ರಾಜ್ಯದ 3,100 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ

Team Udayavani, May 16, 2022, 10:46 PM IST

ರಾಜ್ಯದ 3,100 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

ಬೆಳ್ತಂಗಡಿ: ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ ಪ್ರಸ್ತುತ ವರ್ಷ 3,100 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆ ಎಂದು ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ ತಿಳಿಸಿದರು.

ರಾಜ್ಯದಲ್ಲಿ ಸುಮಾರು 10.41 ಲಕ್ಷ ವಿಶೇಷ ಚೇತನರಿದ್ದಾರೆ ಎಂಬ ಮಾಹಿತಿಯಿದೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವೈಕಲ್ಯ ಸಮಸ್ಯೆಗಳು ಇದ್ದರೆ, ಇನ್ನು ಕೆಲವರಿಗೆ ದುರದೃಷ್ಟವಶಾತ್‌ ಅಪಘಾತಗಳು,
ಮಾರಕರೋಗಗಳಿಂದ ಬರುತ್ತವೆ. ಗಂಭೀರ ಸಮಸ್ಯೆಯಿರುವ ವಿಶೇಷ ಚೇತನರ ಪಾಲನೆ -ಪೋಷಣೆ ಕಷ್ಟಕರ. ಇವರ ಯೋಗಕ್ಷೇಮ ನೋಡುವುದಕ್ಕಾಗಿಯೇ ಮನೆಯಲ್ಲಿ ಒಂದೆರಡು ಮಂದಿ ಇರಬೇಕಿದೆ. ಮುಖ್ಯವಾಗಿ ಸ್ನಾನ, ಶೌಚ, ಊಟೋಪಚಾರಗಳನ್ನು ಸ್ವಯಂ ಮಾಡಿಕೊಳ್ಳಲು ಸಾಧ್ಯವಾಗದ ಎಷ್ಟೋ ಮಂದಿ ಇತರರ ಅವಲಂಬನೆಯಲ್ಲಿ ಬದುಕಬೇಕಿದೆ. ಮನೆಯಿಂದ ಹೊರ ಹೋಗಲಾರದೆ, ಮಲಗಿದಲ್ಲೇ ಇರುವ ವಿಶೇಷ ಚೇತನರ ಬದುಕಂತೂ ಅತ್ಯಂತ ಶೋಚನೀಯವಾಗಿರುತ್ತದೆ. ನಿತ್ಯ ಕೂಲಿ ಮಾಡಿ ಬದುಕುವ ಎಷ್ಟೋ ಕುಟುಂಬಗಳು ಇದರಿಂದಾಗಿ ಆರ್ಥಿಕ ಸಂಕಷ್ಟವನ್ನಷ್ಟೇ ಎದುರಿಸುವುದಲ್ಲದೆ ಮಾನಸಿಕವಾಗಿಯೂ ನೊಂದಿರುತ್ತಾರೆ.
ಇದನ್ನರಿತ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಇವರಿಗಾಗಿ ವಿವಿಧ ಉಚಿತ ಸಲಕರಣೆಗಳನ್ನು ನೀಡುವ “ಜನಮಂಗಲ’ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ.

ಇದರಡಿ ಹಾಸಿಗೆ ಹಿಡಿದವರಿಗೆ ಹುಣ್ಣು (ಬೆಡ್‌ ಸೋರ್‌) ಆಗದಂತೆ ನೀರು ಹಾಸಿಗೆ (ವಾಟರ್‌ ಬೆಡ್‌), ಅಪಘಾತಕ್ಕೊಳಗಾಗಿ ನಡೆದಾಡಲು ಸಾಧ್ಯವಿಲ್ಲದವರಿಗೆ ಓಡಾಡಲು ಗಾಲಿಕುರ್ಚಿ (ವೀಲ್‌ ಚಯರ್‌), ಏಕ ಕಾಲಿನ ಕೈಗೋಲು (ಸಿಂಗಲ್‌ ಲೆಗ್‌ ವಾಕಿಂಗ್‌ ಸ್ಟಿಕ್‌), ಮೂರುಕಾಲಿನ ಕೈಗೋಲು (ತ್ರಿಲೆಗ್‌ ವಾಕಿಂಗ್‌ ಸ್ಟಿಕ್‌), ಹಾಸಿಗೆ ಹಿಡಿದ ರೋಗಿಗಳಿಗೆ ಸ್ನಾನಕ್ಕೆ, ಶೌಚಕ್ಕೆ ಹೋಗಲು ಗಾಲಿಕುರ್ಚಿ (ಕಮೋಡ್‌ ವೀಲ್‌ ಚಯರ್‌), ಅಪ ಘಾತ ಕ್ಕೊಳಗಾದವರಿಗೆ ಊರುಗೋಲು (ಆಕ್ಸಿಲರಿ ಕ್ರಚಸ್‌), ಸ್ಟ್ರೋಕ್‌ (ಪ್ಯಾರಾಲಿಸಿಸ್‌)ಗೆ ತುತ್ತಾದವರಿಗೆ ನಡುಗೋಲು ವಿತರಿಸಲಾಗುತ್ತಿದೆ.

ಈ ಎಲ್ಲ ಸಲಕರಣೆಗಳನ್ನು ಉಚಿತವಾಗಿ ನೀಡುತ್ತಿದ್ದು, ವಿಶೇಷ ಚೇತನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆಯಲ್ಲದೇ ಸಲಕರಣೆಗಳ ಬಳಕೆಯ ಕುರಿತಂತೆ ಸಂಸ್ಥೆಯ ಕಾರ್ಯಕರ್ತರು ವಿವರಿಸಿ ಮಾಹಿತಿ ನೀಡುತ್ತಾರೆ. ಪ್ರಸ್ತುತ ವರ್ಷವು ಸುಮಾರು 3,100 ಸಲಕರಣೆಗಳನ್ನು ವಿತರಿಸಿದ್ದು, ಇದುವರೆಗೆ ಒಟ್ಟು 13,200 ಸಲಕರಣೆ ಗಳನ್ನು ಉಚಿತವಾಗಿ ವಿತರಿಸಲಾಗಿದೆ. ಈ ಸಲಕರಣೆಗಳಿಂದಾಗಿ ವಿಶೇಷ ಚೇತನರ ದೈನಂದಿನ ಬದುಕಿನಲ್ಲಿ ಕನಿಷ್ಠ ಸಹಾಯವಾದರೂ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಲು ಸಾಧ್ಯವಾಗಬಹುದೆಂಬುದು ನಮ್ಮ ನಂಬಿಕೆಯಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.