ಚಿಗುರೊಡೆದ ಬೇಡಿಕೆ ಈಡೇರಿಕೆ ಕನಸು

ನಾಳೆ ಮಂಡೆಕೋಲಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Team Udayavani, Oct 14, 2022, 2:28 PM IST

16

ಸುಳ್ಯ: ಮಂಡೆಕೋಲು ಗ್ರಾಮದಲ್ಲಿ ಆರ್‌ಟಿಸಿಯಲ್ಲಿ ಸರಕಾರಿ ಜಾಗವೆಂದು ದಾಖಲಾಗಿದ್ದರೂ ಕೆಲಸ ಕಾರ್ಯಕ್ಕೆ ಮುಂದಾಗುವ ವೇಳೆ ಅರಣ್ಯ ಇಲಾಖೆ ಆಕ್ಷೇಪದಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದ್ದು, ಶನಿವಾರ (ಅ.15ರಂದು) ಮಂಡೆಕೋಲಿನಲ್ಲಿ ನಡೆಯುವ ದ.ಕ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಮಸ್ಯೆಗೆ ಪರಿಹಾರ ಸಿಗಬಹುದು ಎಂದು ಮಂಡೆಕೋಲು ಗ್ರಾಮದ ಜನರು ಕಾಯುತ್ತಿದ್ದಾರೆ.

ತಾಲೂಕು ಕೇಂದ್ರದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಮಂಡೆ ಕೋಲು ಗ್ರಾಮ ಕೇರಳದ ರಾಜ್ಯದ ಕಾಸರಗೋಡು ಜಿಲ್ಲೆ ಹಾಗೂ ದ.ಕ. ಗಡಿ ಭಾಗದ ಗ್ರಾಮ. ಬಹುತೇಕ ಪ್ರದೇಶ ಅರಣ್ಯ ಪ್ರದೇಶದಿಂದ ಕೂಡಿದ್ದು, ಅಭಿವೃದ್ಧಿ ಹೊಂದುತ್ತಿದ್ದರೂ, ಇನ್ನಷ್ಟು ಬೇಡಿಕೆಗಳು ಗ್ರಾಮಸ್ಥರಲ್ಲಿ ಇವೆ. ಈ ಗ್ರಾಮ ಕೃಷಿ ಇಲ್ಲಿನ ಪ್ರಮುಖ ಬೆಳೆ. ಧಾರ್ಮಿಕ ಆಚರಣೆಯಲ್ಲೂ ಮಂಡೆಕೋಲು ವಿಶೇಷವಾಗಿ ಗುರುತಿಸಿಕೊಂಡಿದೆ. ಅಷ್ಟೇ ಅಲ್ಲ. ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಅವರ ಹುಟ್ಟೂರು ಕೂಡಾ.

ಅರಣ್ಯ ಇಲಾಖೆ ಆಕ್ಷೇಪ: ಅಭಿವೃದ್ಧಿಗೆ ತೊಡಕು

ಮಂಡೆಕೋಲು ಗ್ರಾ.ಪಂ.ನಲ್ಲಿ ಸರಕಾರಿ ಜಾಗವಿದ್ದರೂ ಅಭಿವೃದ್ಧಿಗೆ ಅರಣ್ಯ ಇಲಾಖೆಯ ಆಕ್ಷೇಪ ಇರುವುದು ತೊಡಕಾಗಿದೆ. ಗ್ರಾಮದಲ್ಲಿ ಸುಮಾರು 65 ಎಕ್ರೆ ಸರಕಾರಿ ಜಾಗ ಇದೆ ಎನ್ನುತ್ತಾರೆ ಗ್ರಾ. ಪಂ.ನವರು. ಇದು ಭಾಗಶಃ ಅರಣ್ಯದಲ್ಲಿದ್ದು, ಅರಣ್ಯ ಇಲಾಖೆಯ ಜಾಗ ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದರಿಂದಾಗಿ ಗ್ರಾ.ಪಂ. ತನ್ನ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಜಾಗಗಳನ್ನು ಕಾದಿರಿಸಿದ್ದರೂ, ಅರಣ್ಯ ಇಲಾಖೆಯ ಆಕ್ಷೇಪದಿಂದ ಅಭಿವೃದ್ಧಿಗೆ ತೊಡಕಾಗಿದೆ. ಈ ಬಗ್ಗೆ ಸಮಸ್ಯೆ ಪರಿಹಾರಕ್ಕೆ ಈ ಮೊದಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಗಿದ್ದು, ಪೂರಕ ಕ್ರಮದ ಭರವಸೆ ದೊರೆತಿದೆ. ಕಾರ್ಯಗತವಾಗಿಲ್ಲ. ಅರಣ್ಯ ಇಲಾಖೆ ಸಮಸ್ಯೆಯಿಂದ ಕೆಲವು ಭಾಗದ ಜನರಿಗೆ ಅಕ್ರಮ ಸಕ್ರಮದಲ್ಲೂ ಜಾಗ ದೊರೆಯುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಅಲೆದಾಟ, ಕಿರಿಕಿರಿ

