂರಿಗೆ ಬಂದು ಹೋಗಿದ್ದು, ಆತನಲ್ಲಿ ಮಲೇರಿಯಾ ಪತ್ತೆಯಾಗಿದ್ದರೆ ಅದು ಮಂಗಳೂರಿನ ಲೆಕ್ಕಕ್ಕೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಸುಳ್ಯದಲ್ಲೇ ಹರಡುತ್ತಿರುವ ಮಲೇರಿಯಾ ಕಳೆದ 3 ವರ್ಷಗಳಿಂದ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಕಳೆದ ವರ್ಷ ಹಾಗೂ ಈ ವರ್ಷ ಜಿಲ್ಲೆಯಲ್ಲಿ ಯಾವುದೇ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿಲ್ಲ. 2019ರಲ್ಲಿ ಜಿಲ್ಲೆ ಯಲ್ಲಿ ಒಟ್ಟು 17 ಚಿಕುನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಬೇರೆ ಜಿಲ್ಲೆಗಳಲ್ಲಿ ಚಿಕುನ್‌ಗುನ್ಯಾ ಪ್ರಕರಣಗಳಿದ್ದು, ಅವುಗಳು ನಮ್ಮ ಜಿಲ್ಲೆಯತ್ತ ಬರದಂತೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯವಾಗಿದೆ.

ಆರೋಗ್ಯ ಇಲಾಖೆಯ ಸಂಘಟಿತ ಹೋರಾಟದಿಂದ ಕಳೆದ ಮೂರು ವರ್ಷಗಳಿಂದ ಮಲೇರಿಯಾ ನಿಯಂತ್ರಣದಲ್ಲಿದೆ. ಆದರೆ ಇಡೀ ರಾಜ್ಯಕ್ಕೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆ ಯಾಗುತ್ತಿರುವುದು ಬೇಸರದ ವಿಚಾರ. -ಡಾ| ನವೀನ್‌ಚಂದ್ರ, ಮಲೇರಿಯಾ ನಿಯಂತ್ರಣಾಧಿಕಾರಿ, ದ.ಕ. ಜಿಲ್ಲೆ

 

– ವಿಶೇಷ  ವರದಿ

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.