ಜೀವನದಿಗೆ ಜೀವ ತುಂಬಬೇಕಿದೆ ವರುಣ: ಸತತ 2 ದಿನಗಳ ಮಳೆ ಅವಶ್ಯ

ಅಂತರ್ಜಲ ಮಟ್ಟ ಕುಸಿತ

Team Udayavani, May 17, 2023, 3:22 PM IST

ಜೀವನದಿಗೆ ಜೀವ ತುಂಬಬೇಕಿದೆ ವರುಣ: ಸತತ 2 ದಿನಗಳ ಮಳೆ ಅವಶ್ಯ

ಬೆಳ್ತಂಗಡಿ: ಪಶ್ಚಿಮಘಟ್ಟ ದಿಂದ ಹರಿಯುವ ನದಿಗಳು ಹರಿವು ನಿಲ್ಲಿಸಿದ್ದರಿಂದ ಇತ್ತ ಬೆಳ್ತಂಗಡಿಯಿಂದ ಮಂಗಳೂರಿನವರೆಗೆ ನೀರಿನ ಅಭಾವ ಉಂಟಾಗಿದೆ. ಜತೆಗೆ ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಗೂ ಬೆಳ್ತಂಗಡಿ ತಾಲೂಕಿನ ಮೃತ್ಯುಂಜಯ ಹಾಗೂ ಜೀವನದಿ ನೇತ್ರಾವತಿ ನದಿಗೆ ಜೀವ ತುಂಬಲು ಸಾಧ್ಯವಾಗಿಲ್ಲ.
ನೇತ್ರಾವತಿ ನದಿ ಹಾಗೂ ಮೃತ್ಯುಂಜಯ ನದಿ ಬರಿದಾಗಿ ಕಿಂಡಿ ಅಣೆಕಟ್ಟುಗಳಲ್ಲೂ ನೀರಿಲ್ಲದಂತಾಗಿದೆ. 2019ರ ಬರಗಾಲದ ಬಳಿಕ ಇಷ್ಟೊಂದು ನದಿಗಳು ಬತ್ತಿರುವುದು ಈ ಬಾರಿ ಮಾತ್ರ. ಕಳೆದ ಎರಡು ದಿನಗಳ ಹಿಂದೆ ಚಂಡಮಾರುತದಿಂದ ಉತ್ತಮ ಮಳೆಯಾದರೂ ಹಾನಿಗಳು ಬಿಟ್ಟರೆ ನದಿ ನೀರಿನ ಒಳಹರಿವು ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಶನಿವಾರ ದಿನವಿಡಿ ಮಳೆಯಾದ್ದರಿಂದ ಕೊಂಚ ಹರಿವು ಹೆಚ್ಚಿ ಸಿದ್ದು, ಕಿಂಡಿ ಅಣೆಕಟ್ಟುಗಳಲ್ಲಿ ಒಂದೆರಡು ದಿನ ಹೆಚ್ಚುವರಿ ಬಳಕೆ ಮಾಡುವಷ್ಟು ನೀರು ಸಂಗ್ರಹವಾಗಿರುವುದು ಬಿಟ್ಟರೆ ದೊಡ್ಡ ಪ್ರಯೋಜನವಾಗಿಲ್ಲ.

