ತ್ಯಾಜ್ಯ ಎಸೆಯುವವರ ಪತ್ತೆಗೆ ಕೆಮರಾ ಬಳಕೆಗೆ ನಿರ್ಣಯ

ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಸಭೆ

Team Udayavani, Jun 2, 2020, 5:10 AM IST

ತ್ಯಾಜ್ಯ ಎಸೆಯುವವರ ಪತ್ತೆಗೆ ಕೆಮರಾ ಬಳಕೆಗೆ ನಿರ್ಣಯ

ಉಪ್ಪಿನಂಗಡಿ: ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹಿಡನ್‌ ಕೆಮರಾ ಬಳಸಿ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರವಾಯಿತು.

ಪಂಚಾಯತ್‌ ಸಾಮಾನ್ಯ ಸಭೆಯು ಕೆರೆಮೂಲೆ ಅಬ್ದುಲ್‌ ರಹಿಮಾನ್‌ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಂಗಣದಲ್ಲಿ ಜರಗಿತು.

ಸಭೆ ಆರಂಭವಾಗುತ್ತಿದ್ದಂತೆ ಕೆಲವು ಸದಸ್ಯರು, ಕುಮಾರಧಾರಾ ನದಿ ಸಮೀಪದ ಹೆದ್ದಾರಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಸೆದು ಅನಾರೋಗ್ಯಕ್ಕೆ ಪೂರಕವಾದ ವಾತಾವರಣ ಉಂಟುಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅಧ್ಯಕ್ಷರನ್ನು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಒಂದನೇ ವಾರ್ಡ್‌ ಸದಸ್ಯರಾದ ಯು.ಟಿ.ಮಹಮ್ಮದ್‌ ತೌಸಿಫ್, ಈ ಬಗ್ಗೆ ಚರ್ಚೆ ಬೇಡ. ಕೂಡಲೇ ಹಿಡನ್‌ ಕೆಮರಾ ಬಳಸಿ ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಿ ದಂಡ ವಸೂಲು ಮಾಡಬೇಕು. ಆ ದಂಡದ ಮೊತ್ತದಲ್ಲಿ ಕೆಮರಾದ ವೆಚ್ಚವನ್ನು ಸರಿದೂಗಿಸಬೇಕು ಎಂದಾಗ ಸರ್ವಸದಸ್ಯರು ಒಪ್ಪಿಗೆ ಸೂಚಿಸಿದರು.

ಬಳಿಕ ಹಿರಿಯ ಸದಸ್ಯರಾದ ಸುರೇಶ ಅತ್ರಮಜಲು ಮಾತನಾಡಿ, ಐದು ವರ್ಷಗಳ ಹಿಂದೆ ಪಂಚಾಯತ್‌ ಕಚೇರಿಯ ಹಿಂಭಾಗ ಹಾಗೂ ಹೊಸ ಬಸ್ಸು ನಿಲ್ದಾಣದ ಬಳಿ ಇದ್ದ ಬೆಲೆಬಾಳುವ ಸಾಗುವಾನಿ ಮರಗಳು ಎಲ್ಲಿ ಹೋದವು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಮರಗಳನ್ನು ಅರಣ್ಯ ಇಲಾಖೆಯ ಡಿಪೋಗೆ ಸಾಗಿಸಲಾಗಿದೆ ಎಂದರು.

ಮೂರನೇ ವಾರ್ಡ್‌ ಸದಸ್ಯ ಚಂದ್ರಶೇಖರ ಮಡಿವಾಳ ಮಾತನಾಡಿ, ಅಲುಗುರಿ ಮಜಲು ಕಡುಬಡವ ನಿವಾಸಿಗಳು ಕೊಳವೆ ಬಾವಿ ಪಂಪು ಕೆಟ್ಟು ಹೋಗಿ ನೀರಿಗಾಗಿ ಪರದಾಡುತ್ತಿದ್ದಾರೆ. ಅಂಥವರಿಗೆ ಮೂಲ ಸೌಕರ್ಯ ಒದಗಿಸಬೇಕು ಹಾಗೂ ಗ್ರಾಮದ ಒಳಚರಂಡಿಗಳನ್ನು ಮಳೆಗಾಲಕ್ಕೆ ಮುನ್ನವೇ ದುರಸ್ತಿಪಡಿಸಬೇಕು ಎಂದು ಆಗ್ರಹಿಸಿದರು. ಸದಸ್ಯ ಗೋಪಾಲ ಹೆಗ್ಡೆ ಮಾತನಾಡಿ, ಬ್ಯಾಂಕ್‌ ರಸ್ತೆಯ ಅಂಚೆ ಕಚೇರಿ ಬಳಿ ತಳ್ಳುಗಾಡಿಗಳು ಸಹಿತ ಕೆಲವು ವ್ಯಾಪಾರಿಗಳು ರಸ್ತೆಯನ್ನು ಅತಿಕ್ರಮಿಸಿದ್ದು, ತೆರವುಗೊಳಿಸುವಂತೆ ಕೇಳಿಕೊಂಡರು. ಅವುಗಳನ್ನು ತೆರವುಗೊಳಿಸಲು ಕೂಡಲೇ ಸ್ಥಳದಲ್ಲಿದ್ದ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ಹಳೆ ಬಸ್‌ ನಿಲ್ದಾಣದ ಬಳಿಯಿಂದ ನಟ್ಟಿಬೈಲ್‌ಗೆ ತೆರಳುವ ಪಂಚಾಯತ್‌ ಕಾಲುದಾರಿಯನ್ನು ಖಾಸಗಿಯವರು ಅತಿಕ್ರಮಿಸುತ್ತಿರುವ ಬಗ್ಗೆಯೂ ಸದಸ್ಯರು ಸಭೆಯ ಗಮನಕ್ಕೆ ತಂದರು.