ಮಂಡೆಕೋಲಿನ ಮುರೂರು ಎಂಬಲ್ಲಿ ಹಿಂದೆ ಅರಣ್ಯ ಚೆಕ್‌ ಪೋಸ್ಟ್‌ ಇದ್ದು, ಇದೀಗ ಪೊಲೀಸ್‌ ಚೆಕ್‌ ಪೋಸ್ಟ್‌ ಕಾರ್ಯಚರಿಸುತ್ತಿದೆ. ಮಂಡೆಕೋಲಿನ ಜನರು ಈ ರಸ್ತೆಯಲ್ಲಿ ಸಂಚಾರದಲ್ಲಿ ತಪಾಸಣೆ ನೆಪದಲ್ಲಿ ಕಿರಿಕಿರಿ ಅನುಭವಿಸಬೇಕಾಗಿದೆ ಎಂಬ ದೂರು ಗ್ರಾಮಸ್ಥರದ್ದು. ಈ ಚೆಕ್‌ ಪೋಸ್ಟ್‌ ಮಂಡೆಕೋಲಿನ ಗಡಿ ಭಾಗ ಪರಪ್ಪೆ ಎಂಬಲ್ಲಿ ಆದಲ್ಲಿ ಒಳಿತು ಎಂಬುದು ಆಗ್ರಹ. ಪರಪ್ಪೆ-ಪಂಜಿಕಲ್ಲು ತೂಗುಸೇತುವೆ ಸಂಪರ್ಕ ಅಂತರ್‌ ರಾಜ್ಯ ರಸ್ತೆಯಲ್ಲಿ ಅಪಘಾತ ನಡೆದಲ್ಲಿ ಸುಳ್ಯ ಠಾಣೆಯಲ್ಲಿ ದೂರು ದಾಖ ಲಾದರೂ ಆದೂರು ಠಾಣೆಗೆ ಪ್ರಕರಣ ವರ್ಗಾ ವಣೆಗೊಂಡು ಸಮಸ್ಯೆ ಯಾಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು.

ಇತರ ಬೇಡಿಕೆ

ಸಮರ್ಪಕ ನೆಟ್‌ ವರ್ಕ್‌, ಕಾಡು ಪ್ರಾಣಿಗಳ ಹಾವಳಿ ತಡೆ, ಸರಿಯಾದ ವಿದ್ಯುತ್‌, ಉಪ ಆರೋಗ್ಯ ಕೇಂದ್ರ, ಕುಡಿಯುವ ನೀರು ಸೇರಿ ವಿವಿಧ ಬೇಡಿಕೆ ಮುಂದಿಡುತ್ತಿದ್ದಾರೆ.

ರಸ್ತೆ, ಸೇತುವೆ ಬೇಡಿಕೆ

ಮಂಡೆಕೋಲು ಗ್ರಾಮದ ಮುರೂರು-ಮಂಡೆಕೋಲು ಸಂಪರ್ಕದಲ್ಲಿ ತೋಡೊಂದಕ್ಕೆ ಸೇತುವೆ ನಿರ್ಮಾಣಗೊಂಡಿದ್ದರೂ ಇಲ್ಲಿ ಸುಮಾರು 1 ಕಿ.ಮೀ. ರಸ್ತೆ ತೀರಾ ಹದಗೆಟ್ಟಿದೆ. ಇದು ಕಾಸರಗೋಡು, ಜಾಲೂÕರು ಸಂಪರ್ಕ ರಸ್ತೆಯಾಗಿದೆ. ಮಂಡೆಕೋಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಂಪರ್ಕಿಸುವ 2 ಕಿ.ಮೀ. ರಸ್ತೆ ಅಭಿವೃದ್ಧಿಯಾಗಬೇಕಿದೆ. ಕಲ್ಲಡ್ಕ ಪರಪ್ಪೆ ಎಂಬಲ್ಲಿನ ಕಾಲನಿ ಸಂಪರ್ಕಿಸುವಲ್ಲಿ ಕಾಯರ್ತೋಡಿ ಎಂಬಲ್ಲಿಗೆ ಸೇತುವೆ ಬೇಡಿಕೆ ಈಡೇರದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಮಂಡೆಕೋಲು-ಮೈತಡ್ಕ ಸಂಪರ್ಕ ರಸ್ತೆ, ಪೇರಾಲು-ಮೈತಡ್ಕ ಸಂಪರ್ಕ ರಸ್ತೆ ಅಭಿವೃದ್ದಿಯಾಬೇಕಿದೆ. ಇದರ ಜತೆಗೆ ಗ್ರಾಮದ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಯ ಬೇಡಿಕೆ ಇದೆ. ರಸ್ತೆ ಅಭಿವೃದ್ಧಿಗೊಳಿಸುವಂತೆ ಇತ್ತೀಚೆಗೆ ಚುನಾವಣೆ ಬಹಿಷ್ಕಾರಕ್ಕೂ ಇಲ್ಲಿನವರು ಮುಂದಾಗಿದ್ದರು. ಆಗ ಅಭಿವೃದ್ಧಿ ಭರವಸೆ ನೀಡಲಾಗಿದ್ದು ಅದು ಶೀಘ್ರ ಅನುಷ್ಠಾನಕ್ಕೆ ಬರಬೇಕಾಗಿದೆ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.