800, 1,000 ಅಡಿ
ತಲುಪುತ್ತಿದೆ ಕೊಳವೆ ಬಾವಿ
ತಾಲೂಕಿನಲ್ಲಿ 10ರಿಂದ 15 ಸಾವಿರಕ್ಕೂ ಮಿಕ್ಕಿ ಕೊಳವೆಬಾವಿಗಳಿವೆ. ಇರುವ ಕೊಳವೆ ಬಾವಿ ಅಂತರ್ಜಲ ಮಟ್ಟ ಪಾತಾಳಕ್ಕೆ ಇಳಿದಿದೆ. ಹೊಸ ಕೊಳವೆಬಾವಿ ತೆಗೆಯಲು ಮುಂದಾದ ಮಂದಿಗೆ ಮತ್ತೂಂದು ಶಾಕ್‌ ನೀಡುತ್ತಿದೆ. ಈ ಬೇಸಗೆಯಲ್ಲಿ ನೀರು ಸಿಕ್ಕರೆ ಶಾಶ್ವತವಾಗಿ ನೀರು ಸಿಗಬಹುದೆಂಬ ನಿರೀಕ್ಷೆಯಲ್ಲಿ ಕೊಳವೆ ಬಾವಿ ಕೊರೆದರೆ 800 ಅಡಿಗಳವರೆಗೆ ತಲುಪಿದರೂ ಹನಿ ನೀರು ಸಿಗುತ್ತಿಲ್ಲ. ಇದು ಭೂ ವಿಜ್ಞಾನಿಗಳಿಗೂ ಆತಂಕ ಮೂಡಿಸಿದೆ. ಅತ್ತ ನದಿಯೂ ಬತ್ತಿರುವುದರಿಂದ ಕೃಷಿಕರಿಗೆ ಹೊಡೆತ ಬಿದ್ದಿದೆ.

ಕಳೆದ ನಾಲ್ಕಾರು ದಿನಗಳಿಂದ ಬೆಳ್ತಂಗಡಿ ತಾಲೂಕು ಹಾಗೂ ಪಶ್ಚಿಮಘಟ್ಟದಲ್ಲಿ ಹರಿವ ನದಿ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಸುರಿದ ಮಳೆಯ ಪರಿಣಾಮ ನೀರಿನ ಹರಿವು ಆರಂಭವಾಗಿದೆ. ನೇತ್ರಾವತಿ ಮೃತ್ಯುಂಜಯ ಸೇರುವ ಪಜಿರಡ್ಕದಲ್ಲಿ ಕೊಂಚ ನೀರು ಶೇಖರಣೆಯಾಗಿದೆ. ಇದರಿಂದ ಆನಂಗಳ್ಳಿ, ಕಡಂಬಳ್ಳಿ, ಮುಂಡಾಜೆ, ಕಾಪು ಮೊದಲಾದ ಪರಿಸರಗಳಲ್ಲಿರುವ ಕಿಂಡಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಸುಧಾರಣೆ ಕಂಡಿದೆ. ಸುಮಾರು ಒಂದು ತಿಂಗಳಿನಿಂದ ಕೃಷಿ ತೋಟಗಳಿಗೆ ಕಿಂಡಿ ಅಣೆಕಟ್ಟಿನ ನೀರಿನ ವ್ಯವಸ್ಥೆ ಇರಲಿಲ್ಲ. ಆದರೆ ಈಗ ಇವು ತುಂಬಿದ ಪರಿಣಾಮ ನದಿ ಸಮೀಪದ ಕೃಷಿ ತೋಟಗಳನ್ನು ತಲುಪಿದೆ.

ಎರಡು ದಿನಗಳ ಮಳೆ ಅವಶ್ಯ
ನೇತ್ರಾವತಿ ನದಿಗೆ ಹೆಚ್ಚಿನ ಬಲವನ್ನು ನೀಡುವ ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾದಲ್ಲಿ ಪಜಿರಡ್ಕದಿಂದ ತಗ್ಗು ಪ್ರದೇಶಗಳಲ್ಲಿ ನೇತ್ರಾವತಿ ನದಿಯ ಹರಿವಿನಲ್ಲೂ ಹೆಚ್ಚಳವಾಗುತ್ತದೆ. ಇದು ಜಿಲ್ಲೆಯ ನಾನಾ ಭಾಗಗಳ ಮೂಲಕ ಹರಿಯುವ ನೇತ್ರಾವತಿ ನದಿ ನೀರಿನ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ ಮಂಗಳೂರು ನಗರಕ್ಕೆ ರೇಶನಿಂಗ್‌ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸುವುದನ್ನು ತಪ್ಪಿಸಲಿದೆ. ಇದಕ್ಕೆ ಸತತ ಎರಡು ದಿನಗಳ ಮಳೆ ಅತ್ಯವಶ್ಯವಾಗಿದೆ.

