ಗುಣಮಟ್ಟದ ಸೇವೆಯಿದ್ದರೂ ಶೇ. 50ಕ್ಕಿಂತಲೂ ಹೆಚ್ಚು ಹುದ್ದೆ ಖಾಲಿ

 ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆ

Team Udayavani, Nov 3, 2019, 4:31 AM IST

nn-31

ಬಂಟ್ವಾಳ: ಸರಕಾರಿ ಆಸ್ಪತ್ರೆಗಳು ಮೇಲ್ದರ್ಜೆ ಗೇರಿದಾಗ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ. ಆದರೆ ಅಲ್ಲಿ ವೈದ್ಯರು-ಸಿಬಂದಿ ಕೊರತೆ ಇದ್ದರೆ ಸೌಲಭ್ಯ ಗಳಿದ್ದೂ ಪ್ರಯೋಜನ ಇಲ್ಲದಂತಾಗುತ್ತದೆ. ಪ್ರಸ್ತುತ ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ ಸ್ಥಿತಿ ಅದೇ ಆಗಿದ್ದು, ಶೇ. 50ಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಇವೆ.

ಬಂಟ್ವಾಳ ಸಾರ್ವಜನಿಕ ಆಸ್ಪತ್ರೆ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಜತೆಗೆ ಗುಣ ಮಟ್ಟದ ಸೇವೆ ಲಭ್ಯವಾಗುತ್ತಿದೆ. ಆದರೆ ಪ್ರಸ್ತುತ ಆಸ್ಪತ್ರೆಗೆ ವೈದ್ಯರು, ಸಿಬಂದಿ ಕೊರತೆ ಕಾಡುತ್ತಿದ್ದು, ಇರುವವರು ಒತ್ತಡದಿಂದಲೇ ಕಾರ್ಯ ನಿರ್ವಹಿಸ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಶಾಸಕರ ಭರವಸೆ
ಅ. 30ರಂದು ಸರಕಾರಿ ಆಸ್ಪತ್ರೆಯ ಆವರಣ ದಲ್ಲಿ ಜರಗಿದ ಆ್ಯಂಬುಲೆನ್ಸ್‌ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಸಚಿವ ರಿಗೆ ಹುದ್ದೆಗಳ ಭರ್ತಿ ಕುರಿತು ಮನವಿ ಮಾಡಿದ್ದಾರೆ. ಜತೆಗೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರೂ ಶಾಸಕರಿಗೆ ಮನವಿ ನೀಡಿದ್ದು, ಹುದ್ದೆ ಗಳ ಭರ್ತಿ ಜತೆಗೆ ಸೌಲಭ್ಯ ಒದಗಿಸಲು ಶಾಸಕರು ಭರವಸೆ ನೀಡಿದ್ದಾರೆ.

ಹುದ್ದೆಗಳಲ್ಲಿ ಖಾಲಿ ಎಷ್ಟು? ಭರ್ತಿ ಎಷ್ಟು?
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹುದ್ದೆ ಭರ್ತಿ ಯಿದ್ದು, ಫಿಜಿಶಿಯನ್‌, ಮಕ್ಕಳ ತಜ್ಞ ಹಾಗೂ ಅರಿವಳಿಕೆ ತಜ್ಞರ ತಲಾ ಒಂದೊಂದು ಹುದ್ದೆಗಳಲ್ಲಿ ಮೂರು ಕೂಡಾ ಖಾಲಿ ಇದೆ. ಕೀಲು ಮೂಳೆ ತಜ್ಞರ ಒಂದು ಹುದ್ದೆ ಸದ್ಯಕ್ಕೆ ಭರ್ತಿಯಿದ್ದರೂ ಈ ವೈದ್ಯರು ಇದೇ ತಿಂಗಳು ನಿವೃತ್ತರಾಗಲಿದ್ದಾರೆ.

