ತಂಬುತ್ತಡ್ಕ -ನುಳಿಯಾಲು ರಸ್ತೆಯಲ್ಲಿ ಕುಸಿಯುತ್ತಿದೆ ಮೋರಿ
Team Udayavani, Sep 27, 2018, 1:01 PM IST
ನಿಡ್ಪಳ್ಳಿ : ಇಲ್ಲಿಯ ವಿಜಯನಗರ ತಂಬುತ್ತಡ್ಕ ನುಳಿಯಾಲು ತೆರಳುವ ಜಿಲ್ಲಾ ಪಂಚಾಯತ್ ರಸ್ತೆಯ ದೇವಸ್ಯ ಎಂಬಲ್ಲಿ ತಿರುವಿನಲ್ಲಿರುವ ಮೋರಿಯೊಂದು ಕುಸಿಯುವ ಭೀತಿಯಲ್ಲಿದ್ದು ತತ್ಕ್ಷಣ ದುರಸ್ತಿಗೊಳಿಸುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಈ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಹಿತ ಅನೇಕ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಅಲ್ಲದೆ ಶಾಲಾ ಮಕ್ಕಳ ವಾಹನಗಳು, ರಿಕ್ಷಾ ಮೊದಲಾದ ವಾಹನಗಳು ಸಂಚರಿಸುತ್ತಿದ್ದು ಮೋರಿ ಅಪಾಯದ ಸ್ಥಿತಿಯಲ್ಲಿದೆ. ಇದರ ಬಗ್ಗೆ ಗ್ರಾಮ ಪಂಚಾಯತ್ ಸಭೆಯಲ್ಲಿ ಗಮನಕ್ಕೆ ತರಲಾಗಿದೆ. ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಗಮನಕ್ಕೂ ತರಲಾಗಿದೆ. ಆದರೂ ಈ ಬಗ್ಗೆ ಈವರೆಗೂ ಯಾವುದೇ ರೀತಿಯ ಸ್ಪಂದನೆ ಸಿಗದಿರುವುದು ಈ ಭಾಗದ ಜನರಿಗೆ ಬೇಸರ ತಂದಿದೆ. ಇನ್ನಷ್ಟು ಅಪಾಯ ಎದುರಾಗುವ ಮೊದಲು ಇದನ್ನು ಸಂಬಂಧಪಟ್ಟವರು ಗಮನಿಸಿ, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ದುರಸ್ತಿಗೆ ಕ್ರಮ
ಈಗಾಗಲೇ ಇದರ ಬಗ್ಗೆ ಗಮನ ನೀಡಲಾಗಿದೆ. ಅಪಾಯದ ಸ್ಥಿತಿಯಲ್ಲಿರುವುದರಿಂದ ತಾಲೂಕು ಪಂಚಾಯತ್ ವತಿಯಿಂದ ದುರಸ್ತಿಗೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು.
– ಹರೀಶ್ ಬಿಜತ್ರೆ
ಅಧ್ಯಕ್ಷರು, ಸ್ಥಾಯೀ ಸಮಿತಿ,
ಪುತ್ತೂರು ತಾ.ಪಂ
ಗಮನಕ್ಕೆ ತರಲಾಗಿದೆ
ಮೋರಿಯ ಅಪಾಯದ ಬಗ್ಗೆ ಈಗಾಗಲೇ ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೆ ತಾ.ಪಂ. ಗಮನಕ್ಕೂ ತರಲಾಗಿದೆ. ಘನ ವಾಹನಗಳ ಸಂಚಾರ ಇರುವುದರಿಂದ ಸಂಬಂಧಿಸಿದ ಇಲಾಖೆ ತತ್ಕ್ಷಣ ದುರಸ್ತಿ ಗೊಳಿಸಬೇಕೆಂಬುದು ನಮ್ಮ ಬೇಡಿಕೆ.
- ಮುರಳೀಕೃಷ್ಣ ಮುಂಡೂರು
ನಿತ್ಯ ಪ್ರಯಾಣಿಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