ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ
Team Udayavani, Dec 6, 2021, 4:18 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮಂಡಳಿಯ ಸೇವಾ ಬಯಲಾಟದ ತಿರುಗಾಟ ಡಿ. 5ರಂದು ಬೆಳಗ್ಗೆ ಕ್ಷೇತ್ರದ ಶ್ರೀ ಛತ್ರ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಕ್ಷೇತ್ರದ ಸಕಲ ಗೌರವದೊಂದಿಗೆ ಶ್ರೀ ಮಹಾಗಣಪತಿಯನ್ನು ಮೆರವಣಿಗೆ ಯಲ್ಲಿ ಶ್ರೀ ಮಂಜುಕೃಪಾ ಮಣೆಗಾರರ ಮನೆಗೆ ಕರೆತಂದು ಅಲ್ಲಿ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ ನಡೆಯಿತು.
ಮಧ್ಯಾಹ್ನ ಮೇಳದ ಶ್ರೀ ಮಹಾ ಗಣಪತಿಯನ್ನು ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನ ಸೇವಾ ಬಯಲಾಟದ ಶಿಬಿರಕ್ಕೆ ಬೀಳ್ಕೊಡಲಾಯಿತು. ಈ ಸಂದರ್ಭ ಹೇಮಾವತಿ ವೀ. ಹೆಗ್ಗಡೆ, ಮೇಳದ ಯಜಮಾನರಾದ ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಮಣೆಗಾರ್ ವಸಂತ ಮಂಜಿತ್ತಾಯ, ಮೇಳದ ಮ್ಯಾನೇಜರ್ ಗಿರೀಶ್ ಹೆಗ್ಡೆ, ಪುಷ್ಪರಾಜ ಶೆಟ್ಟಿ, ಪ್ರಮುಖರಾದ ಸೀತಾರಾಮ ತೋಳ್ಪಡಿತ್ತಾಯ, ಬಿ. ಭುಜಬಲಿ, ಎ.ವೀರು ಶೆಟ್ಟಿ, ಪಾರುಪತ್ಯೆಗಾರ್ ಲಕ್ಷ್ಮೀನಾರಾಯಣ ರಾವ್, ಯಕ್ಷಗಾನ ಮೇಳದ ಕಲಾವಿದರು ಉಪಸ್ಥಿತರಿದ್ದರು.
ಇದನ್ನೂ ಓದಿ:ದೇಶೀಯ ಡ್ರೋನ್ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್ ಶಾ ಘೋಷಣೆ
6 ವರ್ಷಗಳಿಂದ ಕಾಲಮಿತಿ (ಸಂಜೆ 7ರಿಂದ 12) ಯಕ್ಷಗಾನ ಪ್ರದರ್ಶನ ನೀಡಲಾಗುತ್ತಿದೆ. ಕಲಾವಿದರಿಗೆ ವಿಶ್ರಾಂತಿ, ಆರೋಗ್ಯ ರಕ್ಷಣೆ ಹಾಗೂ ವೃತ್ತಿ-ಪ್ರವೃತ್ತಿಯಲ್ಲಿ ಹೆಚ್ಚಿನ ಸಾಧನೆ ಮಾಡಲು ಕಾಲಮಿತಿ ಪ್ರದರ್ಶನದಿಂದ ಅನುಕೂಲಕರವಾಗಿದೆ ಎಂದು ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪತ್ತನಾಜೆ ವರೆಗೆ ಸಂಚಾರ
ಡಿ. 4ರ ವರೆಗೆ ಧರ್ಮಸ್ಥಳ ಕ್ಷೇತ್ರದಲ್ಲೇ ಸೇವಾ ಹರಕೆ ಬಯಲಾಟ ಪ್ರದರ್ಶನಗಳು ನಡೆದಿದ್ದವು. ಡಿ. 5ರಂದು ಮಂಗಳೂರಿನಲ್ಲಿ ಪ್ರದರ್ಶನದೊಂದಿಗೆ ತಿರುಗಾಟ ಆರಂಭಗೊಂಡಿದೆ. ಮುಂದಿನ ಪತ್ತನಾಜೆ ವರೆಗೆ ಮೇಳವು ಕರಾವಳಿ, ದಕ್ಷಿಣೋತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಲಮಿತಿಯಲ್ಲಿ ಪೌರಾಣಿಕ ಪ್ರಸಂಗದ ಮೂಲಕ ಪ್ರದರ್ಶಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?