ಗ್ರಾಮ ಪಂಚಾಯತ್‌ 15ನೇ ಹಣಕಾಸು ಯೋಜನೆಗೆ ಸಂಬಂಧಿಸಿದಂತೆ 45 ಲ.ರೂ. ಮತ್ತು ವರ್ಗ-2ರಂತೆ ತುರ್ತು ಕೆಲಸಗಳಿಗೆ ಸಂಬಂಧಿಸಿ 15 ಲ.ರೂ.ಗೆ ಸರಕಾರದ ಮಾರ್ಗಸೂಚಿಯಂತೆ ಗ್ರಾಮ ಪಂಚಾಯತ್‌ ತುರ್ತು ಕ್ರಿಯಾ ಯೋಜನೆ ಮಾಡಿ ನಿರ್ಣಯ ಅಂಗೀಕರಿಸಿತು.

ಗ್ರಾ.ಪಂ. ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ, ತಾ. ಪಂ. ಸದಸ್ಯೆ ಸುಜಾತಾಕೃಷ್ಣ ಆಚಾರ್ಯ, ಗ್ರಾಮ ಪಂಚಾಯತ್‌ ಸದಸ್ಯರಾದ ಯು.ಕೆ. ಇಬ್ರಾಹಿಂ, ಸುರೇಶ್‌ ಅತ್ರಮಜಲು, ಗೋಪಾಲ ಹೆಗ್ಡೆ, ಚಂದ್ರಶೇಖರ ಮಡಿವಾಳ, ಸುನಿಲ್‌ ಕುಮಾರ್‌, ಯು.ಟಿ. ತೌಸೀಫ್, ರಮೇಶ್‌ ಭಂಡಾರಿ ಮಾತನಾಡಿದರು. ಉಮೇಶ್‌ ಗೌಡ, ವಿನಾಯಕ ಪೈ, ಚಂದ್ರಾವತಿ ಹೆಗ್ಡೆ, ಸುಂದರಿ, ಭಾರತಿ, ಚಂದ್ರಾವತಿ, ಯೋಗಿನಿ, ಸುಶೀಲಾ, ಜಮೀಲಾ ಉಪಸ್ಥಿತರಿದ್ದರು.

ಪಿಡಿಒ ವಿಲ್ಫೆಡ್‌ ರೋಡ್ರಿಗಸ್‌ ಸ್ವಾಗತಿಸಿ, ಕಾರ್ಯದರ್ಶಿ ಉಸ್ಮಾನ್‌ ವಂದಿಸಿದರು. ಲೆಕ್ಕಾಧಿಕಾರಿ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.

ಅನಧಿಕೃತ ಅಂಗಡಿ ತೆರವಿಗೆ ನಿರ್ಣಯ
ಪೇಟೆಯಲ್ಲಿ ಮತ್ತಷ್ಟು ಅನಧಿಕೃತ ಅಂಗಡಿಗಳು, ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹಣ್ಣು ಮಾರಾಟ, ಮೀನು ಮಾರಾಟ ಮಾಡುವಂಥದ್ದು ನಡೆಯುತ್ತಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೂ ತೊಂದರೆ ಆಗುತ್ತಿದೆ. ತೆರಿಗೆ ಪಾವತಿಸಿ ವ್ಯಾಪಾರ ಮಾಡುವವರಿಗೂ ನಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಅನಧಿಕೃತ ವ್ಯಾಪಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯ ವನ್ನು ಅಂಗೀಕರಿಸಲಾಯಿತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.