Dharmasthala; ರಾಮನ ಹೆಸರು ಉಸಿರಾಗಬೇಕು: ಹೇಮಾವತಿ ಹೆಗ್ಗಡೆ

ಧರ್ಮಸ್ಥಳದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Team Udayavani, Jan 22, 2024, 11:35 PM IST

Dharmasthala; ರಾಮನ ಹೆಸರು ಉಸಿರಾಗಬೇಕು: ಹೇಮಾವತಿ ಹೆಗ್ಗಡೆ

ಬೆಳ್ತಂಗಡಿ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯ ಮೌಲ್ಯ ಹಾಗೂ ನೈತಿಕ ಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಮನ -ಮನೆಗಳಲ್ಲಿ ಸ್ಥಿರವಾಗಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆ ಹೇಳಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಜ. 22ರಂದು ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿನ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್‌ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು. ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.