ಕಣ್ಣಿನ ತಜ್ಞರು, ಇಎನ್‌ಟಿ ತಜ್ಞರು, ಜನರಲ್‌ ಸರ್ಜನ್‌, ಸ್ತ್ರಿರೋಗ ತಜ್ಞರು, ಹಿರಿಯ ದಂತ ಆರೋಗ್ಯಾಧಿಕಾರಿ, ಎಸ್‌ಎಂಒ, ಸಹಾಯಕ ಆಡಳಿತಾಧಿ ಕಾರಿ, ಶುಶ್ರೂಷಕ ಅಧೀಕ್ಷಕರು ದರ್ಜೆ- 2ರ ತಲಾ ಒಂದೊಂದು ಹುದ್ದೆಗಳಲ್ಲಿ ಎಲ್ಲವೂ ಭರ್ತಿ ಯಾಗಿದೆ. ಕಚೇರಿ ಅಧೀಕ್ಷಕರು ಹಾಗೂ ಹಿರಿಯ ಪ್ರಯೋಗಶಾಲಾ ತಂತ್ರಜ್ಞ, ಹಿರಿಯ ಫಾರ್ಮಸಿಸ್ಟ್‌, ನೇತ್ರಾಧಿಕಾರಿ ತಲಾ ಒಂದೊಂದು ಹುದ್ದೆಗಳಲ್ಲಿ ನಾಲ್ಕು ಕೂಡಾ ಖಾಲಿ ಇವೆ.

ಆಸ್ಪತ್ರೆಗೆ ಮಂಜೂರಾಗಿರುವ 20 ಶುಶ್ರೂಷಕರ ಹುದ್ದೆಗಳಲ್ಲಿ ಎಲ್ಲವೂ ಭರ್ತಿ ಇದೆ. ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಒಂದು ಹುದ್ದೆ ಭರ್ತಿ ಇದೆ. ಕಿರಿಯ ಫಾರ್ಮಸಿಸ್ಟ್‌, ಪ್ರಥಮದರ್ಜೆ ಸಹಾ ಯಕ, ದ್ವಿತೀಯದರ್ಜೆ ಸಹಾಯಕ ತಲಾ ಎರ ಡೆರಡು ಹುದ್ದೆಗಳಲ್ಲಿ ಎಲ್ಲವೂ ಖಾಲಿ ಇವೆ. ಎಕ್ಸ್‌ರೇ ತಂತ್ರಜ್ಞರು, ವಾಹನ ಚಾಲಕರ ತಲಾ ಎರಡೆರಡು ಹುದ್ದೆಗಳಲ್ಲಿ ಒಂದೊಂದು ಮಾತ್ರ ಭರ್ತಿಯಾಗಿದೆ.

ಕ್ಲರ್ಕ್‌ ಕಂ ಟೈಪಿಸ್ಟ್‌ ಹಾಗೂ ಅಡುಗೆಯವರ ತಲಾ ಒಂದೊಂದು ಹುದ್ದೆಗಳಲ್ಲಿ ಎರಡೂ ಖಾಲಿ ಇವೆ. ಗ್ರೂಪ್‌ “ಡಿ’ 32 ಹುದ್ದೆಗಳಲ್ಲಿ ಬರೋಬ್ಬರಿ 30 ಖಾಲಿಯಿದ್ದು, ಇದರ ಒತ್ತಡ ನಿರ್ವಹಣೆಗೆ 15 ಮಂದಿ ಹೊರಗುತ್ತಿಗೆಯ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹುದ್ದೆಗಳು ಭರ್ತಿಯಾಗಲಿ
ಆಸ್ಪತ್ರೆಗೆ ಮಂಜೂರಾಗಿರುವ ಒಟ್ಟು 82 ಹುದ್ದೆಗಳಲ್ಲಿ ಹಾಲಿ 35 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, 47 ಹುದ್ದೆಗಳು ಖಾಲಿ ಇವೆ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವರದಿ ಪ್ರಕಾರ ಆಸ್ಪತ್ರೆಯಲ್ಲಿ ಮಾಸಿಕ 17 ಸಾವಿರ ಹೊರರೋಗಿಗಳು, 1 ಸಾವಿರ ಒಳರೋಗಿಗಳು ಸೇವೆ ಪಡೆದುಕೊಳ್ಳುತ್ತಿ ದ್ದಾರೆ. ಇನ್ನಷ್ಟು ಸೇವೆ ಲಭಿಸಲು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಜರಗಿಸಬೇಕಿದೆ.

 ಸಿಬಂದಿ ಭರ್ತಿ ಜತೆಗೆ ಸೌಲಭ್ಯಕ್ಕೆ ಕ್ರಮ
ಪ್ರಸ್ತುತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಸೇವೆ ಲಭ್ಯವಾಗುತ್ತಿದ್ದು, ವೈದ್ಯರು, ಸಿಬಂದಿಯ ಭರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಮನವಿ ಮಾಡಲಾಗಿದೆ. ಶೀಘ್ರದಲ್ಲಿ ಸಿಬಂದಿ ಭರ್ತಿಯ ಜತೆಗೆ ಇತರ ಸೌಲಭ್ಯಗಳನ್ನೂ ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು.
 - ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಶಾಸಕರು

-  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.