ಬೆಳ್ತಂಗಡಿ ನಗರದಲ್ಲಿ ಬೋರ್‌ವೆಲ್‌ ಆಶ್ರಯ
ಬೆಳ್ತಂಗಡಿ ಪಟ್ಟಣಕ್ಕೆ 13 ಬೋರ್‌ವೆಲ್‌ ಸಹಿತ ಸೋಮಾವತಿ ನದಿ ನೀರನ್ನು ಬಳಸಲಾಗುತ್ತಿತ್ತು. ಕಳೆದ ಎರಡು ವಾರಗಳಿಂದ ನದಿ ನೀರು ಬಳಕೆ ಮಾಡುತ್ತಿಲ್ಲ. ನಗರದಲ್ಲಿ ಗೃಹ, ವಾಣಿಜ್ಯ, ಕಚೇರಿ ಸೇರಿ 11 ವಾರ್ಡ್‌ಗಳಲ್ಲಿ 1,820 ನಳ್ಳಿ ನೀರಿನ ಸಂಪರ್ಕವಿದೆ. ಪ್ರತಿ ದಿನ 1.05 ಎಂ.ಎಲ್‌.ಡಿ. (10.50 ಲಕ್ಷ ಲೀಟರ್‌) ನೀರಿನ ಆವಶ್ಯಕತೆ ಯಿದೆ. ನಗರಕ್ಕೆ 13 ಕೊಳವೆ ಬಾವಿ ಹಾಗೂ ನದಿ ನೀರಿನ ಬದಲಿಗೆ ಹೆಚ್ಚುವರಿ 4 ಕೊಳವೆಬಾವಿಯನ್ನು ನೆಚ್ಚಿಕೊಂಡಿದೆ. ಬೆಳಗ್ಗೆ 6ಗಂಟೆ ಯಿಂದ ರಾತ್ರಿ 10.30ರವರೆಗೆ ನೀರು ಸರಬರಾಜು ಮಾಡಲಾಗು ತ್ತಿದೆ ಎಂದು ನ.ಪಂ. ಎಂಜಿನಿಯರ್‌ ಮಹಾವೀರ ಆರಿಗ ತಿಳಿಸಿದ್ದಾರೆ.

ಜಾಗೃತಿ ಕಾರ್ಯಕ್ರಮ
ನೀರಿನ ಮರುಪೂರಣಕ್ಕೆ ಪರಿಣಾಮಕಾರಿ ಆದ್ಯತೆ ನೀಡಿದ್ದು ಒಂದೆಡೆಯಾದರೆ ಮಳೆ ದಿನಗಳು ಕಡಿಮೆಯಾಗಿದೆ. ಕಡಿಮೆ ದಿನದಲ್ಲಿ ಹೆಚ್ಚು ಮಳೆ ಸುರಿದರೂ ಮರುಪೂರಣವಾಗದೆ ಸಮುದ್ರ ಸೇರುತ್ತಿದೆ. ಹಿಂದೆ ಗದ್ದೆ ಬೇಸಾಯ ನೀರಿನ ಶೇಖರಣೆಯ ಮೂಲವಾಗಿತ್ತು. ಈ ಕುರಿತು ಸರಕಾರ ಸಾಕಷ್ಟು ಜಾಗೃತಿ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗಿದೆ.
-ಶೇಖ್‌ ದಾವೂದ್‌,
ಹಿರಿಯ ಭೂ ವಿಜ್ಞಾನಿ, ಅಂತರ್ಜಲ ನಿರ್ದೇಶನಾಲಯ, ಜಿಲ್ಲಾ ಕಚೇರಿ, ಮಂಗಳೂರು

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.